Homeಮುಖಪುಟಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಹೈದ್ರಾಬಾದ್ ಕರ್ನಾಟಕದ ಮೇಲೆ ನಡೆಯುತ್ತಿದೆ ನಿರಂತರ ವಂಚನೆ : ಡಾ.ರಝಾಕ ಉಸ್ತಾದ

ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಪ್ರಶ್ನಿಸುತ್ತಿದ್ದಾರೆ ಹೈ.ಕ ದ ಹೋರಾಟಗಾರರಾದ ಡಾ.ರಝಾಕ ಉಸ್ತಾದ್‌..

- Advertisement -
- Advertisement -

ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಜ್ಯದ ಈಶಾನ್ಯ ಭಾಗದಲ್ಲಿದ್ದು, ಕನ್ನಡ ಭಾಷೆ ಮಾತನಾಡುವ ಜನರಿಂದ ಆವೃತವಾಗಿರುವ ಈ ಪ್ರದೇಶವು 1724 – 1948ರ ವರೆಗೆ ಹೈದ್ರಾಬಾದ ನಿಜಾಮರ ಆಳ್ವಿಕೆಯಲ್ಲಿ ಇತ್ತು. 1948 ರಲ್ಲಿ ಭಾರತ ಒಕ್ಕೂಟದಲ್ಲಿ ವಿಲೀನಗೊಳಿಸಿದ ನಂತರ ಈ ಪ್ರದೇಶವು 1956ರ ವರೆಗೆ ಹೈದ್ರಾಬಾದ ರಾಜ್ಯದ ಭಾಗವಾಗಿತ್ತು. ಹೈದ್ರಾಬಾದ ಕರ್ನಾಟಕ ಪ್ರದೇಶವು ಬೀದರ್, ಕಲಬುರಗಿ, ಯಾದಗೀರ್, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳು ಹಾಗೂ ಬಳ್ಳಾರಿ ಜಿಲ್ಲೆ ಸೇರಿಕೊಂಡು ಇರುತ್ತದೆ. ಹೈದ್ರಾಬಾದ ಕರ್ನಾಟಕ ಪ್ರದೇಶವು ರಾಷ್ಟ್ರದ ಎರಡನೆಯ ಅತೀ ದೊಡ್ಡ ಶುಷ್ಕ ಪ್ರದೇಶವಾಗಿರುತ್ತದೆ.

ಹೈದ್ರಾಬಾದ ಕರ್ನಾಟಕ ಪ್ರದೇಶದ ಭೌಗೋಳಿಕ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಭೌಗೋಳಿಕ ವಿಸ್ತೀರ್ಣದ ಪ್ರತಿಶತ 23 ರಷ್ಟಿರುತ್ತದೆ. ಪ್ರದೇಶದ ಸಾಗುವಳಿಯಾಗದ ಕೇತ್ರದ ವಿಸ್ತೀರ್ಣವು ರಾಜ್ಯದ ಒಟ್ಟಾರೆ ಸಾಗುವಳಿಯಾಗದ ವಿಸ್ತೀರ್ಣದ ಪ್ರತಿಶತ 23 ರಷ್ಟಿದೆ. ಪ್ರದೇಶದ ಜನಸಂಖ್ಯೆಯು ರಾಜ್ಯದ ಜನಸಂಖ್ಯೆಯ ಪ್ರತಿಶತ 18 ರಷ್ಟಿರುತ್ತದೆ, ರಾಜ್ಯದ ಪರಿಶಿಷ್ಟ ಜಾತಿಯವರ ಜನಸಂಖ್ಯೆಯ ಪೈಕಿ ಪ್ರತಿಶತ 24 ರಷ್ಟಿದೆ, ಪರಿಶಿಷ್ಟ ವರ್ಗದವರ ಜನಸಂಖ್ಯೆಯ ಪೈಕಿ ಪ್ರತಿಶತ 34 ರಷ್ಟಿದೆ, ರಾಜ್ಯದ ಸಾಕ್ಷರತೆ ಪ್ರಮಾಣ ಪ್ರತಿಶತ 75.36 ರ ಎದುರು ಪ್ರದೇಶದ ಸಾಕ್ಷರತಾ ಪ್ರಮಾಣವು ಪ್ರತಿಶತ 64.45 ರಷ್ಟಿದೆ.

ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ರ ತಿದ್ದುಪಡಿಗಾಗಿ ಹಲವು ದಶಕಗಳ ಕಾಲ ಈ ಪ್ರದೇಶದ ಜನತೆ ನಿರಂತರ ಹೋರಾಟ ಮಾಡಿದ್ದು ಈಗ ಇತಿಹಾಸ. ದಶಕಗಳ ಬೇಡಿಕೆಗೆ ಸ್ಪಂದಿಸಿದ ಅಂದಿನ ಯುಪಿಎ ಸರಕಾರ 2012ರ ಡಿಸೆಂಬರ್ ತಿಂಗಳಲ್ಲಿ ಸಂವಿಧಾನದ ಅನುಚ್ಛೇದ 371ಕ್ಕೆ ತಿದ್ದುಪಡಿ ತಂದು ಕರ್ನಾಟಕ ರಾಜ್ಯದ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಅನುಚ್ಛೇದ 371ಜೆ ಅಡಿಯಲ್ಲಿ ಸೇರಿಸಲಾಗಿದೆ. ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಜನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡಲಾಗಿದೆಯಲ್ಲದೇ ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಮಂಡಳಿ ರಚಿಸಲು ಅವಕಾಶ ಮಾಡಿಕೊಡಲಾಗಿದೆ.

ಅದರಂತೆ, 2013 ನವೆಂಬರ್ ತಿಂಗಳಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಆದೇಶ, 2013ರ ಕಾಯ್ದೆಯ ಮೂಲಕ ಈ ಪ್ರದೇಶದಲ್ಲಿ ಮಂಡಳಿ ರಚಿಸಲಾಗಿದೆ. 2013-14ನೇ ಸಾಲಿನ ಸೀಮಿತ ಅವಧಿಗೆ 150 ಕೋ.ರೂ. ಅನುದಾನ ನೀಡಿ ಮಂಡಳಿ ಪ್ರಾರಂಭಿಸಲಾಗಿದೆ. 2014-15ನೇ ಸಾಲಿನಲ್ಲಿ ಬಜೆಟ್ ಮೂಲಕ 600 ಕೋ.ರೂ. ಅನುದಾನ ನಿಗದಿಗೊಳಿಸಲಾಗಿದೆ ಮತ್ತು 24-11-2014ರಂದು ಗುಲ್ಬರ್ಗಾದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಶೇಷವಾಗಿ 400 ಕೋ.ರೂ. ಅನುದಾನ ಒದಗಿಸಲಾಗಿದೆ, ಅಂದರೆ 2014-15 ನೇ ಸಾಲಿಗೆ ಒಟ್ಟು 1000 ಕೋ.ರೂ. ಅನುದಾನ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಲಾಗಿದೆ. ಅದರಂತೆ 2015-16 ಹಾಗೂ 2016-17ನೇ ಸಾಲಿನ ಬಜೆಟ್‍ನಲ್ಲಿ 1000 ಕೋ.ರೂ. ಅನುದಾನ ಮಂಡಳಿಗೆ ನೀಡಲಾಗಿದೆ. ನಂತರ 2017-18ನೇ ಸಾಲಿನಿಂದ 2019-20ರ ವರೆಗೆ ಪ್ರತಿ ಬಜೆಟ್‍ನಲ್ಲಿ ಸುಮಾರು 1500 ಕೋ.ರೂ. ಅನುದಾನ ಘೋಷಣೆ ಮಾಡಲಾಗಿದೆ.

ಆದರೆ ಸರಕಾರದ ಆರ್ಥಿಕ ವರದಿ 2019-20ನೇ ಸಾಲಿನ ವರದಿಯಲ್ಲಿ 2017-18, 2018-19 ನೇ ಸಾಲಿನಲ್ಲಿ ಕೇವಲ 1000 ಕೋ.ರೂ. ಅನುದಾನ ನೀಡಿರುವ ಮಾಹಿತಿ ನೀಡಿದ್ದು, ಯಾವುದು ಸತ್ಯ, ಯಾವುದು ಸುಳ್ಳು ಎನ್ನುವದು ತಿಳಿಯದಂತ ಪರಿಸ್ಥಿತಿ ಒದಗಿಬಂದಿದೆ. ಸಿದ್ದರಾಮಯ್ಯ ಸರಕಾರ ಹಾಗೂ ಕುಮಾರಸ್ವಾಮಿಯವರ ಸರಕಾರ ಈ ಭಾಗದಲ್ಲಿ ಇಂದಿಗೂ ನಾವು 1500 ಕೋ.ರೂ ಅನುದಾನ ನೀಡಿದ್ದೇವೆ ಎಂದೆ ಪ್ರತಿಪಾದಿಸುತ್ತ ಬಂದಿದ್ದಾರೆ. ಆದರೆ, ಅವರದೇ ಸರಕಾರದ ವರದಿ ಬೇರೆಯದ್ದೇ ಮಾಹಿತಿ ನೀಡುತ್ತಿದೆ. ಇದು ಹೈದ್ರಾಬಾದ ಕರ್ನಾಟಕದ ಜನತೆಗೆ ಮಾಡಿದ ವಂಚನೆ ಎಂದೇ ಹೇಳಬಹುದು.

ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೀಡಿದ ಮಾಹಿತಿಯಂತೆ ಕಳೆದ ಆರು ವರ್ಷಗಳಲ್ಲಿ ಮಂಡಳಿಗೆ ಹಂಚಿಕೆಯಾದ ಅನುದಾನ 6612.63 ಕೋ.ರೂ., ಸರಕಾರ ತನ್ನ ಆರ್ಥಿಕ ವರದಿಯಲ್ಲಿ ನೀಡಿದ ಅನುದಾನ ಒಟ್ಟು 6253.50 ಕೋ.ರೂ. ಅನುದಾನ ಮಂಜೂರು ಮಾಡಲಾಗಿದೆ. ಆದರೆ, ಕಳೆದ 6 ವರ್ಷಗಳಿಂದ ಬಜೆಟ್‍ನಲ್ಲಿ ಘೋಷಿಸಿದಂತೆ ಮತ್ತು ಗುಲ್ಬರ್ಗಾದಲ್ಲಿ ನಡೆದ 24-11-2014ರ ಸಚಿವಸಂಪುಟದ ನಿರ್ಣಯದ 400 ಕೋ.ರೂ. ಅನುದಾನ ಸೇರಿದಂತೆ ಸುಮಾರು 7650 ಕೋ.ರೂ ಅನುದಾನ ಮಂಡಳಿಗೆ ಹಂಚಿಕೆಯಾಗಬೇಕು. ಆದರೆ, ಯಾವುದೇ ಒಂದು ಸರಕಾರ ತನ್ನದೇ ರಾಜ್ಯದ ಒಂದು ಪ್ರದೇಶದ ಜನರಿಗೆ ಇಷ್ಟೊಂದು ಅನ್ಯಾಯ ಮಾಡಿದೆ ಎಂದರೆ ನಿಜವಾಗಿಯೂ ಇದು ಪ್ರಜಾಪ್ರಭುತ್ವ ಸರಕಾರವೇ ಎಂದು ಕೇಳಬೇಕೆನಿಸಿದೆ.

ಮಂಡಳಿ ನೀಡುತ್ತಿರುವ ಮಾಹಿತಿಗೂ ಸರಕಾರ ಬಜೆಟ್‍ನಲ್ಲಿ ಘೋಷಿಸಿದ ಮಾಹಿತಿಗೂ ಸಾಕಷ್ಟು ವ್ಯತ್ಯಾಸ ಈಗಾಗಲೇ ಗೊಂದಲ ಮೂಡಿಸಿದ ನಡುವೆ ಸರಕಾರದ ಆರ್ಥಿಕ ವರದಿ ಇನ್ನೂ ಅಚ್ಚರಿ ಮೂಡಿಸುವ ಅಂಶವನ್ನು ಗಮನಿಸಿದಲ್ಲಿ ಉದ್ದೇಶಪೂರ್ವಕ ಗೊಂದಲ ಸೃಷ್ಟಿಸಲಾಗಿದೆ.

