Homeಮುಖಪುಟಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

- Advertisement -
- Advertisement -

ನಿಂತಿರುವವನಿಗೆ ಗೊತ್ತಾಗದ ಹಾಗೆ ಅವನ ಚಡ್ಡಿ ಕಳಚಿದರೆ ಅವನೇ ಸಾಹುಕಾರ (ಯಜಮಾನ)’ ಎಂಬುದು ಪಲಾಸ ಸಿನೆಮಾದಲ್ಲಿ ಬರುವ ದೊಡ್ಡ ಯಜಮಾನನ ಡೈಲಾಗ್. ಮೇಲ್ಜಾತಿ ಭೂಮಾಲೀಕರ ಯಜಮಾನಿಕೆಯ ದರ್ಪ ದಬ್ಬಾಳಿಕೆಗೆ ನಲುಗಿದ ಕೆಳಜಾತಿಯ ಸಮುದಾಯ. ದೌರ್ಜನ್ಯವನ್ನು ಸಹಿಸದೆ, ಎಚ್ಚೆತ್ತ ಕೆಳಜಾತಿಯ ಯುವಕರು ಹಾಗೂ ಭೂಮಾಲೀಕನ ನಡುವೆ ನಡೆಯುವ ಸಂಘರ್ಷದ ಕತೆಯೇ “ಪಲಾಸ 1978” ಸಿನೆಮಾ.

ಟಾಲಿವುಡ್ ಎಂದಾಕ್ಷಣ ಬಾರಿ ಬಡ್ಜೆಟ್‍ನ ಹಾಗೂ ಅಬ್ಬರಿಸಿ ಬೊಬ್ಬಿರಿಯುವ ಹಿರೋಗಳ ಸಿನೆಮಾಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಆಗಾಗ ತೆಲುಗು ಸಿನೆಮಾ ರಂಗದಲ್ಲಿಯೂ ಸಾಮಾಜಿಕ ಕಳಕಳಿಯುಳ್ಳ ಸಿನೆಮಾಗಳು ಮಿಣುಕು ಹುಳುಗಳಂತೆ ಬಂದು ಹೋಗುತ್ತಲೇ ಇವೆ. ಪಲಾಸ 1978 ಸಿನೆಮಾ ಇತ್ತೀಚೆಗೆ ತೆರೆಕಂಡ ಅಂತಹದ್ದೇ ಒಂದು ಗಮನಾರ್ಹ ಸಿನೆಮಾ.

ಈ ಸಿನೆಮಾ ಗ್ರಾಮೀಣ ಭಾರತದ ಜಾತಿ ವ್ಯವಸ್ಥೆಯ ವಾಸ್ತವಗಳನ್ನು ಚರ್ಚೆ ಮಾಡುವ ದಿಕ್ಕಿನಲ್ಲಿ ಯಶಸ್ವಿಯಾಗಿದೆ. ಮೋಹನ್ ರಾವ್, ರಂಗರಾವ್ ಎಂಬ ಕೆಳಜಾತಿಯ ಯುವಕರು ಮತ್ತು ಆಸ್ತಿ ಅಂತಸ್ತು ಇರುವ ಮೇಲ್ಜಾತಿಯ ಇಬ್ಬರು ಸಹೋದರರ ನಡುವೆ ನಡೆಯುವ ಕಥೆಯಾಗಿದ್ದರೂ ಸಹ, ಜಾತಿ ವ್ಯವಸ್ಥೆ ಎಂಬ ಜೇಡರಬಲೆಯಲ್ಲಿ ಸಿಕ್ಕಿಕೊಳ್ಳುವ ದಲಿತರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಇದು ತೋರಿಸಿದೆ.

ಸಿನೆಮಾದಲ್ಲಿ ಬರುವ ಸಬಾಸ್ಟಿಯನ್ ಎಂಬ ಪೊಲೀಸ್ ಪಾತ್ರ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ ಹಾಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು, ಆಗಲೇ ನಮ್ಮ ಉದ್ದಾರ ಎಂಬ ಚರ್ಚೆಯನ್ನು ಎತ್ತುತ್ತದೆ. ಆದರೆ, ಜಾತಿ ವ್ಯವಸ್ಥೆ ತಾನು ಚಾಚಿರುವ ಕಬಂಧಬಾಹುಗಳನ್ನು ಕಾರ್ಯಂಗ, ಶಾಸಕಾಂಗವಲ್ಲದೇ ನ್ಯಾಯಾಂಗದವರೆಗೂ ಎಷ್ಟರ ಮಟ್ಟಿಗೆ ವಿಸ್ತರಿಸಿದೆ ಎಂಬುದು ಸಬಾಸ್ಟಿಯನ್‍ಗೆ ಅರ್ಥವಾಗುವುದು, ಆತ ನಡೆಸುತ್ತಿದ್ದ ಕೇಸ್ ಸೋಲುಂಡ ಸಂದರ್ಭದಲ್ಲಿ. ಪೊಲೀಸ್ ಆಗಿದ್ದ ಸಬಾಸ್ಟಿಯನ್ ಕೊನೆಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅನಿವಾರ್ಯತೆಗಳನ್ನು ಎದುರಿಸಲೇಬೇಕೆಂದು ಮೋಹಾನ್‍ರಾವ್‍ಗೆ ಚಿಕ್ಕ ಸಾಹುಕಾರನನ್ನು ಕೊಲ್ಲಲು ಹೇಳುತ್ತಾನೆ.

