Homeಕರ್ನಾಟಕಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ...

ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಕೃಷ್ಣ ಬೈರೇಗೌಡ ಕಿಡಿ

- Advertisement -
- Advertisement -

• ಕೇಂದ್ರ ಬಿಜೆಪಿಯದ್ದು ಶ್ರೀಮಂತರ ಪರ ಸರ್ಕಾರ
• ಬಡವರನ್ನು ಸುಲಿದು ಶ್ರೀಮಂತರ ಜೇಬು ತುಂಬಿಸುತ್ತಿದ್ದಾರೆ
• ತೈಲಗಳ ಮೇಲೆ ಶೇ.250 ರಿಂದ ಶೇ.500ರ ವರೆಗೆ ತೆರಿಗೆ ಏರಿಕೆ
• ಹಳ್ಳಿ ಹಳ್ಳಿಗೂ ಹೋರಾಟವನ್ನು ತಲುಪಿಸಲು ಕರೆ

ಬೆಂಗಳೂರು: ಸತತ ಬೆಲೆ ಏರಿಕೆ ಮೂಲಕ ಬಡವರ ರಕ್ತವನ್ನು ಹೀರಿ ಅಂಬಾನಿ-ಅದಾನಿ ಸೇರಿದಂತೆ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕಳೆದ 11 ವರ್ಷದ ಕೇಂದ್ರ ಸರ್ಕಾರದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಸತತ ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ತೆರಿಗೆ ಪದ್ಧತಿಯ ವಿರುದ್ಧ ಆಕ್ರೋಶ ಹೊರಹಾಕಿದರು.

“ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಲೀಟರ್ ಡೀಸೆಲ್ ಮೇಲಿನ ತೆರಿಗೆ 3.40 ರೂಪಾಯಿ ಇತ್ತು. ಆದರೆ, ಬಿಜೆಪಿ ಅವಧಿಯಲ್ಲಿ ಈ ಪ್ರಮಾಣವನ್ನು 20 ರೂಪಾಯಿಗೆ ಏರಿಸಲಾಗಿದೆ. ಲೀಟರ್ ಪೆಟ್ರೋಲ್ ಗೆ 9.20 ರೂಪಾಯಿ ಇದ್ದ ತೆರಿಗೆಯನ್ನು ಇದೀಗ 20 ರೂಪಾಯಿಗೆ ಏರಿಸಲಾಗಿದೆ. ಅಡಿಗೆ ಅನಿಲವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಸಿಲಿಂಡರ್ ಅನ್ನು 400 ರೂಪಾಯಿಗೆ ನೀಡಲಾಗುತ್ತಿತ್ತು. ಆ ಬೆಲೆಯೂ ಇದೀಗ ಸಾವಿರ ರೂಪಾಯಿ ದಾಟಿದೆ” ಎಂದು ಟೀಕಿಸಿದರು.

“ಕಳೆದ ಮೂರು ಅವಧಿಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಸರಾಸರಿಯಾಗಿ ಶೇ.250 ರಿಂದ ಶೇ.500 ರಷ್ಟು ಏರಿಕೆಯಾಗಿದೆ. ಎಣ್ಣೆ, ಬೇಳೆ, ಸಿಮೆಂಟ್, ಸ್ಟೀಲ್ ಸೇರಿದಂತೆ ಸಾಮಾನ್ಯರು ಬಳಸುವ ಎಲ್ಲಾ ವಸ್ತುಗಳ ಬೆಲೆಯೂ ದಿನೇ ದಿನೇ ಗಗನಕ್ಕೆ ಏರುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಜನ ಸಾಮಾನ್ಯರ ಬಡವರ ರಕ್ತವನ್ನು ತಿಗಣೆ ಹೀರಿದಂತೆ ಸುಲಿಗೆ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

