Homeಮುಖಪುಟಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

- Advertisement -
- Advertisement -

ನಿಂತಿರುವವನಿಗೆ ಗೊತ್ತಾಗದ ಹಾಗೆ ಅವನ ಚಡ್ಡಿ ಕಳಚಿದರೆ ಅವನೇ ಸಾಹುಕಾರ (ಯಜಮಾನ)’ ಎಂಬುದು ಪಲಾಸ ಸಿನೆಮಾದಲ್ಲಿ ಬರುವ ದೊಡ್ಡ ಯಜಮಾನನ ಡೈಲಾಗ್. ಮೇಲ್ಜಾತಿ ಭೂಮಾಲೀಕರ ಯಜಮಾನಿಕೆಯ ದರ್ಪ ದಬ್ಬಾಳಿಕೆಗೆ ನಲುಗಿದ ಕೆಳಜಾತಿಯ ಸಮುದಾಯ. ದೌರ್ಜನ್ಯವನ್ನು ಸಹಿಸದೆ, ಎಚ್ಚೆತ್ತ ಕೆಳಜಾತಿಯ ಯುವಕರು ಹಾಗೂ ಭೂಮಾಲೀಕನ ನಡುವೆ ನಡೆಯುವ ಸಂಘರ್ಷದ ಕತೆಯೇ “ಪಲಾಸ 1978” ಸಿನೆಮಾ.

ಟಾಲಿವುಡ್ ಎಂದಾಕ್ಷಣ ಬಾರಿ ಬಡ್ಜೆಟ್‍ನ ಹಾಗೂ ಅಬ್ಬರಿಸಿ ಬೊಬ್ಬಿರಿಯುವ ಹಿರೋಗಳ ಸಿನೆಮಾಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಆಗಾಗ ತೆಲುಗು ಸಿನೆಮಾ ರಂಗದಲ್ಲಿಯೂ ಸಾಮಾಜಿಕ ಕಳಕಳಿಯುಳ್ಳ ಸಿನೆಮಾಗಳು ಮಿಣುಕು ಹುಳುಗಳಂತೆ ಬಂದು ಹೋಗುತ್ತಲೇ ಇವೆ. ಪಲಾಸ 1978 ಸಿನೆಮಾ ಇತ್ತೀಚೆಗೆ ತೆರೆಕಂಡ ಅಂತಹದ್ದೇ ಒಂದು ಗಮನಾರ್ಹ ಸಿನೆಮಾ.

ಈ ಸಿನೆಮಾ ಗ್ರಾಮೀಣ ಭಾರತದ ಜಾತಿ ವ್ಯವಸ್ಥೆಯ ವಾಸ್ತವಗಳನ್ನು ಚರ್ಚೆ ಮಾಡುವ ದಿಕ್ಕಿನಲ್ಲಿ ಯಶಸ್ವಿಯಾಗಿದೆ. ಮೋಹನ್ ರಾವ್, ರಂಗರಾವ್ ಎಂಬ ಕೆಳಜಾತಿಯ ಯುವಕರು ಮತ್ತು ಆಸ್ತಿ ಅಂತಸ್ತು ಇರುವ ಮೇಲ್ಜಾತಿಯ ಇಬ್ಬರು ಸಹೋದರರ ನಡುವೆ ನಡೆಯುವ ಕಥೆಯಾಗಿದ್ದರೂ ಸಹ, ಜಾತಿ ವ್ಯವಸ್ಥೆ ಎಂಬ ಜೇಡರಬಲೆಯಲ್ಲಿ ಸಿಕ್ಕಿಕೊಳ್ಳುವ ದಲಿತರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಇದು ತೋರಿಸಿದೆ.

ಸಿನೆಮಾದಲ್ಲಿ ಬರುವ ಸಬಾಸ್ಟಿಯನ್ ಎಂಬ ಪೊಲೀಸ್ ಪಾತ್ರ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ ಹಾಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು, ಆಗಲೇ ನಮ್ಮ ಉದ್ದಾರ ಎಂಬ ಚರ್ಚೆಯನ್ನು ಎತ್ತುತ್ತದೆ. ಆದರೆ, ಜಾತಿ ವ್ಯವಸ್ಥೆ ತಾನು ಚಾಚಿರುವ ಕಬಂಧಬಾಹುಗಳನ್ನು ಕಾರ್ಯಂಗ, ಶಾಸಕಾಂಗವಲ್ಲದೇ ನ್ಯಾಯಾಂಗದವರೆಗೂ ಎಷ್ಟರ ಮಟ್ಟಿಗೆ ವಿಸ್ತರಿಸಿದೆ ಎಂಬುದು ಸಬಾಸ್ಟಿಯನ್‍ಗೆ ಅರ್ಥವಾಗುವುದು, ಆತ ನಡೆಸುತ್ತಿದ್ದ ಕೇಸ್ ಸೋಲುಂಡ ಸಂದರ್ಭದಲ್ಲಿ. ಪೊಲೀಸ್ ಆಗಿದ್ದ ಸಬಾಸ್ಟಿಯನ್ ಕೊನೆಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅನಿವಾರ್ಯತೆಗಳನ್ನು ಎದುರಿಸಲೇಬೇಕೆಂದು ಮೋಹಾನ್‍ರಾವ್‍ಗೆ ಚಿಕ್ಕ ಸಾಹುಕಾರನನ್ನು ಕೊಲ್ಲಲು ಹೇಳುತ್ತಾನೆ.

