Homeಕರ್ನಾಟಕಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

ಸಂಸತ್‌ ಭವನ ಉದ್ಘಾಟನೆ ವಿರೋಧ ಸರಿಯಲ್ಲ; ಮೋದಿ ಪರ ನಿಂತ ಬಿಎಸ್‌ಪಿ, ಟಿಡಿಪಿ

- Advertisement -
- Advertisement -

ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಇರುವುದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದ್ದರೆ, ಮತ್ತೊಂದೆಡೆ ಬಿಎಸ್‌ಪಿ (ಬಹುಜನ ಸಮಾಜ ಪಾರ್ಟಿ) ಮತ್ತು ಟಿಡಿಪಿ (ತೆಲುಗು ದೇಶಂ ಪಕ್ಷ) ಪ್ರಧಾನಿ ಮೋದಿ ಪರ ನಿಂತಿವೆ.

ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ 19 ವಿರೋಧ ಪಕ್ಷಗಳು, ಸಂಸತ್‌ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಈಗಾಗಲೇ ಘೋಷಿಸಿವೆ.

ನೂತನ ಸಂಸತ್‌ ಭವನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುವ ಸಮಾರಂಭವನ್ನು ವಿರೋಧ ಪಕ್ಷಗಳು ಬಹಿಷ್ಕರಿಸುವುದು ಸರಿಯಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಅವರು ಮೇ 28ರಂದು ನೂತನ ಸಂಸತ್‌ ಭವನ ಉದ್ಘಾಟಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಹ್ವಾನ ನೀಡಿಲ್ಲ. ಇದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ವಿರೋಧ ಪಕ್ಷಗಳ ನಿಲುವನ್ನು ಟೀಕಿಸಿ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, “ನೂತನ ಭವನವನ್ನು ನಿರ್ಮಾಣ ಮಾಡಿರುವ ಕೇಂದ್ರ ಸರ್ಕಾರವು, ಉದ್ಘಾಟನೆ ಮಾಡುವ ಹಕ್ಕನ್ನೂ ಹೊಂದಿದೆ” ಎಂದು ಪ್ರತಿಪಾದಿಸಿದ್ದಾರೆ.

“ಉದ್ಘಾಟನೆ ಸಮಾರಂಭದ ವಿಚಾರವನ್ನು ವಿರೋಧ ಪಕ್ಷಗಳು ಆದಿವಾಸಿ ಮಹಿಳೆಯ ಘನತೆಯೊಂದಿಗೆ ತಳುಕು ಹಾಕುತ್ತಿರುವುದು ಸರಿಯಲ್ಲ. ರಾಷ್ಟ್ರಪತಿ ಚುನಾವಣೆ ವೇಳೆ ಅವಿರೋಧ ಆಯ್ಕೆಗೆ ವಿರೋಧ ಪಕ್ಷಗಳು ಅನುವು ಮಾಡಿಕೊಟ್ಟಿರಲಿಲ್ಲ ಎಂಬುದನ್ನೂ ಯೋಚಿಸಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೆ ತಮಗೂ ಆಹ್ವಾನ ನೀಡಿರುವುದನ್ನು ಸ್ವಾಗತಿಸಿರುವ ಮಾಯಾವತಿ, “ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳ ಕಾರಣದಿಂದಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅಧಿಕಾರಲ್ಲಿರುವ ವೈಎಸ್‌ಆರ್‌ ಕಾಂಗ್ರೆಸ್‌, ಒಡಿಶಾದ ಬಿಜು ಜನತಾದಳ, ತೆಲುಗು ದೇಶಂ ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿವೆ.

ಇದನ್ನೂ ಓದಿರಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳೇ ಉದ್ಘಾಟಿಸಬೇಕೆಂದು ನಿರ್ದೇಶನ ನೀಡುವಂತೆ ಸುಪ್ರೀಂಗೆ ಪಿಐಎಲ್

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ತೆಲುಗು ದೇಶಂ ಪಕ್ಷ (ಟಿಡಿಪಿ) ಗುರುವಾರ ತಿಳಿಸಿದೆ.

ನಮ್ಮ ಪಕ್ಷದ ರಾಜ್ಯಸಭಾ ಸಂಸದ ರವೀಂದ್ರ ಕುಮಾರ್ ಅವರಿಗೆ ಸೂಚನೆ ನೀಡಲಾಗಿದ್ದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಪ್ರಧಾನ ಕಾರ್ಯದರ್ಶಿ ಅವರಿಂದ ಆಹ್ವಾನ ಸ್ವೀಕರಿಸಲಾಗಿದೆ. ಈಗಾಗಲೇ ರವೀಂದ್ರ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ಪಕ್ಷವು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದೆ ಎಂದು ಬುಧವಾರ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...