Homeಕರ್ನಾಟಕಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ...

ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ ಕಿಡಿ

- Advertisement -
- Advertisement -

• ಕೇಂದ್ರ ಬಿಜೆಪಿಯದ್ದು ಶ್ರೀಮಂತರ ಪರ ಸರ್ಕಾರ
• ಬಡವರನ್ನು ಸುಲಿದು ಶ್ರೀಮಂತರ ಜೇಬು ತುಂಬಿಸುತ್ತಿದ್ದಾರೆ
• ತೈಲಗಳ ಮೇಲೆ ಶೇ.250 ರಿಂದ ಶೇ.500ರ ವರೆಗೆ ತೆರಿಗೆ ಏರಿಕೆ
• ಹಳ್ಳಿ ಹಳ್ಳಿಗೂ ಹೋರಾಟವನ್ನು ತಲುಪಿಸಲು ಕರೆ

ಬೆಂಗಳೂರು: ಸತತ ಬೆಲೆ ಏರಿಕೆ ಮೂಲಕ ಬಡವರ ರಕ್ತವನ್ನು ಹೀರಿ ಅಂಬಾನಿ-ಅದಾನಿ ಸೇರಿದಂತೆ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕಳೆದ 11 ವರ್ಷದ ಕೇಂದ್ರ ಸರ್ಕಾರದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಸತತ ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ತೆರಿಗೆ ಪದ್ಧತಿಯ ವಿರುದ್ಧ ಆಕ್ರೋಶ ಹೊರಹಾಕಿದರು.

“ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಲೀಟರ್ ಡೀಸೆಲ್ ಮೇಲಿನ ತೆರಿಗೆ 3.40 ರೂಪಾಯಿ ಇತ್ತು. ಆದರೆ, ಬಿಜೆಪಿ ಅವಧಿಯಲ್ಲಿ ಈ ಪ್ರಮಾಣವನ್ನು 20 ರೂಪಾಯಿಗೆ ಏರಿಸಲಾಗಿದೆ. ಲೀಟರ್ ಪೆಟ್ರೋಲ್ ಗೆ 9.20 ರೂಪಾಯಿ ಇದ್ದ ತೆರಿಗೆಯನ್ನು ಇದೀಗ 20 ರೂಪಾಯಿಗೆ ಏರಿಸಲಾಗಿದೆ. ಅಡಿಗೆ ಅನಿಲವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಸಿಲಿಂಡರ್ ಅನ್ನು 400 ರೂಪಾಯಿಗೆ ನೀಡಲಾಗುತ್ತಿತ್ತು. ಆ ಬೆಲೆಯೂ ಇದೀಗ ಸಾವಿರ ರೂಪಾಯಿ ದಾಟಿದೆ” ಎಂದು ಟೀಕಿಸಿದರು.

“ಕಳೆದ ಮೂರು ಅವಧಿಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಸರಾಸರಿಯಾಗಿ ಶೇ.250 ರಿಂದ ಶೇ.500 ರಷ್ಟು ಏರಿಕೆಯಾಗಿದೆ. ಎಣ್ಣೆ, ಬೇಳೆ, ಸಿಮೆಂಟ್, ಸ್ಟೀಲ್ ಸೇರಿದಂತೆ ಸಾಮಾನ್ಯರು ಬಳಸುವ ಎಲ್ಲಾ ವಸ್ತುಗಳ ಬೆಲೆಯೂ ದಿನೇ ದಿನೇ ಗಗನಕ್ಕೆ ಏರುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಜನ ಸಾಮಾನ್ಯರ ಬಡವರ ರಕ್ತವನ್ನು ತಿಗಣೆ ಹೀರಿದಂತೆ ಸುಲಿಗೆ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

