Homeಮುಖಪುಟನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

- Advertisement -
- Advertisement -

ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ತಮಿಳುನಾಡಿನ ಆಡಳಿತರೂಢ ಡಿಎಂಕೆ, ಬಿಹಾರದ ಆಡಳಿತ ಪಕ್ಷ ಆರ್‌ಜೆಡಿ, ತೆಲಂಗಾಣದ ಆಡಳಿತ ಪಕ್ಷ ಭಾರತ್ ರಾಷ್ಟ್ರೀಯ ಸಮಿತಿ, ಮಹಾರಾಷ್ಟ್ರದ ಶಿವಸೇನಾ ಉದ್ಧವ್ ಬಾಳಾ ಸಾಹೇಬ್ ಠಾಕ್ರೆ, ಎನ್‌ಸಿಪಿ, ವಿಸಿಕೆ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ.

ಕಾಂಗ್ರೆಸ್ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸುವ ಚಿಂತನೆಯಲ್ಲಿದೆ ಮತ್ತು ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಜಂಟಿ ಹೇಳಿಕೆಯನ್ನು ನೀಡಬಹುದು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಕೇಂದ್ರವು ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು “ನಾಮಕಾವಸ್ತೆ”ಗೆ ಇಳಿಸಿದೆ ಎಂದು ಹೇಳುವ ಮೂಲಕ ಕಟ್ಟಡವನ್ನು ಉದ್ಘಾಟಿಸುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದೆ. ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ನಡೆಸುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಹಲವಾರು ವಿರೋಧ ಪಕ್ಷಗಳು ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ಸಹ ಬಿಟ್ಟುಬಿಟ್ಟಿದ್ದವು.

ಈ ಉದ್ಘಾಟನಾ ಸಮಾರಂಭವನ್ನು ನಾವು ಬಹಿಷ್ಕರಿಸುತ್ತೇವೆ ಎಂದು ಡಿಎಂಕೆ ಸಂಸದ ತಿರುಚಿ ಶಿವ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಹೊಸ ಸಂಸತ್ ಭವನವನ್ನು ನಾಮಕಾವಸ್ತೆಗೆ ನಿರ್ಮಿಸಿದೆ: ಮಲ್ಲಿಕಾರ್ಜುನ ಖರ್ಗೆ

ಆರ್‌ಜೆಡಿ ಬಹಿಷ್ಕಾರ

”ರಾಷ್ಟ್ರಪತಿಗಳು ಸಂಸತ್‌ನ ಮುಖ್ಯಸ್ಥರು. ಅವರು ಸಂಸತ್ ಭವನವನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡಿಸದೆ, ಅವರಿಗೆ ಅವಮಾನ ಮಾಡಲಾಗುತ್ತಿದೆ. ಹೀಗಾಗಿ ಮೊದಲ ಅಧಿವೇಶನವನ್ನು ಎಲ್ಲಾ ವಿಪಕ್ಷಗಳು ಸೇರಿ ಬಹಿಷ್ಕಾರ ಮಾಡುತ್ತೇವೆ’ ಎಂದು ಬಿಹಾರದ ಉಪಮುಖ್ಯಮಂತ್ರಿಯೂ ಆಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಟಿಎಂಸಿ ವಿರೋಧ

ಮಂಗಳವಾರ, ತೃಣಮೂಲ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರಿಯಾನ್ ಅವರು, ಈ ಸಮಾರಂಭವನ್ನು ಭಹಿಷ್ಕರಿಸುವ ತಮ್ಮ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

”ಸಂಸತ್ತು ಕೇವಲ ಹೊಸ ಕಟ್ಟಡವಲ್ಲ, ಇದು ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ನಿಯಮಗಳೊಂದಿಗೆ ಸ್ಥಾಪನೆಯಾಗಿದೆ – ಇದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರಧಾನಿ ಮೋದಿಗೆ ಅದು ಅರ್ಥವಾಗುವುದಿಲ್ಲ.” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಎಎಪಿ ವಿರೋಧ

ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ”ರಾಷ್ಟ್ರಪತಿಯನ್ನು ಸಮಾರಂಭಕ್ಕೆ ಆಹ್ವಾನಿಸದಿರುವುದು “ಅವರಿಗೆ ಮಾಡಿದ ಘೋರ ಅವಮಾನ” ಮತ್ತು “ದಲಿತ ಬುಡಕಟ್ಟು ಮತ್ತು ಭಾರತದ ವಂಚಿತ ಸಮಾಜ” ಎಂದು ಹೇಳಿದರು.

