Homeಅಂತರಾಷ್ಟ್ರೀಯಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

"ಚೀನಾವನ್ನು ಸಂಪೂರ್ಣವಾಗಿ ನಂಬಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ನಡೆಯುತ್ತಿರುವ ಮಾತುಕತೆಗಳ ಬಗ್ಗೆ ಸಚಿವರು ತಮ್ಮ ಹೇಳಿಕೆಗಳಲ್ಲಿ ಜಾಗರೂಕರಾಗಿದ್ದಾರೆ" ಎಂದು ಮಾಜಿ ರಾಜತಾಂತ್ರಿಕರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಚೀನಾ-ಭಾರತದ ಗಡಿ ಉದ್ವಿಗ್ನತೆಯನ್ನು ಬಗೆಹರಿಸಲು ಉಭಯ ದೇಶಗಳು ಮಾತುಕತೆ ನಡೆಸುತ್ತಿವೆ, ಅದು ನಮ್ಮ ಮತ್ತು ಚೀನಾದ ನಡುವಿನ ಗೌಪ್ಯತೆಯ ವಿಷಯ” ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಗುರುವಾರ ಹೇಳಿದ್ದಾರೆ.

“ಚರ್ಚೆಗಳು ನಡೆಯುತ್ತಿವೆ. ಏನು ನಡೆಯುತ್ತಿದೆ ಎಂಬುದು ನಮ್ಮ ಮತ್ತು ಚೀನಿಯರ ನಡುವಿನ ಗೌಪ್ಯವಾದ ಸಂಗತಿಯಾಗಿದೆ. ಇದನ್ನು ಪೂರ್ವಗ್ರಹಪೀಡಿತಗೊಳಿಸಲು ನಾನು ಬಯಸುವುದಿಲ್ಲ” ಎಂದು ಬ್ಲೂಮ್‌ಬರ್ಗ್ ಇಂಡಿಯಾ ಎಕನಾಮಿಕ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಾಸ್ತವಿಕ ಗಡಿರೇಖೆಯ ಉದ್ದಕ್ಕೂ ಅಭೂತಪೂರ್ವ ಸೈನ್ಯವನ್ನು ನಿರ್ಮಿಸಲಾಗಿದೆ. ಬೆಳೆಯುತ್ತಿರುವ ಉಭಯ ದೇಶಗಳು ಸಮತೋಲನವನ್ನು ಕಂಡುಕೊಳ್ಳಬಹುದೇ? ಈಗ ಗಡಿಯಲ್ಲಿ ನೀವು ನೋಡುತ್ತಿರುವುದು ನಿಜಕ್ಕೂ ಸವಾಲಿನ ಅಭಿವ್ಯಕ್ತಿಯಾಗಿದೆ” ಎಂದು ವಿದೇಶಾಂಗ ಸಚಿವರು ಹೇಳಿದರು.

ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಮ್ಮ ಆಂತರಿಕ ವಿಷಯಗಳ ಕುರಿತು ಚೀನಾ ಮಾತನಾಡಬಾರದು:

ಗಡಿಯಲ್ಲಿ ಶಾಂತಿ ಕಾಪಾಡುವುದಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳು ಸರಣಿ ಒಪ್ಪಂದಗಳಿಗೆ ಸಹಿ ಹಾಕಿದ ನಂತರ, 1993 ರಿಂದ ಚೀನಾ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸಿದೆ. ಶಾಂತಿ ಮತ್ತು ನೆಮ್ಮದಿ ಖಾತ್ರಿಪಡಿಸದಿದ್ದಾಗ ಮತ್ತು ಸಹಿ ಹಾಕಿದ ಒಪ್ಪಂದಗಳನ್ನು ಗೌರವಿಸದಿದ್ದರೆ, ಇದೇ ಅಡ್ಡಿಪಡಿಸುವಿಕೆಗೆ ಪ್ರಾಥಮಿಕ ಕಾರಣವಾಗುತ್ತದೆ” ಎಂದು ಜೈಶಂಕರ್ ಹೇಳಿದರು.

“ಚೀನಾವನ್ನು ಸಂಪೂರ್ಣವಾಗಿ ನಂಬಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ನಡೆಯುತ್ತಿರುವ ಮಾತುಕತೆಗಳ ಬಗ್ಗೆ ಸಚಿವರು ತಮ್ಮ ಹೇಳಿಕೆಗಳಲ್ಲಿ ಜಾಗರೂಕರಾಗಿದ್ದಾರೆ” ಎಂದು ಮಾಜಿ ರಾಜತಾಂತ್ರಿಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ಪಡೆಗಳಿಂದಲೇ ಪ್ರಚೋದನೆ- ಗಾಳಿಯಲ್ಲಿ ಗುಂಡು ಹಾರಿಸಿದ್ದವು: ಭಾರತದ ಪ್ರತ್ಯುತ್ತರ

“ಭಾರತದ ಕೆಡೆಯಿಂದ ಹಾಗೂ ಅರುಣಾಚಲ ಪ್ರದೇಶದಿಂದ ಅಕ್ರಮವಾಗಿ ರೂಪಿಸಾಲದ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಚೀನಾ ಪರಿಗಣಿಸುವುದಿಲ್ಲ. ಗಡಿ ಪ್ರದೇಶದ ಉದ್ದಕ್ಕೂ ಸೇನಾ ಉದ್ವಿಗ್ನತೆಯ ಉದ್ದೇಶದಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯನ್ನು ನಾವು ವಿರೋಧಿಸುತ್ತೇವೆ” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದರು.

ಗಡಿ ಪ್ರದೇಶದಲ್ಲಿ ಸರಣಿಯಾಗಿ ನೂತನ ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ ಹಿನ್ನೆಲೆಯಲ್ಲಿ ಚೀನಾ ಈ ಹೇಳಿಕೆ ನೀಡಿದೆ.

ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್, “ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಹಾಗೂ ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ. ಭಾರತದ ಆಂತರಿಕ ವಿಷಯಗಳ ಬಗ್ಗೆ ಹೇಳಿಕೆ ನೀಡಲು ಚೀನಾಕ್ಕೆ ಹಕ್ಕಿಲ್ಲ. ಅರುಣಾಚಲ ಪ್ರದೇಶದ ಬಗ್ಗೆ ಕೂಡಾ ನಮ್ಮ ನಿಲುವನ್ನು ಈಗಾಗಲೆ ಹಲವು ಬಾರಿ ಹೇಳಿದ್ದೇವೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಹಾಗೂ ಪ್ರತ್ಯೇಕಿಸಲಾಗದ ಭಾಗ. ಈ ಸತ್ಯವನ್ನು ಹಲವು ಬಾರಿ ಚೀನಾಕ್ಕೆ ಮನವರಿಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...