ಮುಂದುವರೆದು, “ಕೇಂದ್ರ ಬಿಜೆಪಿ ಸರ್ಕಾರ ಏಕೆ ಹೀಗೆ ಬಡವರನ್ನು ಸುಲಿಯುತ್ತಿದೆ ಎಂಬ ವಿಚಾರವನ್ನೂ ನಾವು ಅರಿತುಕೊಳ್ಳಬೇಕು. ಏಕೆಂದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಮಂತರ ಕಾರ್ಪೊರೇಟ್ ತೆರಿಗೆಯನ್ನು ಶೇ.30 ಕ್ಕೆ ಏರಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಇದೀಗ ಶ್ರೀಮಂತರ ತೆರಿಗೆಯನ್ನು ಇಳಿಸಿ ಆ ಹೊರೆಯನ್ನು ಬಡವರ ಮೇಲೆ ಹಾಕುತ್ತಿದೆ. ಬಡವರಿಂದ ಸುಲಿದು ಅದಾನಿ-ಅಂಬಾನಿಯಂತಹ ಶ್ರೀಮಂತರ ಜೇಬು ತುಂಬಿಸುತ್ತಿದೆ. ಇದು ಶ್ರೀಮಂತರ ಪರ ಸರ್ಕಾರವಾಗಿದ್ದು, ಪರಿಣಾಮ ದೇಶದಲ್ಲಿ ಶ್ರೀಮಂತರ ಹಾಗೂ ಬಡವರ ನಡುವಿನ ಅಂತರ ಹೆಚ್ಚುತ್ತಲೇ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಸ್ವಿಜ್ ಬ್ಯಾಂಕಿನ ಕಪ್ಪು ಹಣ ಎಲ್ಲಿ?

“ಪ್ರಧಾನಿ ನರೇಂದ್ರ ಮೋದಿ ಅವರು ತಾವು ಅಧಿಕಾರಕ್ಕೆ ಬಂದರೆ ಭಾರತೀಯರು ಸ್ವಿಜ್ ಬ್ಯಾಂಕಿನಲ್ಲಿಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಹಣ ಹಾಕುವುದಾಗಿ ಹೇಳಿದ್ದರು. ಖಾತೆ ಹಣ ಹಾಕುವುದಿರಲಿ, ಕನಿಷ್ಟ ಒಂದು ರೂಪಾಯಿ ಕಪ್ಪು ಹಣವನ್ನೂ ಭಾರತಕ್ಕೆ ವಾಪಸ್ ತರಲಾಗಲಿಲ್ಲ” ಎಂದು ಲೇವಡಿ ಮಾಡಿದರು.

“ವಿಜಯ್ ಮಲ್ಯ, ನೀರವ್ ಮೋದಿ, ಮೇಹುಲ್ ಚೋಕ್ಸಿ ಸೇರಿದಂತೆ ಅನೇಕ ಶ್ರೀಮಂತ ಉದ್ಯಮಿಗಳು ಭಾರತದ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದಾರೆ. ಕನಿಷ್ಟ ಅವರನ್ನೂ ಸಹ ಭಾರತಕ್ಕೆ ಎಳೆದು ತರಲಾಗದವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಹಾಕ್ತಾರೆ. ವಿಪಕ್ಷಗಳ ನಿರ್ಣಾಮಕ್ಕೆ ಮುಂದಾಗಿದ್ದಾರೆ” ಎಂದು ಕುಹಕವಾಡಿದರು.

ಹೋರಾಟವನ್ನು ಪ್ರತಿ ಹಳ್ಳಿಯಲ್ಲೂ ಮುನ್ನಡೆಸಿ:

“ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ಆಡಳಿತದ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಪ್ರತಿ ಹಳ್ಳಿಗೂ ತಲುಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕರೆ ನೀಡಿದರು.

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಯೊಬ್ಬ ಕಾಂಗ್ರೆಸಿಗರು ಬೀದಿಗಿಳಿದು ಹೋರಾಟ ನಡೆಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕವೂ ಈ ವಿಚಾರಗಳನ್ನು ಜನ ಸಾಮಾನ್ಯರ ಗಮನಕ್ಕೆ ತರಬೇಕು. ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಇಳಿಸುವವರೆಗೆ ನಮ್ಮ ಹೋರಾಟ ಮುಂದುವರೆಯಬೇಕು” ಎಂದರು.

ಜಾತಿ ಸಮೀಕ್ಷೆ ಇನ್ನೂ ಓದಿಲ್ಲ; ಅದರ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...