Homeಅಂತರಾಷ್ಟ್ರೀಯಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

"ಚೀನಾವನ್ನು ಸಂಪೂರ್ಣವಾಗಿ ನಂಬಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ನಡೆಯುತ್ತಿರುವ ಮಾತುಕತೆಗಳ ಬಗ್ಗೆ ಸಚಿವರು ತಮ್ಮ ಹೇಳಿಕೆಗಳಲ್ಲಿ ಜಾಗರೂಕರಾಗಿದ್ದಾರೆ" ಎಂದು ಮಾಜಿ ರಾಜತಾಂತ್ರಿಕರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಚೀನಾ-ಭಾರತದ ಗಡಿ ಉದ್ವಿಗ್ನತೆಯನ್ನು ಬಗೆಹರಿಸಲು ಉಭಯ ದೇಶಗಳು ಮಾತುಕತೆ ನಡೆಸುತ್ತಿವೆ, ಅದು ನಮ್ಮ ಮತ್ತು ಚೀನಾದ ನಡುವಿನ ಗೌಪ್ಯತೆಯ ವಿಷಯ” ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಗುರುವಾರ ಹೇಳಿದ್ದಾರೆ.

“ಚರ್ಚೆಗಳು ನಡೆಯುತ್ತಿವೆ. ಏನು ನಡೆಯುತ್ತಿದೆ ಎಂಬುದು ನಮ್ಮ ಮತ್ತು ಚೀನಿಯರ ನಡುವಿನ ಗೌಪ್ಯವಾದ ಸಂಗತಿಯಾಗಿದೆ. ಇದನ್ನು ಪೂರ್ವಗ್ರಹಪೀಡಿತಗೊಳಿಸಲು ನಾನು ಬಯಸುವುದಿಲ್ಲ” ಎಂದು ಬ್ಲೂಮ್‌ಬರ್ಗ್ ಇಂಡಿಯಾ ಎಕನಾಮಿಕ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಾಸ್ತವಿಕ ಗಡಿರೇಖೆಯ ಉದ್ದಕ್ಕೂ ಅಭೂತಪೂರ್ವ ಸೈನ್ಯವನ್ನು ನಿರ್ಮಿಸಲಾಗಿದೆ. ಬೆಳೆಯುತ್ತಿರುವ ಉಭಯ ದೇಶಗಳು ಸಮತೋಲನವನ್ನು ಕಂಡುಕೊಳ್ಳಬಹುದೇ? ಈಗ ಗಡಿಯಲ್ಲಿ ನೀವು ನೋಡುತ್ತಿರುವುದು ನಿಜಕ್ಕೂ ಸವಾಲಿನ ಅಭಿವ್ಯಕ್ತಿಯಾಗಿದೆ” ಎಂದು ವಿದೇಶಾಂಗ ಸಚಿವರು ಹೇಳಿದರು.

ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಮ್ಮ ಆಂತರಿಕ ವಿಷಯಗಳ ಕುರಿತು ಚೀನಾ ಮಾತನಾಡಬಾರದು:

ಗಡಿಯಲ್ಲಿ ಶಾಂತಿ ಕಾಪಾಡುವುದಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳು ಸರಣಿ ಒಪ್ಪಂದಗಳಿಗೆ ಸಹಿ ಹಾಕಿದ ನಂತರ, 1993 ರಿಂದ ಚೀನಾ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸಿದೆ. ಶಾಂತಿ ಮತ್ತು ನೆಮ್ಮದಿ ಖಾತ್ರಿಪಡಿಸದಿದ್ದಾಗ ಮತ್ತು ಸಹಿ ಹಾಕಿದ ಒಪ್ಪಂದಗಳನ್ನು ಗೌರವಿಸದಿದ್ದರೆ, ಇದೇ ಅಡ್ಡಿಪಡಿಸುವಿಕೆಗೆ ಪ್ರಾಥಮಿಕ ಕಾರಣವಾಗುತ್ತದೆ” ಎಂದು ಜೈಶಂಕರ್ ಹೇಳಿದರು.

“ಚೀನಾವನ್ನು ಸಂಪೂರ್ಣವಾಗಿ ನಂಬಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ನಡೆಯುತ್ತಿರುವ ಮಾತುಕತೆಗಳ ಬಗ್ಗೆ ಸಚಿವರು ತಮ್ಮ ಹೇಳಿಕೆಗಳಲ್ಲಿ ಜಾಗರೂಕರಾಗಿದ್ದಾರೆ” ಎಂದು ಮಾಜಿ ರಾಜತಾಂತ್ರಿಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ಪಡೆಗಳಿಂದಲೇ ಪ್ರಚೋದನೆ- ಗಾಳಿಯಲ್ಲಿ ಗುಂಡು ಹಾರಿಸಿದ್ದವು: ಭಾರತದ ಪ್ರತ್ಯುತ್ತರ

“ಭಾರತದ ಕೆಡೆಯಿಂದ ಹಾಗೂ ಅರುಣಾಚಲ ಪ್ರದೇಶದಿಂದ ಅಕ್ರಮವಾಗಿ ರೂಪಿಸಾಲದ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಚೀನಾ ಪರಿಗಣಿಸುವುದಿಲ್ಲ. ಗಡಿ ಪ್ರದೇಶದ ಉದ್ದಕ್ಕೂ ಸೇನಾ ಉದ್ವಿಗ್ನತೆಯ ಉದ್ದೇಶದಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯನ್ನು ನಾವು ವಿರೋಧಿಸುತ್ತೇವೆ” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದರು.

ಗಡಿ ಪ್ರದೇಶದಲ್ಲಿ ಸರಣಿಯಾಗಿ ನೂತನ ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ ಹಿನ್ನೆಲೆಯಲ್ಲಿ ಚೀನಾ ಈ ಹೇಳಿಕೆ ನೀಡಿದೆ.

ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್, “ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಹಾಗೂ ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ. ಭಾರತದ ಆಂತರಿಕ ವಿಷಯಗಳ ಬಗ್ಗೆ ಹೇಳಿಕೆ ನೀಡಲು ಚೀನಾಕ್ಕೆ ಹಕ್ಕಿಲ್ಲ. ಅರುಣಾಚಲ ಪ್ರದೇಶದ ಬಗ್ಗೆ ಕೂಡಾ ನಮ್ಮ ನಿಲುವನ್ನು ಈಗಾಗಲೆ ಹಲವು ಬಾರಿ ಹೇಳಿದ್ದೇವೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಹಾಗೂ ಪ್ರತ್ಯೇಕಿಸಲಾಗದ ಭಾಗ. ಈ ಸತ್ಯವನ್ನು ಹಲವು ಬಾರಿ ಚೀನಾಕ್ಕೆ ಮನವರಿಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...