Homeಮುಖಪುಟಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

- Advertisement -
- Advertisement -

ನಿಂತಿರುವವನಿಗೆ ಗೊತ್ತಾಗದ ಹಾಗೆ ಅವನ ಚಡ್ಡಿ ಕಳಚಿದರೆ ಅವನೇ ಸಾಹುಕಾರ (ಯಜಮಾನ)’ ಎಂಬುದು ಪಲಾಸ ಸಿನೆಮಾದಲ್ಲಿ ಬರುವ ದೊಡ್ಡ ಯಜಮಾನನ ಡೈಲಾಗ್. ಮೇಲ್ಜಾತಿ ಭೂಮಾಲೀಕರ ಯಜಮಾನಿಕೆಯ ದರ್ಪ ದಬ್ಬಾಳಿಕೆಗೆ ನಲುಗಿದ ಕೆಳಜಾತಿಯ ಸಮುದಾಯ. ದೌರ್ಜನ್ಯವನ್ನು ಸಹಿಸದೆ, ಎಚ್ಚೆತ್ತ ಕೆಳಜಾತಿಯ ಯುವಕರು ಹಾಗೂ ಭೂಮಾಲೀಕನ ನಡುವೆ ನಡೆಯುವ ಸಂಘರ್ಷದ ಕತೆಯೇ “ಪಲಾಸ 1978” ಸಿನೆಮಾ.

ಟಾಲಿವುಡ್ ಎಂದಾಕ್ಷಣ ಬಾರಿ ಬಡ್ಜೆಟ್‍ನ ಹಾಗೂ ಅಬ್ಬರಿಸಿ ಬೊಬ್ಬಿರಿಯುವ ಹಿರೋಗಳ ಸಿನೆಮಾಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಆಗಾಗ ತೆಲುಗು ಸಿನೆಮಾ ರಂಗದಲ್ಲಿಯೂ ಸಾಮಾಜಿಕ ಕಳಕಳಿಯುಳ್ಳ ಸಿನೆಮಾಗಳು ಮಿಣುಕು ಹುಳುಗಳಂತೆ ಬಂದು ಹೋಗುತ್ತಲೇ ಇವೆ. ಪಲಾಸ 1978 ಸಿನೆಮಾ ಇತ್ತೀಚೆಗೆ ತೆರೆಕಂಡ ಅಂತಹದ್ದೇ ಒಂದು ಗಮನಾರ್ಹ ಸಿನೆಮಾ.

ಈ ಸಿನೆಮಾ ಗ್ರಾಮೀಣ ಭಾರತದ ಜಾತಿ ವ್ಯವಸ್ಥೆಯ ವಾಸ್ತವಗಳನ್ನು ಚರ್ಚೆ ಮಾಡುವ ದಿಕ್ಕಿನಲ್ಲಿ ಯಶಸ್ವಿಯಾಗಿದೆ. ಮೋಹನ್ ರಾವ್, ರಂಗರಾವ್ ಎಂಬ ಕೆಳಜಾತಿಯ ಯುವಕರು ಮತ್ತು ಆಸ್ತಿ ಅಂತಸ್ತು ಇರುವ ಮೇಲ್ಜಾತಿಯ ಇಬ್ಬರು ಸಹೋದರರ ನಡುವೆ ನಡೆಯುವ ಕಥೆಯಾಗಿದ್ದರೂ ಸಹ, ಜಾತಿ ವ್ಯವಸ್ಥೆ ಎಂಬ ಜೇಡರಬಲೆಯಲ್ಲಿ ಸಿಕ್ಕಿಕೊಳ್ಳುವ ದಲಿತರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಇದು ತೋರಿಸಿದೆ.

ಸಿನೆಮಾದಲ್ಲಿ ಬರುವ ಸಬಾಸ್ಟಿಯನ್ ಎಂಬ ಪೊಲೀಸ್ ಪಾತ್ರ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ ಹಾಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು, ಆಗಲೇ ನಮ್ಮ ಉದ್ದಾರ ಎಂಬ ಚರ್ಚೆಯನ್ನು ಎತ್ತುತ್ತದೆ. ಆದರೆ, ಜಾತಿ ವ್ಯವಸ್ಥೆ ತಾನು ಚಾಚಿರುವ ಕಬಂಧಬಾಹುಗಳನ್ನು ಕಾರ್ಯಂಗ, ಶಾಸಕಾಂಗವಲ್ಲದೇ ನ್ಯಾಯಾಂಗದವರೆಗೂ ಎಷ್ಟರ ಮಟ್ಟಿಗೆ ವಿಸ್ತರಿಸಿದೆ ಎಂಬುದು ಸಬಾಸ್ಟಿಯನ್‍ಗೆ ಅರ್ಥವಾಗುವುದು, ಆತ ನಡೆಸುತ್ತಿದ್ದ ಕೇಸ್ ಸೋಲುಂಡ ಸಂದರ್ಭದಲ್ಲಿ. ಪೊಲೀಸ್ ಆಗಿದ್ದ ಸಬಾಸ್ಟಿಯನ್ ಕೊನೆಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅನಿವಾರ್ಯತೆಗಳನ್ನು ಎದುರಿಸಲೇಬೇಕೆಂದು ಮೋಹಾನ್‍ರಾವ್‍ಗೆ ಚಿಕ್ಕ ಸಾಹುಕಾರನನ್ನು ಕೊಲ್ಲಲು ಹೇಳುತ್ತಾನೆ.