ಕಮ್ಯುನಿಸ್ಟ್ ಪಕ್ಷ ವಿರೋಧ

ಭಾರತೀಯ ಕಮ್ಯುನಿಸ್ಟ್ ಪಕ್ಷದ ಶಾಸಕ ಬಿನೋಯ್ ವಿಶ್ವಂ ಮಾತನಾಡಿ, ”ವಿಡಿ ಸಾವರ್ಕರ್ ಅವರ ಸ್ಮರಣೆಯೊಂದಿಗೆ ಸಂಸತ್ತು ಉದ್ಘಾಟನೆ ಮಾಡುತ್ತಿರುವುದು ಸರಿಯಲ್ಲ. ಅವರಿಗೂ ಸಂಸತ್ತಿಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ನಾವು ಖಂಡಿತವಾಗಿಯೂ ಅದರ ಭಾಗವಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ಸಮಾರಂಭವನ್ನು ಬಹಿಷ್ಕರಿಸಲು ವಿರೋಧ ಪಕ್ಷಗಳಲ್ಲಿ “ಅಗಾಧ ಒಮ್ಮತ”ವಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ರಾಷ್ಟ್ರಪತಿಗಳು ದೇಶದ ಮುಖ್ಯಸ್ಥರು ಎಂಬ ಅಂಶವನ್ನು ಸರ್ಕಾರ ಗುರುತಿಸಬೇಕು, ಪ್ರಧಾನಿ ಸರ್ಕಾರದ ಮುಖ್ಯಸ್ಥರು” ಎಂದು ಅವರು ಹೇಳಿದರು.

”ಸಂಸತ್ ಭವನ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸದಿರುವ ಸರ್ಕಾರದ ನಿರ್ಧಾರವನ್ನು ಒಪ್ಪಲಾಗದು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷ ವಿರೋಧ

”ಎಲ್ಲಾ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಹೇಳಿವೆ. ನಾವೂ ಕೂಡ ಬಹಿಷ್ಕರಿಸುತ್ತೇವೆ” ಎಂದು ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷದ ಸಂಜಯ್‌ ರಾವುತ್ ಹೇಳಿದ್ದಾರೆ.

”ದೇಶದ ಅರ್ಥಿಕ ಪರಿಸ್ಥಿತಿ ಬಿಗಾಡಾಯಿಸಿರುವಾಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸೆಂಟ್ರಲ್ ವಿಸ್ತಾ ನಿರ್ಮಾಣ ಮಾಡಿದ್ದರ ಬಗ್ಗೆ ಮೊದಲು ನಾವೇ ಪ್ರಶ್ನೆ ಎತ್ತಿದ್ದೆವು. ಈ ಯೋಜನೆಯನ್ನು ಪ್ರಧಾನಮಂತ್ರಿಯವ ಇಚ್ಛೆಗಾಗಿ ಮಾಡಲಾಗಿದೆ. ಇದರ ಅಗತ್ಯ ಇತ್ತೇ? ಹಳೆಯ ಸಂಸತ್ ಭವನ ಇನ್ನೂ ನೂರು ವರ್ಷಕ್ಕೆ ಸಾಲುತ್ತಿತ್ತು. ಹಳೆಯ ಸಂಸತ್‌ ಭವನಕ್ಕೆ ಆರೆಸ್ಸೆಸ್ ಹಾಗೂ ಬಿಜೆಪಿಗೆ ಸಂಬಂಧ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದಾರೆ ಎನ್ನುವ ಫಲಕ ಹಾಕಲು ಹೊಸ ಭವನವನ್ನು ನಿರ್ಮಾಣ ಮಾಡಲಾಗಿದೆ” ಎಂದು ಸಂಜಯ್ ರಾವುತ್ ಕಿಡಿಕಾರಿದ್ದಾರೆ.

ಪ್ರಧಾನಿಯವರು ಡಿಸೆಂಬರ್ 10, 2020 ರಂದು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...