ಮುಂದುವರೆದು, “ಕೇಂದ್ರ ಬಿಜೆಪಿ ಸರ್ಕಾರ ಏಕೆ ಹೀಗೆ ಬಡವರನ್ನು ಸುಲಿಯುತ್ತಿದೆ ಎಂಬ ವಿಚಾರವನ್ನೂ ನಾವು ಅರಿತುಕೊಳ್ಳಬೇಕು. ಏಕೆಂದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರೀಮಂತರ ಕಾರ್ಪೊರೇಟ್ ತೆರಿಗೆಯನ್ನು ಶೇ.30 ಕ್ಕೆ ಏರಿಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಇದೀಗ ಶ್ರೀಮಂತರ ತೆರಿಗೆಯನ್ನು ಇಳಿಸಿ ಆ ಹೊರೆಯನ್ನು ಬಡವರ ಮೇಲೆ ಹಾಕುತ್ತಿದೆ. ಬಡವರಿಂದ ಸುಲಿದು ಅದಾನಿ-ಅಂಬಾನಿಯಂತಹ ಶ್ರೀಮಂತರ ಜೇಬು ತುಂಬಿಸುತ್ತಿದೆ. ಇದು ಶ್ರೀಮಂತರ ಪರ ಸರ್ಕಾರವಾಗಿದ್ದು, ಪರಿಣಾಮ ದೇಶದಲ್ಲಿ ಶ್ರೀಮಂತರ ಹಾಗೂ ಬಡವರ ನಡುವಿನ ಅಂತರ ಹೆಚ್ಚುತ್ತಲೇ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಸ್ವಿಜ್ ಬ್ಯಾಂಕಿನ ಕಪ್ಪು ಹಣ ಎಲ್ಲಿ?

“ಪ್ರಧಾನಿ ನರೇಂದ್ರ ಮೋದಿ ಅವರು ತಾವು ಅಧಿಕಾರಕ್ಕೆ ಬಂದರೆ ಭಾರತೀಯರು ಸ್ವಿಜ್ ಬ್ಯಾಂಕಿನಲ್ಲಿಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಹಣ ಹಾಕುವುದಾಗಿ ಹೇಳಿದ್ದರು. ಖಾತೆ ಹಣ ಹಾಕುವುದಿರಲಿ, ಕನಿಷ್ಟ ಒಂದು ರೂಪಾಯಿ ಕಪ್ಪು ಹಣವನ್ನೂ ಭಾರತಕ್ಕೆ ವಾಪಸ್ ತರಲಾಗಲಿಲ್ಲ” ಎಂದು ಲೇವಡಿ ಮಾಡಿದರು.

“ವಿಜಯ್ ಮಲ್ಯ, ನೀರವ್ ಮೋದಿ, ಮೇಹುಲ್ ಚೋಕ್ಸಿ ಸೇರಿದಂತೆ ಅನೇಕ ಶ್ರೀಮಂತ ಉದ್ಯಮಿಗಳು ಭಾರತದ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿದ್ದಾರೆ. ಕನಿಷ್ಟ ಅವರನ್ನೂ ಸಹ ಭಾರತಕ್ಕೆ ಎಳೆದು ತರಲಾಗದವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಹಾಕ್ತಾರೆ. ವಿಪಕ್ಷಗಳ ನಿರ್ಣಾಮಕ್ಕೆ ಮುಂದಾಗಿದ್ದಾರೆ” ಎಂದು ಕುಹಕವಾಡಿದರು.

ಹೋರಾಟವನ್ನು ಪ್ರತಿ ಹಳ್ಳಿಯಲ್ಲೂ ಮುನ್ನಡೆಸಿ:

“ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ಆಡಳಿತದ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಪ್ರತಿ ಹಳ್ಳಿಗೂ ತಲುಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕರೆ ನೀಡಿದರು.

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಯೊಬ್ಬ ಕಾಂಗ್ರೆಸಿಗರು ಬೀದಿಗಿಳಿದು ಹೋರಾಟ ನಡೆಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕವೂ ಈ ವಿಚಾರಗಳನ್ನು ಜನ ಸಾಮಾನ್ಯರ ಗಮನಕ್ಕೆ ತರಬೇಕು. ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಇಳಿಸುವವರೆಗೆ ನಮ್ಮ ಹೋರಾಟ ಮುಂದುವರೆಯಬೇಕು” ಎಂದರು.

ಜಾತಿ ಸಮೀಕ್ಷೆ ಇನ್ನೂ ಓದಿಲ್ಲ; ಅದರ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...