ಕೋಷ್ಠಕದಲ್ಲಿ ವಿವರಿಸಿರುವಂತೆ ರೀತಿ ಸರಕಾರವೇ ಇಷ್ಟೊಂದು ಮೋಸ ಮಾಡುತ್ತಿರುವದರ ಜೊತೆಗೆ ಕಳೆದ ಜುಲೈ 2019ರಿಂದ ಇಲ್ಲಿಯವರೆಗೆ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಿಸದೇ ಇಲ್ಲಿಯವರೆಗೆ ಮಂಡಳಿಯ ಯಾವುದೇ ಸಭೆ ನಡೆಯಲು ಸಾದ್ಯವಾಗದ ರೀತಿ ಸರಕಾರ ನಡೆದುಕೊಂಡಿದೆ, ಈ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿರುವದರಿಂದ ಸರಕಾರ ಕಾಗದದಲ್ಲಿ ಮಾತ್ರ ಕಲ್ಯಾಣ ಮಾಡಲು ಹೋಗುತ್ತಿರುವದು ನಾಚಿಕೆಗೇಡಿನ ಸಂಗತಿ. ಒಂದು ಇಡೀ ಆರ್ಥಿಕ ವರ್ಷಕ್ಕೆ ಮಂಡಳಿಗೆ ಅಧ್ಯಕ್ಷರಿಲ್ಲದಂತಾಗಿ ಅಭಿವೃದ್ಧಿ ವೇಗ ಕುಂಠಿತಗೊಂಡಿದೆ. ಇದರ ನಡುವೆ ಸರಕಾರ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರನ್ನು ಆ ಭಾಗದ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ಇರುವದನ್ನು ತಿದ್ದುಪಡಿ ಮಾಡಿ ಮಂಡಳಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಆ ಭಾಗದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಒಬ್ಬರು ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಎಂಟು ಜನ ಶಾಸಕರು ಹಾಗೂ ರಾಜ್ಯ ಹಿರಿಯ ಅಧಿಕಾರಿಗಳು ಆ ಮಂಡಳಿಗೆ ಸದಸ್ಯರಾಗಿರುತ್ತಾರೆ. ಇಂತಹ ಮಂಡಳಿಗೆ ಸಾಕಷ್ಟು ಚರ್ಚಿಸಿ, ಈ ಭಾಗದ ಜನರೊಂದಿಗೆ ಸಭೆ-ಚರ್ಚೆ-ಸಂವಾದ ನಡೆಸಿ, ಸಂಘ ಸಂಸ್ಥೆಗಳೊಂದಿಗೆ, ಹೋರಾಟಗಾರರ ಜೊತೆಗೆ ಚರ್ಚಿಸಿ ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧ್ದಿ ಮಂಡಳಿ ಕಾಯ್ದೆಯಲ್ಲಿ ಅವಕಾಶ ಮಾಡಲಾಗಿದೆ. ಯಾರೊಂದಿಗೂ ಚರ್ಚಿಸದೇ ಏಕಾಏಕೀ ಯಾರೊಂದಿಗೂ ಚರ್ಚಿಸದೇ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವದು ಈ ಪ್ರದೇಶದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಮಂಡಳಿ ದುರ್ಬಲವಾಗಿ 1991 ರಿಂದ 2013 ರ ವರೆಗೆ ಇದ್ದಂತಹ ಮಂಡಳಿಯ ತರಹ ಇದೂ ಕೂಡ ಆಗುತ್ತದೆ ಎನ್ನುವ ಭಾವನೆ ಜನರಲ್ಲಿ ಮೂಡಿದೆ.

ಈ ಮಂಡಳಿ ಕಳೆದ ಏಳು ವರ್ಷಗಳಲ್ಲಿ ಶಿಕ್ಷಣಕ್ಕಾಗಿ 1519.00 ಕೋ.ರೂ, ಆರೋಗ್ಯ ಕ್ಷೇತ್ರಕ್ಕೆ 316.00 ಕೋ.ರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಕ್ಕೆ 87.00 ಕೋ.ರೂ, ರಸ್ತೆ ಮತ್ತು ಸೇತುವೆಗಳಿಗೆ 3650.00 ಕೋ.ರೂ ಹಾಗೂ ಸಾಮಾಜಿಕ ಕ್ಷೇತ್ರದ ಅಭಿವೃದ್ಧಿಗೆ 253.00 ಕೋ.ರೂ ಅನುದಾನ ಖರ್ಚು ಮಾಡಲಾಗಿದೆ. ವಿಶೇಷವೆನೆಂದರೆ, ಕಲ್ಯಾಣ ಕರ್ನಾಟಕ ಪ್ರದೇಶವು ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ಮಕ್ಕಳು ಅಪೌಷ್ಟಿಕತೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಹಿಂದುಳಿದಿರುವದರಿಂದ ಅಂತಹ ಕ್ಷೇತ್ರಗಳನ್ನು ಗುರುತಿಸಿ ಮಂಡಳಿಯು ಯೋಜನೆ ರೂಪಿಸಬೇಕಿತ್ತು, ಆದರೆ ಮಂಡಳಿಯ ಕಾರ್ಯಕ್ರಮಗಳು ಈ ಭಾಗದಲ್ಲಿ ಕಾಂಕ್ರೀಟ ರಸ್ತೆ ನಿರ್ಮಿಸುವದರಲ್ಲಿಯೇ ಆಸಕ್ತಿವಹಿಸಿರುವದು ಅತ್ಯಂತ ಚಿಂತೆಗೀಡುಮಾಡುತ್ತಿದೆ. ಈ ಭಾಗದ ಪ್ರಗತಿಪರರು, ಹೋರಾಟಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಈ ಪ್ರದೇಶದ ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸದೇ ಇದ್ದರೆ ಖಂಡಿತವಾಗಿಯೂ ಮಂಡಳಿಯು ಈ ಭಾಗದ ಅಭಿವೃದ್ದಿ ಶ್ರಮಿಸುತ್ತದೆ ಎನ್ನುವ ವಿಶ್ವಾಸ ಜನರಲ್ಲಿ ಮೂಡಿಸುವುದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...