Homeಮುಖಪುಟಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

- Advertisement -
- Advertisement -

ನಿಂತಿರುವವನಿಗೆ ಗೊತ್ತಾಗದ ಹಾಗೆ ಅವನ ಚಡ್ಡಿ ಕಳಚಿದರೆ ಅವನೇ ಸಾಹುಕಾರ (ಯಜಮಾನ)’ ಎಂಬುದು ಪಲಾಸ ಸಿನೆಮಾದಲ್ಲಿ ಬರುವ ದೊಡ್ಡ ಯಜಮಾನನ ಡೈಲಾಗ್. ಮೇಲ್ಜಾತಿ ಭೂಮಾಲೀಕರ ಯಜಮಾನಿಕೆಯ ದರ್ಪ ದಬ್ಬಾಳಿಕೆಗೆ ನಲುಗಿದ ಕೆಳಜಾತಿಯ ಸಮುದಾಯ. ದೌರ್ಜನ್ಯವನ್ನು ಸಹಿಸದೆ, ಎಚ್ಚೆತ್ತ ಕೆಳಜಾತಿಯ ಯುವಕರು ಹಾಗೂ ಭೂಮಾಲೀಕನ ನಡುವೆ ನಡೆಯುವ ಸಂಘರ್ಷದ ಕತೆಯೇ “ಪಲಾಸ 1978” ಸಿನೆಮಾ.

ಟಾಲಿವುಡ್ ಎಂದಾಕ್ಷಣ ಬಾರಿ ಬಡ್ಜೆಟ್‍ನ ಹಾಗೂ ಅಬ್ಬರಿಸಿ ಬೊಬ್ಬಿರಿಯುವ ಹಿರೋಗಳ ಸಿನೆಮಾಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಆಗಾಗ ತೆಲುಗು ಸಿನೆಮಾ ರಂಗದಲ್ಲಿಯೂ ಸಾಮಾಜಿಕ ಕಳಕಳಿಯುಳ್ಳ ಸಿನೆಮಾಗಳು ಮಿಣುಕು ಹುಳುಗಳಂತೆ ಬಂದು ಹೋಗುತ್ತಲೇ ಇವೆ. ಪಲಾಸ 1978 ಸಿನೆಮಾ ಇತ್ತೀಚೆಗೆ ತೆರೆಕಂಡ ಅಂತಹದ್ದೇ ಒಂದು ಗಮನಾರ್ಹ ಸಿನೆಮಾ.

ಈ ಸಿನೆಮಾ ಗ್ರಾಮೀಣ ಭಾರತದ ಜಾತಿ ವ್ಯವಸ್ಥೆಯ ವಾಸ್ತವಗಳನ್ನು ಚರ್ಚೆ ಮಾಡುವ ದಿಕ್ಕಿನಲ್ಲಿ ಯಶಸ್ವಿಯಾಗಿದೆ. ಮೋಹನ್ ರಾವ್, ರಂಗರಾವ್ ಎಂಬ ಕೆಳಜಾತಿಯ ಯುವಕರು ಮತ್ತು ಆಸ್ತಿ ಅಂತಸ್ತು ಇರುವ ಮೇಲ್ಜಾತಿಯ ಇಬ್ಬರು ಸಹೋದರರ ನಡುವೆ ನಡೆಯುವ ಕಥೆಯಾಗಿದ್ದರೂ ಸಹ, ಜಾತಿ ವ್ಯವಸ್ಥೆ ಎಂಬ ಜೇಡರಬಲೆಯಲ್ಲಿ ಸಿಕ್ಕಿಕೊಳ್ಳುವ ದಲಿತರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಇದು ತೋರಿಸಿದೆ.

ಸಿನೆಮಾದಲ್ಲಿ ಬರುವ ಸಬಾಸ್ಟಿಯನ್ ಎಂಬ ಪೊಲೀಸ್ ಪಾತ್ರ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ ಹಾಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು, ಆಗಲೇ ನಮ್ಮ ಉದ್ದಾರ ಎಂಬ ಚರ್ಚೆಯನ್ನು ಎತ್ತುತ್ತದೆ. ಆದರೆ, ಜಾತಿ ವ್ಯವಸ್ಥೆ ತಾನು ಚಾಚಿರುವ ಕಬಂಧಬಾಹುಗಳನ್ನು ಕಾರ್ಯಂಗ, ಶಾಸಕಾಂಗವಲ್ಲದೇ ನ್ಯಾಯಾಂಗದವರೆಗೂ ಎಷ್ಟರ ಮಟ್ಟಿಗೆ ವಿಸ್ತರಿಸಿದೆ ಎಂಬುದು ಸಬಾಸ್ಟಿಯನ್‍ಗೆ ಅರ್ಥವಾಗುವುದು, ಆತ ನಡೆಸುತ್ತಿದ್ದ ಕೇಸ್ ಸೋಲುಂಡ ಸಂದರ್ಭದಲ್ಲಿ. ಪೊಲೀಸ್ ಆಗಿದ್ದ ಸಬಾಸ್ಟಿಯನ್ ಕೊನೆಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅನಿವಾರ್ಯತೆಗಳನ್ನು ಎದುರಿಸಲೇಬೇಕೆಂದು ಮೋಹಾನ್‍ರಾವ್‍ಗೆ ಚಿಕ್ಕ ಸಾಹುಕಾರನನ್ನು ಕೊಲ್ಲಲು ಹೇಳುತ್ತಾನೆ.

