Homeಕರ್ನಾಟಕಇಂದೂ ನಡೆಯುತ್ತಿರುವ #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಇಂದೂ ನಡೆಯುತ್ತಿರುವ #ಕನ್ನಡವಿವಿಉಳಿಸಿ ಟ್ವಿಟ್ಟರ್‌‌ ಅಭಿಯಾನ; ಸಿದ್ದರಾಮಯ್ಯ ಸೇರಿದಂತೆ ಹಲವರ ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆ ನಿಯೋಗವು ರಾಜ್ಯಾಧ್ಯಕ್ಷರಾದ ನಾರಾಯಣಗೌಡ್ರು ಟಿ.ಎ. ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರನ್ನು ಭೇಟಿ ಮಾಡಿ ಅಭಿಯಾನದ ಹಕ್ಕೊತ್ತಾಯವನ್ನು ಸಲ್ಲಿಸಿತು.

- Advertisement -
- Advertisement -

ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನೀಡಿದ್ದ ಕರೆಗೆ ಇಂದೂ ಕೂಡಾ ಭಾರಿ ಜನ ಬೆಂಬಲ ವ್ಯಕ್ತವಾಗಿದೆ. ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ.

“ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿರುವ ಟ್ವಿಟರ್ ಅಭಿಯಾನದಲ್ಲಿ ಈ ಕುರಿತು ಮಾತನಾಡೋಣ. ಸರ್ಕಾರವನ್ನು ಎಚ್ಚರಿಸೋಣ” ಎಂದು ಡಿಸೆಂಬರ್‌ 17 ರಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು ಟಿ.ಎ. ಟ್ವಿಟ್ಟರ್‌ ಅಭಿಯಾನಕ್ಕೆ ಕರೆ ಕೊಟ್ಟಿದ್ದರು. ಈ ಅಭಿಯಾನ ಇಂದೂ ಕೂಡಾ ಮುಂದುವರೆದಿದೆ.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಅಭಿಯಾನಲ್ಲಿ ಭಾಗವಹಿಸಿದವರಿಗೆ ನಿನ್ನೆ ಕೃತಜ್ಞತೆಗಳನ್ನು ತಿಳಿಸಿರುವ ಕರವೆ ರಾಜ್ಯಾಧ್ಯಕ್ಷ ನಾರಾಯಣ ಗೌಡ್ರು,”ಕರವೇ ನಿಯೋಗದೊಂದಿಗೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿ ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದೇನೆ. ಸರ್ಕಾರ ಕನ್ನಡ ವಿವಿಗೆ ಅಗತ್ಯ ಅನುದಾನ ನೀಡದಿದ್ದರೆ ಬೀದಿಹೋರಾಟ ಅನಿವಾರ್ಯ” ಎಂದು ಹೇಳಿದ್ದರು.

ಹಂಪಿ ವಿಶ್ವವಿದ್ಯಾಲಯದ ಪರವಾಗಿ ಧ್ವನಿ ಎತ್ತಿರುವ ಸಿದ್ದರಾಮಯ್ಯ, “ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಅನುದಾನ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗದ ಪರಿಸ್ಥಿತಿಗೆ ತಲುಪಿವೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಅನುದಾನ ನೀಡಿ, ಅವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನೆರವಾಗಬೇಕು” ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಜಯನಗರ ಶಾಸಕಿ ಸೌಮ್ಯ ರೆಡ್ಡಿ ಕೂಡಾ ಟ್ವಿಟ್ಟರ್‌ ಅಭಿಯಾನಕ್ಕೆ ತಮ್ಮ ಬೆಂಬಲ ನೀಡಿದ್ದು, “ಹಂಪಿ ಕನ್ನಡ ವಿಶ್ವವಿದ್ಯಾಲಯವು ಕನ್ನಡ ವಿದ್ವತ್ ಲೋಕದ ಸಂಕೇತ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಚಂದ್ರಶೇಖರ್ ಕಂಬಾರ, ದಿವಂಗತ ಎಂ.ಎಂ ಕಲಬುರ್ಗಿ ಮುಂತಾದ ಹಿರಿಯ ವಿದ್ವಾಂಸರು ಕಟ್ಟಿದ ಹೆಮ್ಮೆಯ ವಿದ್ಯಾ ಕೇಂದ್ರವದು. ಕನ್ನಡ ನಾಡು-ನುಡಿ, ಜಾನಪದ ಸಂಸ್ಕೃತಿಗಳ ಕುರಿತು ಅನೇಕ ಸಂಶೋಧನಾ ವಿದ್ಯಾರ್ಥಿಗಳಿಗೆ ತಾಯಿಯಾದ ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ ಕಡಿತ ಮಾಡಿರುವುದು ನಿಜಕ್ಕೂ ಖಂಡನೀಯ. ಈ ಕೂಡಲೇ ಸರ್ಕಾರ ವಿಶ್ವವಿದ್ಯಾಲಯಕ್ಕೆ ನೀಡಬೇಕಿರುವ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.‌

 

ಇಂದು ಕರ್ನಾಟಕ ರಕ್ಷಣಾ ವೇದಿಕೆ ನಿಯೋಗವು ರಾಜ್ಯಾಧ್ಯಕ್ಷರಾದ ನಾರಾಯಣಗೌಡ್ರು ಟಿ.ಎ. ಅವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರನ್ನು ಭೇಟಿ ಮಾಡಿ ಅಭಿಯಾನದ ಹಕ್ಕೊತ್ತಾಯವನ್ನು ಸಲ್ಲಿಸಿತು.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಬೆಂಬಲಿಸಿ #ಕನ್ನಡವಿವಿಉಳಿಸಿ ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌

ಇದನ್ನೂ ಓದಿ:ಪಂಪನ ವಿಕ್ರಮಾರ್ಜುನ ವಿಜಯವೂ, ಕನ್ನಡ ರಾಷ್ಟ್ರೀಯತೆಯೂ: ಪ್ರೊ.ಶಿವರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....