Homeಮುಖಪುಟನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿದ ವಿರೋಧ ಪಕ್ಷಗಳು

- Advertisement -
- Advertisement -

ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ತಮಿಳುನಾಡಿನ ಆಡಳಿತರೂಢ ಡಿಎಂಕೆ, ಬಿಹಾರದ ಆಡಳಿತ ಪಕ್ಷ ಆರ್‌ಜೆಡಿ, ತೆಲಂಗಾಣದ ಆಡಳಿತ ಪಕ್ಷ ಭಾರತ್ ರಾಷ್ಟ್ರೀಯ ಸಮಿತಿ, ಮಹಾರಾಷ್ಟ್ರದ ಶಿವಸೇನಾ ಉದ್ಧವ್ ಬಾಳಾ ಸಾಹೇಬ್ ಠಾಕ್ರೆ, ಎನ್‌ಸಿಪಿ, ವಿಸಿಕೆ ಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿವೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ.

ಕಾಂಗ್ರೆಸ್ ಕೂಡ ಕಾರ್ಯಕ್ರಮವನ್ನು ಬಹಿಷ್ಕರಿಸುವ ಚಿಂತನೆಯಲ್ಲಿದೆ ಮತ್ತು ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಜಂಟಿ ಹೇಳಿಕೆಯನ್ನು ನೀಡಬಹುದು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಕೇಂದ್ರವು ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು “ನಾಮಕಾವಸ್ತೆ”ಗೆ ಇಳಿಸಿದೆ ಎಂದು ಹೇಳುವ ಮೂಲಕ ಕಟ್ಟಡವನ್ನು ಉದ್ಘಾಟಿಸುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ಕಾಂಗ್ರೆಸ್ ಟೀಕಿಸಿದೆ. ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ನಡೆಸುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಹಲವಾರು ವಿರೋಧ ಪಕ್ಷಗಳು ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ಸಹ ಬಿಟ್ಟುಬಿಟ್ಟಿದ್ದವು.

ಈ ಉದ್ಘಾಟನಾ ಸಮಾರಂಭವನ್ನು ನಾವು ಬಹಿಷ್ಕರಿಸುತ್ತೇವೆ ಎಂದು ಡಿಎಂಕೆ ಸಂಸದ ತಿರುಚಿ ಶಿವ ಸುದ್ದಿ ಸಂಸ್ಥೆ ಎಎನ್‌ಐಗೆ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರ ಹೊಸ ಸಂಸತ್ ಭವನವನ್ನು ನಾಮಕಾವಸ್ತೆಗೆ ನಿರ್ಮಿಸಿದೆ: ಮಲ್ಲಿಕಾರ್ಜುನ ಖರ್ಗೆ

ಆರ್‌ಜೆಡಿ ಬಹಿಷ್ಕಾರ

”ರಾಷ್ಟ್ರಪತಿಗಳು ಸಂಸತ್‌ನ ಮುಖ್ಯಸ್ಥರು. ಅವರು ಸಂಸತ್ ಭವನವನ್ನು ಉದ್ಘಾಟನೆ ಮಾಡಬೇಕಿತ್ತು. ಆದರೆ ರಾಷ್ಟ್ರಪತಿಗಳಿಂದ ಉದ್ಘಾಟನೆ ಮಾಡಿಸದೆ, ಅವರಿಗೆ ಅವಮಾನ ಮಾಡಲಾಗುತ್ತಿದೆ. ಹೀಗಾಗಿ ಮೊದಲ ಅಧಿವೇಶನವನ್ನು ಎಲ್ಲಾ ವಿಪಕ್ಷಗಳು ಸೇರಿ ಬಹಿಷ್ಕಾರ ಮಾಡುತ್ತೇವೆ’ ಎಂದು ಬಿಹಾರದ ಉಪಮುಖ್ಯಮಂತ್ರಿಯೂ ಆಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಟಿಎಂಸಿ ವಿರೋಧ

ಮಂಗಳವಾರ, ತೃಣಮೂಲ ರಾಜ್ಯಸಭಾ ನಾಯಕ ಡೆರೆಕ್ ಒ’ಬ್ರಿಯಾನ್ ಅವರು, ಈ ಸಮಾರಂಭವನ್ನು ಭಹಿಷ್ಕರಿಸುವ ತಮ್ಮ ಪಕ್ಷದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

”ಸಂಸತ್ತು ಕೇವಲ ಹೊಸ ಕಟ್ಟಡವಲ್ಲ, ಇದು ಹಳೆಯ ಸಂಪ್ರದಾಯಗಳು, ಮೌಲ್ಯಗಳು, ಪೂರ್ವನಿದರ್ಶನಗಳು ಮತ್ತು ನಿಯಮಗಳೊಂದಿಗೆ ಸ್ಥಾಪನೆಯಾಗಿದೆ – ಇದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರಧಾನಿ ಮೋದಿಗೆ ಅದು ಅರ್ಥವಾಗುವುದಿಲ್ಲ.” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಎಎಪಿ ವಿರೋಧ

ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ”ರಾಷ್ಟ್ರಪತಿಯನ್ನು ಸಮಾರಂಭಕ್ಕೆ ಆಹ್ವಾನಿಸದಿರುವುದು “ಅವರಿಗೆ ಮಾಡಿದ ಘೋರ ಅವಮಾನ” ಮತ್ತು “ದಲಿತ ಬುಡಕಟ್ಟು ಮತ್ತು ಭಾರತದ ವಂಚಿತ ಸಮಾಜ” ಎಂದು ಹೇಳಿದರು.