ಸಬಾಸ್ಟಿಯನ್ ಈ ಮೂಲಕ ಮೇಲ್ಜಾತಿಯ ದೌರ್ಜನ್ಯದ ಮನಸ್ಥಿತಿಯನ್ನು ಕೊಲ್ಲಲು ಇರುವ ದುಬಾರಿ ಸಾಧ್ಯತೆಗಳಿಗೆ ಪ್ರತೀಕವಾಗಿ ನಿಲ್ಲುತ್ತಾನೆ. ಸಬಾಸ್ಟಿಯನ್ ಮತ್ತು ಮೋಹನ್ ರಾವ್ ಚರ್ಚೆಗಳು ದಲಿತ ಯುವಜನರ ಹೊಸಪೀಳಿಗೆಯ ಪ್ರಶ್ನೆಗಳಂತೆ ಕಾಣಿಸುತ್ತವೆ. ಇನ್ನೂ ದೊಡ್ಡ ಯಜಮಾನನ ಮನೆಯಲ್ಲಿ ನಡೆಯುವ ಚರ್ಚೆಗಳು ಮೇಲ್ಜಾತಿಯ ಯಜಮಾನರ ಕುತಂತ್ರಗಳನ್ನು ಬಯಲುಗೊಳಿಸುತ್ತವೆ.
ಪಲಾಸ ಸಿನೆಮಾ ಗ್ರಾಮೀಣ ಭಾಗದಲ್ಲಿನ ಕೆಳಜಾತಿಯ ಜನರು ಜಾತಿಯ ಕೀಳರಿಮೆಯ ಕಾರಣಕ್ಕೆ ಪ್ರತಿಕ್ಷಣ ಹೇಗೆ ನಿಂದನೆ, ಅಪಮಾನಗಳ ಜೊತೆಗೆ ಗುದ್ದಾಡಬೇಕು ಎಂಬುದನ್ನು ತೋರಿಸಿದೆ.

1978ರಲ್ಲಿ ಪಲಾಸ ಎಂಬ ಹಳ್ಳಿಯಲ್ಲಿ ನಡೆದ ನೈಜ ಘಟನೆಗಳ ಆಧಾರವಾಗಿ ಬಂದ ಈ ಸಿನೆಮಾ 2020ರಲ್ಲೂ ನಡೆಯತ್ತಿರುವ ಜಾತಿದೌರ್ಜನ್ಯಗಳು, ಜಾತಿ ಕಾರಣಕ್ಕಾಗಿ ನಡೆಯುವ ಕೊಲೆಗಳು, ಅತ್ಯಾಚಾರಗಳನ್ನು ಹೇಗೆ ನೋಡಬೇಕೆಂಬುದನ್ನು ತೋರಿಸುತ್ತದೆ. ಈಗಲೂ ಹಳ್ಳಿಗಳಲ್ಲಿ ಮೇಲ್ಜಾತಿ ಕೆಳಜಾತಿಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಸಾಮಾನ್ಯವಾಗಿವೆ ಇನ್ನೂ ಸಹ ಜಾತಿ ಮನಸ್ಥಿತಿಯೆಂಬುದು ಬದಲಾಗದೇ ಉಳಿದುಬಿಟ್ಟಿರುವುದಕ್ಕೆ ಈ ಸಿನೆಮಾ ಸಾಕ್ಷಿಯನ್ನೊದಗಿಸಿದೆ.

ಪಲಾಸ ಗ್ರಾಮೀಣ ಭಾರತದ ದೈನಂದಿನ ವಾಸ್ತವಕ್ಕೆ ಸಾಕ್ಷಿಯಾಗಿ ನಿಂತಿದೆ. ಚಿಕ್ಕ ಯಜಮಾನನ ಪಾತ್ರ ಮಾಡಿರುವ ರಘುಕುಂಚೆ ಈ ಸಿನೆಮಾಕ್ಕೆ ವಿಶೇಷವಾದ ಸಂಗೀತವನ್ನು ನೀಡಿದ್ದಾರೆ. ಹಾಡು ಕುಣಿತವನ್ನು ರಕ್ತಗತವಾಗಿಸಿಕೊಂಡಿರುವ ಕೆಳಜಾತಿಯ ಜನಕ್ಕೆ ತಮ್ಮ ಕಲೆಯೂ ಸಹ ದೊಡ್ಡವರ ಕಣ್ಣುಕುಕ್ಕುವ ರೀತಿ ಮೋಹನ್ ರಾವ್‍ಗೆ ಬಾಲ್ಯದಲ್ಲಿಯೇ ಅನುಭವವಾಗುತ್ತದೆ. ಇದು ಕಲೆಯಲ್ಲಿನ ಜಾತಿ ರಾಜಕಾರಣವನ್ನು ಎತ್ತಿತೋರಿಸುತ್ತದೆ. ಪಲಾಸ ಸಿನೆಮಾ ಖಂಡಿತ ಟಾಲಿವುಡ್‍ನಲ್ಲಿ ದಲಿತರ ಸಮಸ್ಯೆಗಳನ್ನು ಪ್ರಶ್ನಿಸುವ ಮತ್ತು ಮತ್ತು ಜಾತಿ ನಿರ್ಮೂಲನೆಯ ಬಗ್ಗೆ ಚರ್ಚಿಸುವ ಸಿನೆಮಾಗಳಿಗೆ ಮೈಲಿಗಲ್ಲಾಗಲೆಂದು ಆಶಿಸೋಣ. ಇನ್ನು ನಿರ್ದೇಶಕ ಕರಣಕುಮಾರ ಮೊದಲ ಸಿನೆಮಾದಲ್ಲೇ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...