ಸಬಾಸ್ಟಿಯನ್ ಈ ಮೂಲಕ ಮೇಲ್ಜಾತಿಯ ದೌರ್ಜನ್ಯದ ಮನಸ್ಥಿತಿಯನ್ನು ಕೊಲ್ಲಲು ಇರುವ ದುಬಾರಿ ಸಾಧ್ಯತೆಗಳಿಗೆ ಪ್ರತೀಕವಾಗಿ ನಿಲ್ಲುತ್ತಾನೆ. ಸಬಾಸ್ಟಿಯನ್ ಮತ್ತು ಮೋಹನ್ ರಾವ್ ಚರ್ಚೆಗಳು ದಲಿತ ಯುವಜನರ ಹೊಸಪೀಳಿಗೆಯ ಪ್ರಶ್ನೆಗಳಂತೆ ಕಾಣಿಸುತ್ತವೆ. ಇನ್ನೂ ದೊಡ್ಡ ಯಜಮಾನನ ಮನೆಯಲ್ಲಿ ನಡೆಯುವ ಚರ್ಚೆಗಳು ಮೇಲ್ಜಾತಿಯ ಯಜಮಾನರ ಕುತಂತ್ರಗಳನ್ನು ಬಯಲುಗೊಳಿಸುತ್ತವೆ.
ಪಲಾಸ ಸಿನೆಮಾ ಗ್ರಾಮೀಣ ಭಾಗದಲ್ಲಿನ ಕೆಳಜಾತಿಯ ಜನರು ಜಾತಿಯ ಕೀಳರಿಮೆಯ ಕಾರಣಕ್ಕೆ ಪ್ರತಿಕ್ಷಣ ಹೇಗೆ ನಿಂದನೆ, ಅಪಮಾನಗಳ ಜೊತೆಗೆ ಗುದ್ದಾಡಬೇಕು ಎಂಬುದನ್ನು ತೋರಿಸಿದೆ.

1978ರಲ್ಲಿ ಪಲಾಸ ಎಂಬ ಹಳ್ಳಿಯಲ್ಲಿ ನಡೆದ ನೈಜ ಘಟನೆಗಳ ಆಧಾರವಾಗಿ ಬಂದ ಈ ಸಿನೆಮಾ 2020ರಲ್ಲೂ ನಡೆಯತ್ತಿರುವ ಜಾತಿದೌರ್ಜನ್ಯಗಳು, ಜಾತಿ ಕಾರಣಕ್ಕಾಗಿ ನಡೆಯುವ ಕೊಲೆಗಳು, ಅತ್ಯಾಚಾರಗಳನ್ನು ಹೇಗೆ ನೋಡಬೇಕೆಂಬುದನ್ನು ತೋರಿಸುತ್ತದೆ. ಈಗಲೂ ಹಳ್ಳಿಗಳಲ್ಲಿ ಮೇಲ್ಜಾತಿ ಕೆಳಜಾತಿಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಸಾಮಾನ್ಯವಾಗಿವೆ ಇನ್ನೂ ಸಹ ಜಾತಿ ಮನಸ್ಥಿತಿಯೆಂಬುದು ಬದಲಾಗದೇ ಉಳಿದುಬಿಟ್ಟಿರುವುದಕ್ಕೆ ಈ ಸಿನೆಮಾ ಸಾಕ್ಷಿಯನ್ನೊದಗಿಸಿದೆ.

ಪಲಾಸ ಗ್ರಾಮೀಣ ಭಾರತದ ದೈನಂದಿನ ವಾಸ್ತವಕ್ಕೆ ಸಾಕ್ಷಿಯಾಗಿ ನಿಂತಿದೆ. ಚಿಕ್ಕ ಯಜಮಾನನ ಪಾತ್ರ ಮಾಡಿರುವ ರಘುಕುಂಚೆ ಈ ಸಿನೆಮಾಕ್ಕೆ ವಿಶೇಷವಾದ ಸಂಗೀತವನ್ನು ನೀಡಿದ್ದಾರೆ. ಹಾಡು ಕುಣಿತವನ್ನು ರಕ್ತಗತವಾಗಿಸಿಕೊಂಡಿರುವ ಕೆಳಜಾತಿಯ ಜನಕ್ಕೆ ತಮ್ಮ ಕಲೆಯೂ ಸಹ ದೊಡ್ಡವರ ಕಣ್ಣುಕುಕ್ಕುವ ರೀತಿ ಮೋಹನ್ ರಾವ್‍ಗೆ ಬಾಲ್ಯದಲ್ಲಿಯೇ ಅನುಭವವಾಗುತ್ತದೆ. ಇದು ಕಲೆಯಲ್ಲಿನ ಜಾತಿ ರಾಜಕಾರಣವನ್ನು ಎತ್ತಿತೋರಿಸುತ್ತದೆ. ಪಲಾಸ ಸಿನೆಮಾ ಖಂಡಿತ ಟಾಲಿವುಡ್‍ನಲ್ಲಿ ದಲಿತರ ಸಮಸ್ಯೆಗಳನ್ನು ಪ್ರಶ್ನಿಸುವ ಮತ್ತು ಮತ್ತು ಜಾತಿ ನಿರ್ಮೂಲನೆಯ ಬಗ್ಗೆ ಚರ್ಚಿಸುವ ಸಿನೆಮಾಗಳಿಗೆ ಮೈಲಿಗಲ್ಲಾಗಲೆಂದು ಆಶಿಸೋಣ. ಇನ್ನು ನಿರ್ದೇಶಕ ಕರಣಕುಮಾರ ಮೊದಲ ಸಿನೆಮಾದಲ್ಲೇ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....