Homeಕರ್ನಾಟಕಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

- Advertisement -
- Advertisement -

ಕೊರಗರದ್ದು ಇನ್ನೊಂದು “ಜೈ ಭೀಮ್” ಕಥೆ ಆಗದಿರಲಿ ಎಂದು ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಡಾ.ಎಚ್‌.ಸಿ.ಮಹದೇವಪ್ಪ ಎಚ್ಚರಿಸಿದ್ದಾರೆ.

ಫೇಸ್‌ಬುಕ್‌ ಪೋಸ್ಟ್‌ ಮಾಡಿರುವ ಅವರು, ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೋಟಾದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಬಳಸಿದ್ದಕ್ಕೆ ಅಲ್ಲಿನ ಕೊರಗ ಸಮುದಾಯದ ಮೇಲೆ ಪೊಲೀಸರು ಪ್ರಹಾರ ನಡೆಸಿದ್ದರು. ಇಂತಹ ಹೀನ ಕೃತ್ಯ ಎಸಗಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು. ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಇದೀಗ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಇದು ಮೇಲ್ನೋಟಕ್ಕೆ ಅತ್ಯಂತ ಸುಳ್ಳಿನ ಪ್ರಕರಣವಾಗಿ ಕಾಣುತ್ತಿದೆ ಎಂದು ಮಹದೇವಪ್ಪ ತಿಳಿಸಿದ್ದಾರೆ.

ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಲಾಗಿದೆ. ಒಂದು ವೇಳೆ ಪೊಲೀಸರ ಮೇಲೆ ಕೊರಗರು ಹಲ್ಲೆ ನಡೆಸಿದ್ದೇ ನಿಜವಾದರೆ, ಈ ಸಂಗತಿಯನ್ನು ಪೊಲೀಸರು ಅಂದೇ ಏಕೆ ತಿಳಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಯಾವ ಕಾರಣಕ್ಕೆ ಸಚಿವರ ಹೇಳಿಕೆಗಳು ಪ್ರಕಟಗೊಂಡ ಮೇಲೆ ಈ ರೀತಿ ಹೇಳಿಕೆ ನೀಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂಬುದರ ಬಗ್ಗೆ ಸರಿಯಾದ ಸ್ಪಷ್ಟತೆ ಇಲ್ಲ. ಮೇಲಾಗಿ ಕೊರಗರು ಮೃದು ಸ್ವಭಾವದವರೂ ಆಗಿರುವುದು ಇಲ್ಲಿನ ಅನುಮಾನಗಳಿಗೆ ಮೂಲ ಕಾರಣ ಎಂದು ಎಂದು ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದೊಂದು ಸುಳ್ಳು ಪ್ರಕರಣ ಎಂದೇ ನನಗೆ ಅನಿಸುತ್ತಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರು ಕೊರಗರ ಪರವಾಗಿ ನಿಲ್ಲಲು ಕೋರುತ್ತೇನೆ. ಇನ್ನು ಹಲ್ಲೆ ಯಾರ ಮೇಲೆ ನಡೆದಿದ್ದರೂ ಅದು ತಪ್ಪೇ. ಆದರೆ ಇದನ್ನೇ ಸುಳ್ಳು ಬಂಡವಾಳವಾಗಿಟ್ಟುಕೊಂಡು ಪ್ರಕರಣ ದಾಖಲಿಸುವ, ಅದರಲ್ಲೂ ಜಾಮೀನು ರಹಿತ ಪ್ರಕರಣ ದಾಖಲಿಸುವುದು ನಿಜಕ್ಕೂ ಅನ್ಯಾಯದ ಪರಮಾವಧಿ ಮತ್ತು ಕೆಳ ಸಮುದಾಯದ ಮೇಲೆ ನಡೆದ ದೌರ್ಜನ್ಯವೇ ಆಗಿರುತ್ತದೆ ಎಂದಿದ್ದಾರೆ.

ಈ ಕೋಮುವಾದಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಜನ ಸಮುದಾಯಗಳಿಗೆ ಅಷ್ಟಾಗಿ ರಕ್ಷಣೆ ಇಲ್ಲದಿರುವಾಗ ಇಂತಹ ಘಟನೆಗಳು ನಡೆದಿಲ್ಲ ಎಂದುಕೊಳ್ಳಲು ಆಗದು. ಹೀಗಾಗಿಯೇ ಕಾಂಗ್ರೆಸ್ ಪಕ್ಷವು ನೊಂದ ಸಮುದಾಯದ ಪರವಾಗಿ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಕಲಿ ಪ್ರಕರಣ ದಾಖಲಿಸಲು ಹೊರಟಿರುವ ಪೊಲೀಸರು ಮತ್ತು ಸವರ್ಣೀಯರ ಹಿತಾಸಕ್ತಿಯನ್ನು ಕಾಪಾಡಲು ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕೂಡಲೇ ಅವರ ಮೇಲಿನ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಎಲ್ಲಾ ದಲಿತ ಸಂಘರ್ಷ ಸಮಿತಿಗಳ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಅವರು, “ಕೊರಗರ ಕಥೆ ಇನ್ನೊಂದು ಜೈ ಭೀಮ್ ಸಿನಿಮಾದ ಪ್ರಕರಣದಂತೆ ಆಗದಿರಲಿ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...