Homeಮುಖಪುಟನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

- Advertisement -
- Advertisement -

ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ತಮಿಳುನಾಡಿನ ಆಡಳಿತರೂಢ ಡಿಎಂಕೆ, ಬಿಹಾರದ ಆಡಳಿತ ಪಕ್ಷ ಆರ್‌ಜೆಡಿ, ತೆಲಂಗಾಣದ ಆಡಳಿತ ಪಕ್ಷ ಭಾರತ್ ರಾಷ್ಟ್ರೀಯ ಸಮಿತಿ, ಮಹಾರಾಷ್ಟ್ರದ ಶಿವಸೇನಾ ಉದ್ಧವ್ ಬಾಳಾ ಸಾಹೇಬ್ ಠಾಕ್ರೆ, ಎನ್‌ಸಿಪಿ, ವಿಸಿಕೆ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ.

ಕಾಂಗ್ರೆಸ್ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸುವ ಚಿಂತನೆಯಲ್ಲಿದೆ ಮತ್ತು ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಜಂಟಿ ಹೇಳಿಕೆಯನ್ನು ನೀಡಬಹುದು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಕೇಂದ್ರವು ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು “ನಾಮಕಾವಸ್ತೆ”ಗೆ ಇಳಿಸಿದೆ ಎಂದು ಹೇಳುವ ಮೂಲಕ ಕಟ್ಟಡವನ್ನು ಉದ್ಘಾಟಿಸುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದೆ. ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ನಡೆಸುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಹಲವಾರು ವಿರೋಧ ಪಕ್ಷಗಳು ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ಸಹ ಬಿಟ್ಟುಬಿಟ್ಟಿದ್ದವು.

ಈ ಉದ್ಘಾಟನಾ ಸಮಾರಂಭವನ್ನು ನಾವು ಬಹಿಷ್ಕರಿಸುತ್ತೇವೆ ಎಂದು ಡಿಎಂಕೆ ಸಂಸದ ತಿರುಚಿ ಶಿವ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಹೊಸ ಸಂಸತ್ ಭವನವನ್ನು ನಾಮಕಾವಸ್ತೆಗೆ ನಿರ್ಮಿಸಿದೆ: ಮಲ್ಲಿಕಾರ್ಜುನ ಖರ್ಗೆ

ಆರ್‌ಜೆಡಿ ಬಹಿಷ್ಕಾರ

”ರಾಷ್ಟ್ರಪತಿಗಳು ಸಂಸತ್‌ನ ಮುಖ್ಯಸ್ಥರು. ಅವರು ಸಂಸತ್ ಭವನವನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡಿಸದೆ, ಅವರಿಗೆ ಅವಮಾನ ಮಾಡಲಾಗುತ್ತಿದೆ. ಹೀಗಾಗಿ ಮೊದಲ ಅಧಿವೇಶನವನ್ನು ಎಲ್ಲಾ ವಿಪಕ್ಷಗಳು ಸೇರಿ ಬಹಿಷ್ಕಾರ ಮಾಡುತ್ತೇವೆ’ ಎಂದು ಬಿಹಾರದ ಉಪಮುಖ್ಯಮಂತ್ರಿಯೂ ಆಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಟಿಎಂಸಿ ವಿರೋಧ

ಮಂಗಳವಾರ, ತೃಣಮೂಲ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರಿಯಾನ್ ಅವರು, ಈ ಸಮಾರಂಭವನ್ನು ಭಹಿಷ್ಕರಿಸುವ ತಮ್ಮ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

”ಸಂಸತ್ತು ಕೇವಲ ಹೊಸ ಕಟ್ಟಡವಲ್ಲ, ಇದು ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ನಿಯಮಗಳೊಂದಿಗೆ ಸ್ಥಾಪನೆಯಾಗಿದೆ – ಇದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರಧಾನಿ ಮೋದಿಗೆ ಅದು ಅರ್ಥವಾಗುವುದಿಲ್ಲ.” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಎಎಪಿ ವಿರೋಧ

ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ”ರಾಷ್ಟ್ರಪತಿಯನ್ನು ಸಮಾರಂಭಕ್ಕೆ ಆಹ್ವಾನಿಸದಿರುವುದು “ಅವರಿಗೆ ಮಾಡಿದ ಘೋರ ಅವಮಾನ” ಮತ್ತು “ದಲಿತ ಬುಡಕಟ್ಟು ಮತ್ತು ಭಾರತದ ವಂಚಿತ ಸಮಾಜ” ಎಂದು ಹೇಳಿದರು.