ಕಮ್ಯುನಿಸ್ಟ್ ಪಕ್ಷ ವಿರೋಧ

ಭಾರತೀಯ ಕಮ್ಯುನಿಸ್ಟ್ ಪಕ್ಷದ ಶಾಸಕ ಬಿನೋಯ್ ವಿಶ್ವಂ ಮಾತನಾಡಿ, ”ವಿಡಿ ಸಾವರ್ಕರ್ ಅವರ ಸ್ಮರಣೆಯೊಂದಿಗೆ ಸಂಸತ್ತು ಉದ್ಘಾಟನೆ ಮಾಡುತ್ತಿರುವುದು ಸರಿಯಲ್ಲ. ಅವರಿಗೂ ಸಂಸತ್ತಿಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ. ನಾವು ಖಂಡಿತವಾಗಿಯೂ ಅದರ ಭಾಗವಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ಸಮಾರಂಭವನ್ನು ಬಹಿಷ್ಕರಿಸಲು ವಿರೋಧ ಪಕ್ಷಗಳಲ್ಲಿ “ಅಗಾಧ ಒಮ್ಮತ”ವಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

”ರಾಷ್ಟ್ರಪತಿಗಳು ದೇಶದ ಮುಖ್ಯಸ್ಥರು ಎಂಬ ಅಂಶವನ್ನು ಸರ್ಕಾರ ಗುರುತಿಸಬೇಕು, ಪ್ರಧಾನಿ ಸರ್ಕಾರದ ಮುಖ್ಯಸ್ಥರು” ಎಂದು ಅವರು ಹೇಳಿದರು.

”ಸಂಸತ್ ಭವನ ಉದ್ಘಾಟನೆಗೆ ಮುರ್ಮು ಅವರನ್ನು ಆಹ್ವಾನಿಸದಿರುವ ಸರ್ಕಾರದ ನಿರ್ಧಾರವನ್ನು ಒಪ್ಪಲಾಗದು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷ ವಿರೋಧ

”ಎಲ್ಲಾ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಹೇಳಿವೆ. ನಾವೂ ಕೂಡ ಬಹಿಷ್ಕರಿಸುತ್ತೇವೆ” ಎಂದು ಶಿವಸೇನಾ ಉದ್ಧವ್‌ ಬಾಳಾ ಸಾಹೇಬ್ ಠಾಕ್ರೆ ಪಕ್ಷದ ಸಂಜಯ್‌ ರಾವುತ್ ಹೇಳಿದ್ದಾರೆ.

”ದೇಶದ ಅರ್ಥಿಕ ಪರಿಸ್ಥಿತಿ ಬಿಗಾಡಾಯಿಸಿರುವಾಗ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸೆಂಟ್ರಲ್ ವಿಸ್ತಾ ನಿರ್ಮಾಣ ಮಾಡಿದ್ದರ ಬಗ್ಗೆ ಮೊದಲು ನಾವೇ ಪ್ರಶ್ನೆ ಎತ್ತಿದ್ದೆವು. ಈ ಯೋಜನೆಯನ್ನು ಪ್ರಧಾನಮಂತ್ರಿಯವ ಇಚ್ಛೆಗಾಗಿ ಮಾಡಲಾಗಿದೆ. ಇದರ ಅಗತ್ಯ ಇತ್ತೇ? ಹಳೆಯ ಸಂಸತ್ ಭವನ ಇನ್ನೂ ನೂರು ವರ್ಷಕ್ಕೆ ಸಾಲುತ್ತಿತ್ತು. ಹಳೆಯ ಸಂಸತ್‌ ಭವನಕ್ಕೆ ಆರೆಸ್ಸೆಸ್ ಹಾಗೂ ಬಿಜೆಪಿಗೆ ಸಂಬಂಧ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದಾರೆ ಎನ್ನುವ ಫಲಕ ಹಾಕಲು ಹೊಸ ಭವನವನ್ನು ನಿರ್ಮಾಣ ಮಾಡಲಾಗಿದೆ” ಎಂದು ಸಂಜಯ್ ರಾವುತ್ ಕಿಡಿಕಾರಿದ್ದಾರೆ.

ಪ್ರಧಾನಿಯವರು ಡಿಸೆಂಬರ್ 10, 2020 ರಂದು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....