Homeಮುಖಪುಟನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

- Advertisement -
- Advertisement -

ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ತಮಿಳುನಾಡಿನ ಆಡಳಿತರೂಢ ಡಿಎಂಕೆ, ಬಿಹಾರದ ಆಡಳಿತ ಪಕ್ಷ ಆರ್‌ಜೆಡಿ, ತೆಲಂಗಾಣದ ಆಡಳಿತ ಪಕ್ಷ ಭಾರತ್ ರಾಷ್ಟ್ರೀಯ ಸಮಿತಿ, ಮಹಾರಾಷ್ಟ್ರದ ಶಿವಸೇನಾ ಉದ್ಧವ್ ಬಾಳಾ ಸಾಹೇಬ್ ಠಾಕ್ರೆ, ಎನ್‌ಸಿಪಿ, ವಿಸಿಕೆ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ.

ಕಾಂಗ್ರೆಸ್ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸುವ ಚಿಂತನೆಯಲ್ಲಿದೆ ಮತ್ತು ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಜಂಟಿ ಹೇಳಿಕೆಯನ್ನು ನೀಡಬಹುದು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಕೇಂದ್ರವು ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು “ನಾಮಕಾವಸ್ತೆ”ಗೆ ಇಳಿಸಿದೆ ಎಂದು ಹೇಳುವ ಮೂಲಕ ಕಟ್ಟಡವನ್ನು ಉದ್ಘಾಟಿಸುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದೆ. ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ನಡೆಸುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಹಲವಾರು ವಿರೋಧ ಪಕ್ಷಗಳು ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ಸಹ ಬಿಟ್ಟುಬಿಟ್ಟಿದ್ದವು.

ಈ ಉದ್ಘಾಟನಾ ಸಮಾರಂಭವನ್ನು ನಾವು ಬಹಿಷ್ಕರಿಸುತ್ತೇವೆ ಎಂದು ಡಿಎಂಕೆ ಸಂಸದ ತಿರುಚಿ ಶಿವ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಹೊಸ ಸಂಸತ್ ಭವನವನ್ನು ನಾಮಕಾವಸ್ತೆಗೆ ನಿರ್ಮಿಸಿದೆ: ಮಲ್ಲಿಕಾರ್ಜುನ ಖರ್ಗೆ

ಆರ್‌ಜೆಡಿ ಬಹಿಷ್ಕಾರ

”ರಾಷ್ಟ್ರಪತಿಗಳು ಸಂಸತ್‌ನ ಮುಖ್ಯಸ್ಥರು. ಅವರು ಸಂಸತ್ ಭವನವನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡಿಸದೆ, ಅವರಿಗೆ ಅವಮಾನ ಮಾಡಲಾಗುತ್ತಿದೆ. ಹೀಗಾಗಿ ಮೊದಲ ಅಧಿವೇಶನವನ್ನು ಎಲ್ಲಾ ವಿಪಕ್ಷಗಳು ಸೇರಿ ಬಹಿಷ್ಕಾರ ಮಾಡುತ್ತೇವೆ’ ಎಂದು ಬಿಹಾರದ ಉಪಮುಖ್ಯಮಂತ್ರಿಯೂ ಆಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಟಿಎಂಸಿ ವಿರೋಧ

ಮಂಗಳವಾರ, ತೃಣಮೂಲ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರಿಯಾನ್ ಅವರು, ಈ ಸಮಾರಂಭವನ್ನು ಭಹಿಷ್ಕರಿಸುವ ತಮ್ಮ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

”ಸಂಸತ್ತು ಕೇವಲ ಹೊಸ ಕಟ್ಟಡವಲ್ಲ, ಇದು ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ನಿಯಮಗಳೊಂದಿಗೆ ಸ್ಥಾಪನೆಯಾಗಿದೆ – ಇದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರಧಾನಿ ಮೋದಿಗೆ ಅದು ಅರ್ಥವಾಗುವುದಿಲ್ಲ.” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಎಎಪಿ ವಿರೋಧ

ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ”ರಾಷ್ಟ್ರಪತಿಯನ್ನು ಸಮಾರಂಭಕ್ಕೆ ಆಹ್ವಾನಿಸದಿರುವುದು “ಅವರಿಗೆ ಮಾಡಿದ ಘೋರ ಅವಮಾನ” ಮತ್ತು “ದಲಿತ ಬುಡಕಟ್ಟು ಮತ್ತು ಭಾರತದ ವಂಚಿತ ಸಮಾಜ” ಎಂದು ಹೇಳಿದರು.

