Homeಮುಖಪುಟಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

- Advertisement -
- Advertisement -

ನಿಂತಿರುವವನಿಗೆ ಗೊತ್ತಾಗದ ಹಾಗೆ ಅವನ ಚಡ್ಡಿ ಕಳಚಿದರೆ ಅವನೇ ಸಾಹುಕಾರ (ಯಜಮಾನ)’ ಎಂಬುದು ಪಲಾಸ ಸಿನೆಮಾದಲ್ಲಿ ಬರುವ ದೊಡ್ಡ ಯಜಮಾನನ ಡೈಲಾಗ್. ಮೇಲ್ಜಾತಿ ಭೂಮಾಲೀಕರ ಯಜಮಾನಿಕೆಯ ದರ್ಪ ದಬ್ಬಾಳಿಕೆಗೆ ನಲುಗಿದ ಕೆಳಜಾತಿಯ ಸಮುದಾಯ. ದೌರ್ಜನ್ಯವನ್ನು ಸಹಿಸದೆ, ಎಚ್ಚೆತ್ತ ಕೆಳಜಾತಿಯ ಯುವಕರು ಹಾಗೂ ಭೂಮಾಲೀಕನ ನಡುವೆ ನಡೆಯುವ ಸಂಘರ್ಷದ ಕತೆಯೇ “ಪಲಾಸ 1978” ಸಿನೆಮಾ.

ಟಾಲಿವುಡ್ ಎಂದಾಕ್ಷಣ ಬಾರಿ ಬಡ್ಜೆಟ್‍ನ ಹಾಗೂ ಅಬ್ಬರಿಸಿ ಬೊಬ್ಬಿರಿಯುವ ಹಿರೋಗಳ ಸಿನೆಮಾಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಆಗಾಗ ತೆಲುಗು ಸಿನೆಮಾ ರಂಗದಲ್ಲಿಯೂ ಸಾಮಾಜಿಕ ಕಳಕಳಿಯುಳ್ಳ ಸಿನೆಮಾಗಳು ಮಿಣುಕು ಹುಳುಗಳಂತೆ ಬಂದು ಹೋಗುತ್ತಲೇ ಇವೆ. ಪಲಾಸ 1978 ಸಿನೆಮಾ ಇತ್ತೀಚೆಗೆ ತೆರೆಕಂಡ ಅಂತಹದ್ದೇ ಒಂದು ಗಮನಾರ್ಹ ಸಿನೆಮಾ.

ಈ ಸಿನೆಮಾ ಗ್ರಾಮೀಣ ಭಾರತದ ಜಾತಿ ವ್ಯವಸ್ಥೆಯ ವಾಸ್ತವಗಳನ್ನು ಚರ್ಚೆ ಮಾಡುವ ದಿಕ್ಕಿನಲ್ಲಿ ಯಶಸ್ವಿಯಾಗಿದೆ. ಮೋಹನ್ ರಾವ್, ರಂಗರಾವ್ ಎಂಬ ಕೆಳಜಾತಿಯ ಯುವಕರು ಮತ್ತು ಆಸ್ತಿ ಅಂತಸ್ತು ಇರುವ ಮೇಲ್ಜಾತಿಯ ಇಬ್ಬರು ಸಹೋದರರ ನಡುವೆ ನಡೆಯುವ ಕಥೆಯಾಗಿದ್ದರೂ ಸಹ, ಜಾತಿ ವ್ಯವಸ್ಥೆ ಎಂಬ ಜೇಡರಬಲೆಯಲ್ಲಿ ಸಿಕ್ಕಿಕೊಳ್ಳುವ ದಲಿತರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಇದು ತೋರಿಸಿದೆ.

ಸಿನೆಮಾದಲ್ಲಿ ಬರುವ ಸಬಾಸ್ಟಿಯನ್ ಎಂಬ ಪೊಲೀಸ್ ಪಾತ್ರ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ ಹಾಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು, ಆಗಲೇ ನಮ್ಮ ಉದ್ದಾರ ಎಂಬ ಚರ್ಚೆಯನ್ನು ಎತ್ತುತ್ತದೆ. ಆದರೆ, ಜಾತಿ ವ್ಯವಸ್ಥೆ ತಾನು ಚಾಚಿರುವ ಕಬಂಧಬಾಹುಗಳನ್ನು ಕಾರ್ಯಂಗ, ಶಾಸಕಾಂಗವಲ್ಲದೇ ನ್ಯಾಯಾಂಗದವರೆಗೂ ಎಷ್ಟರ ಮಟ್ಟಿಗೆ ವಿಸ್ತರಿಸಿದೆ ಎಂಬುದು ಸಬಾಸ್ಟಿಯನ್‍ಗೆ ಅರ್ಥವಾಗುವುದು, ಆತ ನಡೆಸುತ್ತಿದ್ದ ಕೇಸ್ ಸೋಲುಂಡ ಸಂದರ್ಭದಲ್ಲಿ. ಪೊಲೀಸ್ ಆಗಿದ್ದ ಸಬಾಸ್ಟಿಯನ್ ಕೊನೆಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅನಿವಾರ್ಯತೆಗಳನ್ನು ಎದುರಿಸಲೇಬೇಕೆಂದು ಮೋಹಾನ್‍ರಾವ್‍ಗೆ ಚಿಕ್ಕ ಸಾಹುಕಾರನನ್ನು ಕೊಲ್ಲಲು ಹೇಳುತ್ತಾನೆ.

