Homeಅಂತರಾಷ್ಟ್ರೀಯಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

"ಚೀನಾವನ್ನು ಸಂಪೂರ್ಣವಾಗಿ ನಂಬಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ನಡೆಯುತ್ತಿರುವ ಮಾತುಕತೆಗಳ ಬಗ್ಗೆ ಸಚಿವರು ತಮ್ಮ ಹೇಳಿಕೆಗಳಲ್ಲಿ ಜಾಗರೂಕರಾಗಿದ್ದಾರೆ" ಎಂದು ಮಾಜಿ ರಾಜತಾಂತ್ರಿಕರೊಬ್ಬರು ಹೇಳಿದ್ದಾರೆ.

- Advertisement -
- Advertisement -

“ಚೀನಾ-ಭಾರತದ ಗಡಿ ಉದ್ವಿಗ್ನತೆಯನ್ನು ಬಗೆಹರಿಸಲು ಉಭಯ ದೇಶಗಳು ಮಾತುಕತೆ ನಡೆಸುತ್ತಿವೆ, ಅದು ನಮ್ಮ ಮತ್ತು ಚೀನಾದ ನಡುವಿನ ಗೌಪ್ಯತೆಯ ವಿಷಯ” ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಗುರುವಾರ ಹೇಳಿದ್ದಾರೆ.

“ಚರ್ಚೆಗಳು ನಡೆಯುತ್ತಿವೆ. ಏನು ನಡೆಯುತ್ತಿದೆ ಎಂಬುದು ನಮ್ಮ ಮತ್ತು ಚೀನಿಯರ ನಡುವಿನ ಗೌಪ್ಯವಾದ ಸಂಗತಿಯಾಗಿದೆ. ಇದನ್ನು ಪೂರ್ವಗ್ರಹಪೀಡಿತಗೊಳಿಸಲು ನಾನು ಬಯಸುವುದಿಲ್ಲ” ಎಂದು ಬ್ಲೂಮ್‌ಬರ್ಗ್ ಇಂಡಿಯಾ ಎಕನಾಮಿಕ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವಾಸ್ತವಿಕ ಗಡಿರೇಖೆಯ ಉದ್ದಕ್ಕೂ ಅಭೂತಪೂರ್ವ ಸೈನ್ಯವನ್ನು ನಿರ್ಮಿಸಲಾಗಿದೆ. ಬೆಳೆಯುತ್ತಿರುವ ಉಭಯ ದೇಶಗಳು ಸಮತೋಲನವನ್ನು ಕಂಡುಕೊಳ್ಳಬಹುದೇ? ಈಗ ಗಡಿಯಲ್ಲಿ ನೀವು ನೋಡುತ್ತಿರುವುದು ನಿಜಕ್ಕೂ ಸವಾಲಿನ ಅಭಿವ್ಯಕ್ತಿಯಾಗಿದೆ” ಎಂದು ವಿದೇಶಾಂಗ ಸಚಿವರು ಹೇಳಿದರು.

ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಮ್ಮ ಆಂತರಿಕ ವಿಷಯಗಳ ಕುರಿತು ಚೀನಾ ಮಾತನಾಡಬಾರದು:

ಗಡಿಯಲ್ಲಿ ಶಾಂತಿ ಕಾಪಾಡುವುದಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳು ಸರಣಿ ಒಪ್ಪಂದಗಳಿಗೆ ಸಹಿ ಹಾಕಿದ ನಂತರ, 1993 ರಿಂದ ಚೀನಾ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸಿದೆ. ಶಾಂತಿ ಮತ್ತು ನೆಮ್ಮದಿ ಖಾತ್ರಿಪಡಿಸದಿದ್ದಾಗ ಮತ್ತು ಸಹಿ ಹಾಕಿದ ಒಪ್ಪಂದಗಳನ್ನು ಗೌರವಿಸದಿದ್ದರೆ, ಇದೇ ಅಡ್ಡಿಪಡಿಸುವಿಕೆಗೆ ಪ್ರಾಥಮಿಕ ಕಾರಣವಾಗುತ್ತದೆ” ಎಂದು ಜೈಶಂಕರ್ ಹೇಳಿದರು.

“ಚೀನಾವನ್ನು ಸಂಪೂರ್ಣವಾಗಿ ನಂಬಲು ಸಾಧ್ಯವಿಲ್ಲದ ಕಾರಣ, ಪ್ರಸ್ತುತ ನಡೆಯುತ್ತಿರುವ ಮಾತುಕತೆಗಳ ಬಗ್ಗೆ ಸಚಿವರು ತಮ್ಮ ಹೇಳಿಕೆಗಳಲ್ಲಿ ಜಾಗರೂಕರಾಗಿದ್ದಾರೆ” ಎಂದು ಮಾಜಿ ರಾಜತಾಂತ್ರಿಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ಪಡೆಗಳಿಂದಲೇ ಪ್ರಚೋದನೆ- ಗಾಳಿಯಲ್ಲಿ ಗುಂಡು ಹಾರಿಸಿದ್ದವು: ಭಾರತದ ಪ್ರತ್ಯುತ್ತರ

“ಭಾರತದ ಕೆಡೆಯಿಂದ ಹಾಗೂ ಅರುಣಾಚಲ ಪ್ರದೇಶದಿಂದ ಅಕ್ರಮವಾಗಿ ರೂಪಿಸಾಲದ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಚೀನಾ ಪರಿಗಣಿಸುವುದಿಲ್ಲ. ಗಡಿ ಪ್ರದೇಶದ ಉದ್ದಕ್ಕೂ ಸೇನಾ ಉದ್ವಿಗ್ನತೆಯ ಉದ್ದೇಶದಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯನ್ನು ನಾವು ವಿರೋಧಿಸುತ್ತೇವೆ” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದರು.

ಗಡಿ ಪ್ರದೇಶದಲ್ಲಿ ಸರಣಿಯಾಗಿ ನೂತನ ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ ಹಿನ್ನೆಲೆಯಲ್ಲಿ ಚೀನಾ ಈ ಹೇಳಿಕೆ ನೀಡಿದೆ.

ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್, “ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಹಾಗೂ ಕಾಶ್ಮೀರ, ಲಡಾಖ್ ಭಾರತದ ಅವಿಭಾಜ್ಯ ಅಂಗ. ಭಾರತದ ಆಂತರಿಕ ವಿಷಯಗಳ ಬಗ್ಗೆ ಹೇಳಿಕೆ ನೀಡಲು ಚೀನಾಕ್ಕೆ ಹಕ್ಕಿಲ್ಲ. ಅರುಣಾಚಲ ಪ್ರದೇಶದ ಬಗ್ಗೆ ಕೂಡಾ ನಮ್ಮ ನಿಲುವನ್ನು ಈಗಾಗಲೆ ಹಲವು ಬಾರಿ ಹೇಳಿದ್ದೇವೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಹಾಗೂ ಪ್ರತ್ಯೇಕಿಸಲಾಗದ ಭಾಗ. ಈ ಸತ್ಯವನ್ನು ಹಲವು ಬಾರಿ ಚೀನಾಕ್ಕೆ ಮನವರಿಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...