ಕಮ್ಯುನಿಸ್ಟ್ ಪಕ್ಷ ವಿರೋಧ

ಭಾರತೀಯ ಕಮ್ಯುನಿಸ್ಟ್ ಪಕ್ಷದ ಶಾಸಕ ಬಿನೋಯ್ ವಿಶ್ವಂ ಮಾತನಾಡಿ, ”ವಿಡಿ ಸಾವರ್ಕರ್ ಅವರ ಸ್ಮರಣೆಯೊಂದಿಗೆ ಸಂಸತ್ತು ಉದ್ಘಾಟನೆ ಮಾಡುತ್ತಿರುವುದು ಸರಿಯಲ್ಲ. ಅವರಿಗೂ ಸಂಸತ್ತಿಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ನಾವು ಖಂಡಿತವಾಗಿಯೂ ಅದರ ಭಾಗವಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ಸಮಾರಂಭವನ್ನು ಬಹಿಷ್ಕರಿಸಲು ವಿರೋಧ ಪಕ್ಷಗಳಲ್ಲಿ “ಅಗಾಧ ಒಮ್ಮತ”ವಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ರಾಷ್ಟ್ರಪತಿಗಳು ದೇಶದ ಮುಖ್ಯಸ್ಥರು ಎಂಬ ಅಂಶವನ್ನು ಸರ್ಕಾರ ಗುರುತಿಸಬೇಕು, ಪ್ರಧಾನಿ ಸರ್ಕಾರದ ಮುಖ್ಯಸ್ಥರು” ಎಂದು ಅವರು ಹೇಳಿದರು.

”ಸಂಸತ್ ಭವನ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸದಿರುವ ಸರ್ಕಾರದ ನಿರ್ಧಾರವನ್ನು ಒಪ್ಪಲಾಗದು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷ ವಿರೋಧ

”ಎಲ್ಲಾ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಹೇಳಿವೆ. ನಾವೂ ಕೂಡ ಬಹಿಷ್ಕರಿಸುತ್ತೇವೆ” ಎಂದು ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷದ ಸಂಜಯ್‌ ರಾವುತ್ ಹೇಳಿದ್ದಾರೆ.

”ದೇಶದ ಅರ್ಥಿಕ ಪರಿಸ್ಥಿತಿ ಬಿಗಾಡಾಯಿಸಿರುವಾಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸೆಂಟ್ರಲ್ ವಿಸ್ತಾ ನಿರ್ಮಾಣ ಮಾಡಿದ್ದರ ಬಗ್ಗೆ ಮೊದಲು ನಾವೇ ಪ್ರಶ್ನೆ ಎತ್ತಿದ್ದೆವು. ಈ ಯೋಜನೆಯನ್ನು ಪ್ರಧಾನಮಂತ್ರಿಯವ ಇಚ್ಛೆಗಾಗಿ ಮಾಡಲಾಗಿದೆ. ಇದರ ಅಗತ್ಯ ಇತ್ತೇ? ಹಳೆಯ ಸಂಸತ್ ಭವನ ಇನ್ನೂ ನೂರು ವರ್ಷಕ್ಕೆ ಸಾಲುತ್ತಿತ್ತು. ಹಳೆಯ ಸಂಸತ್‌ ಭವನಕ್ಕೆ ಆರೆಸ್ಸೆಸ್ ಹಾಗೂ ಬಿಜೆಪಿಗೆ ಸಂಬಂಧ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದಾರೆ ಎನ್ನುವ ಫಲಕ ಹಾಕಲು ಹೊಸ ಭವನವನ್ನು ನಿರ್ಮಾಣ ಮಾಡಲಾಗಿದೆ” ಎಂದು ಸಂಜಯ್ ರಾವುತ್ ಕಿಡಿಕಾರಿದ್ದಾರೆ.

ಪ್ರಧಾನಿಯವರು ಡಿಸೆಂಬರ್ 10, 2020 ರಂದು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...