Homeಮುಖಪುಟಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

ಜಾತಿ ವ್ಯವಸ್ಥೆಯ ಹೊಲಸು ಎತ್ತಿತೋರಿಸುವ ಪಲಾಸ 1978

- Advertisement -
- Advertisement -

ನಿಂತಿರುವವನಿಗೆ ಗೊತ್ತಾಗದ ಹಾಗೆ ಅವನ ಚಡ್ಡಿ ಕಳಚಿದರೆ ಅವನೇ ಸಾಹುಕಾರ (ಯಜಮಾನ)’ ಎಂಬುದು ಪಲಾಸ ಸಿನೆಮಾದಲ್ಲಿ ಬರುವ ದೊಡ್ಡ ಯಜಮಾನನ ಡೈಲಾಗ್. ಮೇಲ್ಜಾತಿ ಭೂಮಾಲೀಕರ ಯಜಮಾನಿಕೆಯ ದರ್ಪ ದಬ್ಬಾಳಿಕೆಗೆ ನಲುಗಿದ ಕೆಳಜಾತಿಯ ಸಮುದಾಯ. ದೌರ್ಜನ್ಯವನ್ನು ಸಹಿಸದೆ, ಎಚ್ಚೆತ್ತ ಕೆಳಜಾತಿಯ ಯುವಕರು ಹಾಗೂ ಭೂಮಾಲೀಕನ ನಡುವೆ ನಡೆಯುವ ಸಂಘರ್ಷದ ಕತೆಯೇ “ಪಲಾಸ 1978” ಸಿನೆಮಾ.

ಟಾಲಿವುಡ್ ಎಂದಾಕ್ಷಣ ಬಾರಿ ಬಡ್ಜೆಟ್‍ನ ಹಾಗೂ ಅಬ್ಬರಿಸಿ ಬೊಬ್ಬಿರಿಯುವ ಹಿರೋಗಳ ಸಿನೆಮಾಗಳು ನಮ್ಮ ಕಣ್ಣಮುಂದೆ ಬರುತ್ತವೆ. ಆದರೆ ಆಗಾಗ ತೆಲುಗು ಸಿನೆಮಾ ರಂಗದಲ್ಲಿಯೂ ಸಾಮಾಜಿಕ ಕಳಕಳಿಯುಳ್ಳ ಸಿನೆಮಾಗಳು ಮಿಣುಕು ಹುಳುಗಳಂತೆ ಬಂದು ಹೋಗುತ್ತಲೇ ಇವೆ. ಪಲಾಸ 1978 ಸಿನೆಮಾ ಇತ್ತೀಚೆಗೆ ತೆರೆಕಂಡ ಅಂತಹದ್ದೇ ಒಂದು ಗಮನಾರ್ಹ ಸಿನೆಮಾ.

ಈ ಸಿನೆಮಾ ಗ್ರಾಮೀಣ ಭಾರತದ ಜಾತಿ ವ್ಯವಸ್ಥೆಯ ವಾಸ್ತವಗಳನ್ನು ಚರ್ಚೆ ಮಾಡುವ ದಿಕ್ಕಿನಲ್ಲಿ ಯಶಸ್ವಿಯಾಗಿದೆ. ಮೋಹನ್ ರಾವ್, ರಂಗರಾವ್ ಎಂಬ ಕೆಳಜಾತಿಯ ಯುವಕರು ಮತ್ತು ಆಸ್ತಿ ಅಂತಸ್ತು ಇರುವ ಮೇಲ್ಜಾತಿಯ ಇಬ್ಬರು ಸಹೋದರರ ನಡುವೆ ನಡೆಯುವ ಕಥೆಯಾಗಿದ್ದರೂ ಸಹ, ಜಾತಿ ವ್ಯವಸ್ಥೆ ಎಂಬ ಜೇಡರಬಲೆಯಲ್ಲಿ ಸಿಕ್ಕಿಕೊಳ್ಳುವ ದಲಿತರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ಇದು ತೋರಿಸಿದೆ.