ಸಬಾಸ್ಟಿಯನ್ ಈ ಮೂಲಕ ಮೇಲ್ಜಾತಿಯ ದೌರ್ಜನ್ಯದ ಮನಸ್ಥಿತಿಯನ್ನು ಕೊಲ್ಲಲು ಇರುವ ದುಬಾರಿ ಸಾಧ್ಯತೆಗಳಿಗೆ ಪ್ರತೀಕವಾಗಿ ನಿಲ್ಲುತ್ತಾನೆ. ಸಬಾಸ್ಟಿಯನ್ ಮತ್ತು ಮೋಹನ್ ರಾವ್ ಚರ್ಚೆಗಳು ದಲಿತ ಯುವಜನರ ಹೊಸಪೀಳಿಗೆಯ ಪ್ರಶ್ನೆಗಳಂತೆ ಕಾಣಿಸುತ್ತವೆ. ಇನ್ನೂ ದೊಡ್ಡ ಯಜಮಾನನ ಮನೆಯಲ್ಲಿ ನಡೆಯುವ ಚರ್ಚೆಗಳು ಮೇಲ್ಜಾತಿಯ ಯಜಮಾನರ ಕುತಂತ್ರಗಳನ್ನು ಬಯಲುಗೊಳಿಸುತ್ತವೆ.
ಪಲಾಸ ಸಿನೆಮಾ ಗ್ರಾಮೀಣ ಭಾಗದಲ್ಲಿನ ಕೆಳಜಾತಿಯ ಜನರು ಜಾತಿಯ ಕೀಳರಿಮೆಯ ಕಾರಣಕ್ಕೆ ಪ್ರತಿಕ್ಷಣ ಹೇಗೆ ನಿಂದನೆ, ಅಪಮಾನಗಳ ಜೊತೆಗೆ ಗುದ್ದಾಡಬೇಕು ಎಂಬುದನ್ನು ತೋರಿಸಿದೆ.

1978ರಲ್ಲಿ ಪಲಾಸ ಎಂಬ ಹಳ್ಳಿಯಲ್ಲಿ ನಡೆದ ನೈಜ ಘಟನೆಗಳ ಆಧಾರವಾಗಿ ಬಂದ ಈ ಸಿನೆಮಾ 2020ರಲ್ಲೂ ನಡೆಯತ್ತಿರುವ ಜಾತಿದೌರ್ಜನ್ಯಗಳು, ಜಾತಿ ಕಾರಣಕ್ಕಾಗಿ ನಡೆಯುವ ಕೊಲೆಗಳು, ಅತ್ಯಾಚಾರಗಳನ್ನು ಹೇಗೆ ನೋಡಬೇಕೆಂಬುದನ್ನು ತೋರಿಸುತ್ತದೆ. ಈಗಲೂ ಹಳ್ಳಿಗಳಲ್ಲಿ ಮೇಲ್ಜಾತಿ ಕೆಳಜಾತಿಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಸಾಮಾನ್ಯವಾಗಿವೆ ಇನ್ನೂ ಸಹ ಜಾತಿ ಮನಸ್ಥಿತಿಯೆಂಬುದು ಬದಲಾಗದೇ ಉಳಿದುಬಿಟ್ಟಿರುವುದಕ್ಕೆ ಈ ಸಿನೆಮಾ ಸಾಕ್ಷಿಯನ್ನೊದಗಿಸಿದೆ.

ಪಲಾಸ ಗ್ರಾಮೀಣ ಭಾರತದ ದೈನಂದಿನ ವಾಸ್ತವಕ್ಕೆ ಸಾಕ್ಷಿಯಾಗಿ ನಿಂತಿದೆ. ಚಿಕ್ಕ ಯಜಮಾನನ ಪಾತ್ರ ಮಾಡಿರುವ ರಘುಕುಂಚೆ ಈ ಸಿನೆಮಾಕ್ಕೆ ವಿಶೇಷವಾದ ಸಂಗೀತವನ್ನು ನೀಡಿದ್ದಾರೆ. ಹಾಡು ಕುಣಿತವನ್ನು ರಕ್ತಗತವಾಗಿಸಿಕೊಂಡಿರುವ ಕೆಳಜಾತಿಯ ಜನಕ್ಕೆ ತಮ್ಮ ಕಲೆಯೂ ಸಹ ದೊಡ್ಡವರ ಕಣ್ಣುಕುಕ್ಕುವ ರೀತಿ ಮೋಹನ್ ರಾವ್‍ಗೆ ಬಾಲ್ಯದಲ್ಲಿಯೇ ಅನುಭವವಾಗುತ್ತದೆ. ಇದು ಕಲೆಯಲ್ಲಿನ ಜಾತಿ ರಾಜಕಾರಣವನ್ನು ಎತ್ತಿತೋರಿಸುತ್ತದೆ. ಪಲಾಸ ಸಿನೆಮಾ ಖಂಡಿತ ಟಾಲಿವುಡ್‍ನಲ್ಲಿ ದಲಿತರ ಸಮಸ್ಯೆಗಳನ್ನು ಪ್ರಶ್ನಿಸುವ ಮತ್ತು ಮತ್ತು ಜಾತಿ ನಿರ್ಮೂಲನೆಯ ಬಗ್ಗೆ ಚರ್ಚಿಸುವ ಸಿನೆಮಾಗಳಿಗೆ ಮೈಲಿಗಲ್ಲಾಗಲೆಂದು ಆಶಿಸೋಣ. ಇನ್ನು ನಿರ್ದೇಶಕ ಕರಣಕುಮಾರ ಮೊದಲ ಸಿನೆಮಾದಲ್ಲೇ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...