ಸಬಾಸ್ಟಿಯನ್ ಈ ಮೂಲಕ ಮೇಲ್ಜಾತಿಯ ದೌರ್ಜನ್ಯದ ಮನಸ್ಥಿತಿಯನ್ನು ಕೊಲ್ಲಲು ಇರುವ ದುಬಾರಿ ಸಾಧ್ಯತೆಗಳಿಗೆ ಪ್ರತೀಕವಾಗಿ ನಿಲ್ಲುತ್ತಾನೆ. ಸಬಾಸ್ಟಿಯನ್ ಮತ್ತು ಮೋಹನ್ ರಾವ್ ಚರ್ಚೆಗಳು ದಲಿತ ಯುವಜನರ ಹೊಸಪೀಳಿಗೆಯ ಪ್ರಶ್ನೆಗಳಂತೆ ಕಾಣಿಸುತ್ತವೆ. ಇನ್ನೂ ದೊಡ್ಡ ಯಜಮಾನನ ಮನೆಯಲ್ಲಿ ನಡೆಯುವ ಚರ್ಚೆಗಳು ಮೇಲ್ಜಾತಿಯ ಯಜಮಾನರ ಕುತಂತ್ರಗಳನ್ನು ಬಯಲುಗೊಳಿಸುತ್ತವೆ.
ಪಲಾಸ ಸಿನೆಮಾ ಗ್ರಾಮೀಣ ಭಾಗದಲ್ಲಿನ ಕೆಳಜಾತಿಯ ಜನರು ಜಾತಿಯ ಕೀಳರಿಮೆಯ ಕಾರಣಕ್ಕೆ ಪ್ರತಿಕ್ಷಣ ಹೇಗೆ ನಿಂದನೆ, ಅಪಮಾನಗಳ ಜೊತೆಗೆ ಗುದ್ದಾಡಬೇಕು ಎಂಬುದನ್ನು ತೋರಿಸಿದೆ.

1978ರಲ್ಲಿ ಪಲಾಸ ಎಂಬ ಹಳ್ಳಿಯಲ್ಲಿ ನಡೆದ ನೈಜ ಘಟನೆಗಳ ಆಧಾರವಾಗಿ ಬಂದ ಈ ಸಿನೆಮಾ 2020ರಲ್ಲೂ ನಡೆಯತ್ತಿರುವ ಜಾತಿದೌರ್ಜನ್ಯಗಳು, ಜಾತಿ ಕಾರಣಕ್ಕಾಗಿ ನಡೆಯುವ ಕೊಲೆಗಳು, ಅತ್ಯಾಚಾರಗಳನ್ನು ಹೇಗೆ ನೋಡಬೇಕೆಂಬುದನ್ನು ತೋರಿಸುತ್ತದೆ. ಈಗಲೂ ಹಳ್ಳಿಗಳಲ್ಲಿ ಮೇಲ್ಜಾತಿ ಕೆಳಜಾತಿಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಸಾಮಾನ್ಯವಾಗಿವೆ ಇನ್ನೂ ಸಹ ಜಾತಿ ಮನಸ್ಥಿತಿಯೆಂಬುದು ಬದಲಾಗದೇ ಉಳಿದುಬಿಟ್ಟಿರುವುದಕ್ಕೆ ಈ ಸಿನೆಮಾ ಸಾಕ್ಷಿಯನ್ನೊದಗಿಸಿದೆ.

ಪಲಾಸ ಗ್ರಾಮೀಣ ಭಾರತದ ದೈನಂದಿನ ವಾಸ್ತವಕ್ಕೆ ಸಾಕ್ಷಿಯಾಗಿ ನಿಂತಿದೆ. ಚಿಕ್ಕ ಯಜಮಾನನ ಪಾತ್ರ ಮಾಡಿರುವ ರಘುಕುಂಚೆ ಈ ಸಿನೆಮಾಕ್ಕೆ ವಿಶೇಷವಾದ ಸಂಗೀತವನ್ನು ನೀಡಿದ್ದಾರೆ. ಹಾಡು ಕುಣಿತವನ್ನು ರಕ್ತಗತವಾಗಿಸಿಕೊಂಡಿರುವ ಕೆಳಜಾತಿಯ ಜನಕ್ಕೆ ತಮ್ಮ ಕಲೆಯೂ ಸಹ ದೊಡ್ಡವರ ಕಣ್ಣುಕುಕ್ಕುವ ರೀತಿ ಮೋಹನ್ ರಾವ್‍ಗೆ ಬಾಲ್ಯದಲ್ಲಿಯೇ ಅನುಭವವಾಗುತ್ತದೆ. ಇದು ಕಲೆಯಲ್ಲಿನ ಜಾತಿ ರಾಜಕಾರಣವನ್ನು ಎತ್ತಿತೋರಿಸುತ್ತದೆ. ಪಲಾಸ ಸಿನೆಮಾ ಖಂಡಿತ ಟಾಲಿವುಡ್‍ನಲ್ಲಿ ದಲಿತರ ಸಮಸ್ಯೆಗಳನ್ನು ಪ್ರಶ್ನಿಸುವ ಮತ್ತು ಮತ್ತು ಜಾತಿ ನಿರ್ಮೂಲನೆಯ ಬಗ್ಗೆ ಚರ್ಚಿಸುವ ಸಿನೆಮಾಗಳಿಗೆ ಮೈಲಿಗಲ್ಲಾಗಲೆಂದು ಆಶಿಸೋಣ. ಇನ್ನು ನಿರ್ದೇಶಕ ಕರಣಕುಮಾರ ಮೊದಲ ಸಿನೆಮಾದಲ್ಲೇ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...