Homeಕರ್ನಾಟಕಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

ಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

- Advertisement -
- Advertisement -

ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಇರುವುದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದ್ದರೆ, ಮತ್ತೊಂದೆಡೆ ಬಿಎಸ್‌ಪಿ (ಬಹುಜನ ಸಮಾಜ ಪಾರ್ಟಿ) ಮತ್ತು ಟಿಡಿಪಿ (ತೆಲುಗು ದೇಶಂ ಪಕ್ಷ) ಪ್ರಧಾನಿ ಮೋದಿ ಪರ ನಿಂತಿವೆ.

ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ 19 ವಿರೋಧ ಪಕ್ಷಗಳು, ಸಂಸತ್‌ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಈಗಾಗಲೇ ಘೋಷಿಸಿವೆ.

ನೂತನ ಸಂಸತ್‌ ಭವನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುವ ಸಮಾರಂಭವನ್ನು ವಿರೋಧ ಪಕ್ಷಗಳು ಬಹಿಷ್ಕರಿಸುವುದು ಸರಿಯಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಅವರು ಮೇ 28ರಂದು ನೂತನ ಸಂಸತ್‌ ಭವನ ಉದ್ಘಾಟಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಹ್ವಾನ ನೀಡಿಲ್ಲ. ಇದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ವಿರೋಧ ಪಕ್ಷಗಳ ನಿಲುವನ್ನು ಟೀಕಿಸಿ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, “ನೂತನ ಭವನವನ್ನು ನಿರ್ಮಾಣ ಮಾಡಿರುವ ಕೇಂದ್ರ ಸರ್ಕಾರವು, ಉದ್ಘಾಟನೆ ಮಾಡುವ ಹಕ್ಕನ್ನೂ ಹೊಂದಿದೆ” ಎಂದು ಪ್ರತಿಪಾದಿಸಿದ್ದಾರೆ.

“ಉದ್ಘಾಟನೆ ಸಮಾರಂಭದ ವಿಚಾರವನ್ನು ವಿರೋಧ ಪಕ್ಷಗಳು ಆದಿವಾಸಿ ಮಹಿಳೆಯ ಘನತೆಯೊಂದಿಗೆ ತಳುಕು ಹಾಕುತ್ತಿರುವುದು ಸರಿಯಲ್ಲ. ರಾಷ್ಟ್ರಪತಿ ಚುನಾವಣೆ ವೇಳೆ ಅವಿರೋಧ ಆಯ್ಕೆಗೆ ವಿರೋಧ ಪಕ್ಷಗಳು ಅನುವು ಮಾಡಿಕೊಟ್ಟಿರಲಿಲ್ಲ ಎಂಬುದನ್ನೂ ಯೋಚಿಸಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೆ ತಮಗೂ ಆಹ್ವಾನ ನೀಡಿರುವುದನ್ನು ಸ್ವಾಗತಿಸಿರುವ ಮಾಯಾವತಿ, “ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳ ಕಾರಣದಿಂದಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅಧಿಕಾರಲ್ಲಿರುವ ವೈಎಸ್‌ಆರ್‌ ಕಾಂಗ್ರೆಸ್‌, ಒಡಿಶಾದ ಬಿಜು ಜನತಾದಳ, ತೆಲುಗು ದೇಶಂ ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿವೆ.

ಇದನ್ನೂ ಓದಿರಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳೇ ಉದ್ಘಾಟಿಸಬೇಕೆಂದು ನಿರ್ದೇಶನ ನೀಡುವಂತೆ ಸುಪ್ರೀಂಗೆ ಪಿಐಎಲ್

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ತೆಲುಗು ದೇಶಂ ಪಕ್ಷ (ಟಿಡಿಪಿ) ಗುರುವಾರ ತಿಳಿಸಿದೆ.

ನಮ್ಮ ಪಕ್ಷದ ರಾಜ್ಯಸಭಾ ಸಂಸದ ರವೀಂದ್ರ ಕುಮಾರ್ ಅವರಿಗೆ ಸೂಚನೆ ನೀಡಲಾಗಿದ್ದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಪ್ರಧಾನ ಕಾರ್ಯದರ್ಶಿ ಅವರಿಂದ ಆಹ್ವಾನ ಸ್ವೀಕರಿಸಲಾಗಿದೆ. ಈಗಾಗಲೇ ರವೀಂದ್ರ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ಪಕ್ಷವು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದೆ ಎಂದು ಬುಧವಾರ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...