ಕಮ್ಯುನಿಸ್ಟ್ ಪಕ್ಷ ವಿರೋಧ

ಭಾರತೀಯ ಕಮ್ಯುನಿಸ್ಟ್ ಪಕ್ಷದ ಶಾಸಕ ಬಿನೋಯ್ ವಿಶ್ವಂ ಮಾತನಾಡಿ, ”ವಿಡಿ ಸಾವರ್ಕರ್ ಅವರ ಸ್ಮರಣೆಯೊಂದಿಗೆ ಸಂಸತ್ತು ಉದ್ಘಾಟನೆ ಮಾಡುತ್ತಿರುವುದು ಸರಿಯಲ್ಲ. ಅವರಿಗೂ ಸಂಸತ್ತಿಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ನಾವು ಖಂಡಿತವಾಗಿಯೂ ಅದರ ಭಾಗವಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ಸಮಾರಂಭವನ್ನು ಬಹಿಷ್ಕರಿಸಲು ವಿರೋಧ ಪಕ್ಷಗಳಲ್ಲಿ “ಅಗಾಧ ಒಮ್ಮತ”ವಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ರಾಷ್ಟ್ರಪತಿಗಳು ದೇಶದ ಮುಖ್ಯಸ್ಥರು ಎಂಬ ಅಂಶವನ್ನು ಸರ್ಕಾರ ಗುರುತಿಸಬೇಕು, ಪ್ರಧಾನಿ ಸರ್ಕಾರದ ಮುಖ್ಯಸ್ಥರು” ಎಂದು ಅವರು ಹೇಳಿದರು.

”ಸಂಸತ್ ಭವನ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸದಿರುವ ಸರ್ಕಾರದ ನಿರ್ಧಾರವನ್ನು ಒಪ್ಪಲಾಗದು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷ ವಿರೋಧ

”ಎಲ್ಲಾ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಹೇಳಿವೆ. ನಾವೂ ಕೂಡ ಬಹಿಷ್ಕರಿಸುತ್ತೇವೆ” ಎಂದು ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷದ ಸಂಜಯ್‌ ರಾವುತ್ ಹೇಳಿದ್ದಾರೆ.

”ದೇಶದ ಅರ್ಥಿಕ ಪರಿಸ್ಥಿತಿ ಬಿಗಾಡಾಯಿಸಿರುವಾಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸೆಂಟ್ರಲ್ ವಿಸ್ತಾ ನಿರ್ಮಾಣ ಮಾಡಿದ್ದರ ಬಗ್ಗೆ ಮೊದಲು ನಾವೇ ಪ್ರಶ್ನೆ ಎತ್ತಿದ್ದೆವು. ಈ ಯೋಜನೆಯನ್ನು ಪ್ರಧಾನಮಂತ್ರಿಯವ ಇಚ್ಛೆಗಾಗಿ ಮಾಡಲಾಗಿದೆ. ಇದರ ಅಗತ್ಯ ಇತ್ತೇ? ಹಳೆಯ ಸಂಸತ್ ಭವನ ಇನ್ನೂ ನೂರು ವರ್ಷಕ್ಕೆ ಸಾಲುತ್ತಿತ್ತು. ಹಳೆಯ ಸಂಸತ್‌ ಭವನಕ್ಕೆ ಆರೆಸ್ಸೆಸ್ ಹಾಗೂ ಬಿಜೆಪಿಗೆ ಸಂಬಂಧ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದಾರೆ ಎನ್ನುವ ಫಲಕ ಹಾಕಲು ಹೊಸ ಭವನವನ್ನು ನಿರ್ಮಾಣ ಮಾಡಲಾಗಿದೆ” ಎಂದು ಸಂಜಯ್ ರಾವುತ್ ಕಿಡಿಕಾರಿದ್ದಾರೆ.

ಪ್ರಧಾನಿಯವರು ಡಿಸೆಂಬರ್ 10, 2020 ರಂದು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...