Homeಮುಖಪುಟಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ಕಳೆದ 5 ವರ್ಷಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರ ಧೋರಣೆ ಬದಲಾಗಿದೆ ಎಂದು ಸಿಎಂ ಪಿಣರಾಯಿ ಹೇಳಿದ್ದಾರೆ.

- Advertisement -
- Advertisement -

ಕೇರಳ ತನ್ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂಗಳನ್ನು ಹೊಂದಿರುವ ದೇಶದ ಮೊದಲ ರಾಜ್ಯ ಎಂದಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯದ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಡಿಜಿಟಲ್ ಎಂದು ಘೋಷಿಸಿದ್ದಾರೆ.

“ಇದು ನಮ್ಮ ರಾಜ್ಯದ ಸಾಧನೆಯಾಗಿದ್ದು ಅದು ಮುಂದಿನ ಪೀಳಿಗೆಗೆ ಪ್ರಯೋಜನವನ್ನು ನೀಡುತ್ತದೆ. ಎಲ್‌ಡಿಎಫ್(ಕಮ್ಯುನಿಷ್ಟ್ ಮಿತ್ರ ಕೂಟ) ಸರ್ಕಾರ ಈ ಯೋಜನೆಯನ್ನು ಮುನ್ನಡೆಸಿದೆ” ಎಂದು ಮುಖ್ಯಮಂತ್ರಿ ಕೇರಳವನ್ನು ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಡಿಜಿಟಲ್ ಆಗಿ ಮಾರ್ಪಡಿಸಿದ ಮೊದಲ ರಾಜ್ಯವೆಂದು ಘೋಷಿಸಿದರು.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

“ಕಳೆದ 5 ವರ್ಷಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರ ಧೋರಣೆ ಬದಲಾಗಿದೆ. ಶೈಕ್ಷಣಿಕ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಶಾಲೆಗಳನ್ನು ಅಂತರರಾಷ್ಟ್ರೀಯ ಮಾನದಂಡಗಳಂತೆ ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶವಾಗಿತ್ತು. ನಮ್ಮ ಹಳ್ಳಿಯ ಶಾಲೆಯು ವಿಶ್ವದ ಯಾವುದೇ ಭಾಗದ ಅತ್ಯುತ್ತಮ ಶಾಲೆಯಂತೆಯೇ ಇರಬೇಕು” ಎಂದು ಅವರು ಹೇಳಿದ್ದಾರೆ.

A classroom at the government lower primary school in Ernakulam. | TA Ameerudheen

ಇದರೊಂದಿಗೆ ರಾಜ್ಯದ ಎಲ್ಲ ಮಕ್ಕಳು ಹೊಸ ತಂತ್ರಜ್ಞಾನಗಳ ಮೂಲಕ ಶಿಕ್ಷಣವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿ ಪಿಣರಾಯಿ ಹೇಳಿದ್ದಾರೆ. “ಇದು ಹೆಮ್ಮೆಯ ಸಾಧನೆಯಾಗಿದ್ದು, ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಸರ್ಕಾರ ದೃಡ ನಿರ್ಧಾರವಾಗಿತ್ತು. ಪ್ರವಾಹಗಳು ಮತ್ತು ಭೀಕರ ಸಾಂಕ್ರಾಮಿಕ ರೋಗಗಳ ಹೊರತಾಗಿಯೂ, ನಾವು ಆ ಗುರಿಯನ್ನು ಮುಟ್ಟಿದ್ದೇವೆ. ಮುಂದಿನ ದಿನಗಳಲ್ಲಿ, ನಾವು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಉನ್ನತ ಎತ್ತರಕ್ಕೆ ಏರಬಹುದು” ಎಂದು ಅವರು ಹೇಳಿದ್ದಾರೆ.

ಕೇರಳ ಮೂಲಸೌಕರ್ಯ ಹೂಡಿಕೆ ನಿಧಿ ಮಂಡಳಿ(KIIFB) ಒದಗಿಸಿದ ಹಣವನ್ನು ಬಳಸಿಕೊಂಡು ಸ್ಮಾರ್ಟ್ ಕ್ಲಾಸ್‌ರೂಮ್ ಯೋಜನೆಯನ್ನು ರೂಪಿಸಲಾಗಿದೆ. ಯೋಜನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಕೈಟ್ ಸಂಸ್ಥೆ ಜಾರಿಗೆ ತಂದಿದೆ.

ಯೋಜನೆಯಲ್ಲಿ 16,027 ಶಾಲೆಗಳಲ್ಲಿ 3,74,274 ಡಿಜಿಟಲ್ ಉಪಕರಣಗಳನ್ನು ವಿತರಿಸಲಾಗಿದ್ದು, ಮೊದಲ ಹಂತದಲ್ಲಿ 4752 ಪ್ರೌಡ ಶಾಲೆಗಳು ಮತ್ತು ಹೈಯರ್ ಸೆಕೆಂಡರಿ ಶಾಲೆಗಳಲ್ಲಿ 45,000 ಹೈಟೆಕ್ ತರಗತಿ ಕೊಠಡಿಗಳು ಅಸ್ತಿತ್ವಕ್ಕೆ ಬಂದವು. KIIFB ನೆರವಿನ ಹೊರತಾಗಿ, ಶಾಸಕರಿಗಾಗಿ ಮೀಸಲಿಟ್ಟ ಅನುದಾನಗಳನ್ನು ಬಳಸಿ 11,275 ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳಲ್ಲಿ 45,000 ಹೈಟೆಕ್ ತರಗತಿ ಕೊಠಡಿಗಳು ಮತ್ತು ಲ್ಯಾಬ್‌ಗಳಿಗೆ ಸಿದ್ಧಪಡಿಸಲಾಗಿದೆ.


ಇದನ್ನೂ ಓದಿ: ಆರೋಗ್ಯ ಇಲಾಖೆಯನ್ನು ಕೇರಳ ಮಾದರಿಯಲ್ಲಿ ರೂಪಿಸಲಾಗುವುದು: ಆರೋಗ್ಯ ಸಚಿವ ಸುಧಾಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...