ಸಬಾಸ್ಟಿಯನ್ ಈ ಮೂಲಕ ಮೇಲ್ಜಾತಿಯ ದೌರ್ಜನ್ಯದ ಮನಸ್ಥಿತಿಯನ್ನು ಕೊಲ್ಲಲು ಇರುವ ದುಬಾರಿ ಸಾಧ್ಯತೆಗಳಿಗೆ ಪ್ರತೀಕವಾಗಿ ನಿಲ್ಲುತ್ತಾನೆ. ಸಬಾಸ್ಟಿಯನ್ ಮತ್ತು ಮೋಹನ್ ರಾವ್ ಚರ್ಚೆಗಳು ದಲಿತ ಯುವಜನರ ಹೊಸಪೀಳಿಗೆಯ ಪ್ರಶ್ನೆಗಳಂತೆ ಕಾಣಿಸುತ್ತವೆ. ಇನ್ನೂ ದೊಡ್ಡ ಯಜಮಾನನ ಮನೆಯಲ್ಲಿ ನಡೆಯುವ ಚರ್ಚೆಗಳು ಮೇಲ್ಜಾತಿಯ ಯಜಮಾನರ ಕುತಂತ್ರಗಳನ್ನು ಬಯಲುಗೊಳಿಸುತ್ತವೆ.
ಪಲಾಸ ಸಿನೆಮಾ ಗ್ರಾಮೀಣ ಭಾಗದಲ್ಲಿನ ಕೆಳಜಾತಿಯ ಜನರು ಜಾತಿಯ ಕೀಳರಿಮೆಯ ಕಾರಣಕ್ಕೆ ಪ್ರತಿಕ್ಷಣ ಹೇಗೆ ನಿಂದನೆ, ಅಪಮಾನಗಳ ಜೊತೆಗೆ ಗುದ್ದಾಡಬೇಕು ಎಂಬುದನ್ನು ತೋರಿಸಿದೆ.

1978ರಲ್ಲಿ ಪಲಾಸ ಎಂಬ ಹಳ್ಳಿಯಲ್ಲಿ ನಡೆದ ನೈಜ ಘಟನೆಗಳ ಆಧಾರವಾಗಿ ಬಂದ ಈ ಸಿನೆಮಾ 2020ರಲ್ಲೂ ನಡೆಯತ್ತಿರುವ ಜಾತಿದೌರ್ಜನ್ಯಗಳು, ಜಾತಿ ಕಾರಣಕ್ಕಾಗಿ ನಡೆಯುವ ಕೊಲೆಗಳು, ಅತ್ಯಾಚಾರಗಳನ್ನು ಹೇಗೆ ನೋಡಬೇಕೆಂಬುದನ್ನು ತೋರಿಸುತ್ತದೆ. ಈಗಲೂ ಹಳ್ಳಿಗಳಲ್ಲಿ ಮೇಲ್ಜಾತಿ ಕೆಳಜಾತಿಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಸಾಮಾನ್ಯವಾಗಿವೆ ಇನ್ನೂ ಸಹ ಜಾತಿ ಮನಸ್ಥಿತಿಯೆಂಬುದು ಬದಲಾಗದೇ ಉಳಿದುಬಿಟ್ಟಿರುವುದಕ್ಕೆ ಈ ಸಿನೆಮಾ ಸಾಕ್ಷಿಯನ್ನೊದಗಿಸಿದೆ.

ಪಲಾಸ ಗ್ರಾಮೀಣ ಭಾರತದ ದೈನಂದಿನ ವಾಸ್ತವಕ್ಕೆ ಸಾಕ್ಷಿಯಾಗಿ ನಿಂತಿದೆ. ಚಿಕ್ಕ ಯಜಮಾನನ ಪಾತ್ರ ಮಾಡಿರುವ ರಘುಕುಂಚೆ ಈ ಸಿನೆಮಾಕ್ಕೆ ವಿಶೇಷವಾದ ಸಂಗೀತವನ್ನು ನೀಡಿದ್ದಾರೆ. ಹಾಡು ಕುಣಿತವನ್ನು ರಕ್ತಗತವಾಗಿಸಿಕೊಂಡಿರುವ ಕೆಳಜಾತಿಯ ಜನಕ್ಕೆ ತಮ್ಮ ಕಲೆಯೂ ಸಹ ದೊಡ್ಡವರ ಕಣ್ಣುಕುಕ್ಕುವ ರೀತಿ ಮೋಹನ್ ರಾವ್‍ಗೆ ಬಾಲ್ಯದಲ್ಲಿಯೇ ಅನುಭವವಾಗುತ್ತದೆ. ಇದು ಕಲೆಯಲ್ಲಿನ ಜಾತಿ ರಾಜಕಾರಣವನ್ನು ಎತ್ತಿತೋರಿಸುತ್ತದೆ. ಪಲಾಸ ಸಿನೆಮಾ ಖಂಡಿತ ಟಾಲಿವುಡ್‍ನಲ್ಲಿ ದಲಿತರ ಸಮಸ್ಯೆಗಳನ್ನು ಪ್ರಶ್ನಿಸುವ ಮತ್ತು ಮತ್ತು ಜಾತಿ ನಿರ್ಮೂಲನೆಯ ಬಗ್ಗೆ ಚರ್ಚಿಸುವ ಸಿನೆಮಾಗಳಿಗೆ ಮೈಲಿಗಲ್ಲಾಗಲೆಂದು ಆಶಿಸೋಣ. ಇನ್ನು ನಿರ್ದೇಶಕ ಕರಣಕುಮಾರ ಮೊದಲ ಸಿನೆಮಾದಲ್ಲೇ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...