ಸಿನೆಮಾದಲ್ಲಿ ಬರುವ ಸಬಾಸ್ಟಿಯನ್ ಎಂಬ ಪೊಲೀಸ್ ಪಾತ್ರ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ ಹಾಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಬೇಕು, ಆಗಲೇ ನಮ್ಮ ಉದ್ದಾರ ಎಂಬ ಚರ್ಚೆಯನ್ನು ಎತ್ತುತ್ತದೆ. ಆದರೆ, ಜಾತಿ ವ್ಯವಸ್ಥೆ ತಾನು ಚಾಚಿರುವ ಕಬಂಧಬಾಹುಗಳನ್ನು ಕಾರ್ಯಂಗ, ಶಾಸಕಾಂಗವಲ್ಲದೇ ನ್ಯಾಯಾಂಗದವರೆಗೂ ಎಷ್ಟರ ಮಟ್ಟಿಗೆ ವಿಸ್ತರಿಸಿದೆ ಎಂಬುದು ಸಬಾಸ್ಟಿಯನ್‍ಗೆ ಅರ್ಥವಾಗುವುದು, ಆತ ನಡೆಸುತ್ತಿದ್ದ ಕೇಸ್ ಸೋಲುಂಡ ಸಂದರ್ಭದಲ್ಲಿ. ಪೊಲೀಸ್ ಆಗಿದ್ದ ಸಬಾಸ್ಟಿಯನ್ ಕೊನೆಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಅನಿವಾರ್ಯತೆಗಳನ್ನು ಎದುರಿಸಲೇಬೇಕೆಂದು ಮೋಹಾನ್‍ರಾವ್‍ಗೆ ಚಿಕ್ಕ ಸಾಹುಕಾರನನ್ನು ಕೊಲ್ಲಲು ಹೇಳುತ್ತಾನೆ.

ಸಬಾಸ್ಟಿಯನ್ ಈ ಮೂಲಕ ಮೇಲ್ಜಾತಿಯ ದೌರ್ಜನ್ಯದ ಮನಸ್ಥಿತಿಯನ್ನು ಕೊಲ್ಲಲು ಇರುವ ದುಬಾರಿ ಸಾಧ್ಯತೆಗಳಿಗೆ ಪ್ರತೀಕವಾಗಿ ನಿಲ್ಲುತ್ತಾನೆ. ಸಬಾಸ್ಟಿಯನ್ ಮತ್ತು ಮೋಹನ್ ರಾವ್ ಚರ್ಚೆಗಳು ದಲಿತ ಯುವಜನರ ಹೊಸಪೀಳಿಗೆಯ ಪ್ರಶ್ನೆಗಳಂತೆ ಕಾಣಿಸುತ್ತವೆ. ಇನ್ನೂ ದೊಡ್ಡ ಯಜಮಾನನ ಮನೆಯಲ್ಲಿ ನಡೆಯುವ ಚರ್ಚೆಗಳು ಮೇಲ್ಜಾತಿಯ ಯಜಮಾನರ ಕುತಂತ್ರಗಳನ್ನು ಬಯಲುಗೊಳಿಸುತ್ತವೆ.
ಪಲಾಸ ಸಿನೆಮಾ ಗ್ರಾಮೀಣ ಭಾಗದಲ್ಲಿನ ಕೆಳಜಾತಿಯ ಜನರು ಜಾತಿಯ ಕೀಳರಿಮೆಯ ಕಾರಣಕ್ಕೆ ಪ್ರತಿಕ್ಷಣ ಹೇಗೆ ನಿಂದನೆ, ಅಪಮಾನಗಳ ಜೊತೆಗೆ ಗುದ್ದಾಡಬೇಕು ಎಂಬುದನ್ನು ತೋರಿಸಿದೆ.

1978ರಲ್ಲಿ ಪಲಾಸ ಎಂಬ ಹಳ್ಳಿಯಲ್ಲಿ ನಡೆದ ನೈಜ ಘಟನೆಗಳ ಆಧಾರವಾಗಿ ಬಂದ ಈ ಸಿನೆಮಾ 2020ರಲ್ಲೂ ನಡೆಯತ್ತಿರುವ ಜಾತಿದೌರ್ಜನ್ಯಗಳು, ಜಾತಿ ಕಾರಣಕ್ಕಾಗಿ ನಡೆಯುವ ಕೊಲೆಗಳು, ಅತ್ಯಾಚಾರಗಳನ್ನು ಹೇಗೆ ನೋಡಬೇಕೆಂಬುದನ್ನು ತೋರಿಸುತ್ತದೆ. ಈಗಲೂ ಹಳ್ಳಿಗಳಲ್ಲಿ ಮೇಲ್ಜಾತಿ ಕೆಳಜಾತಿಗಳ ನಡುವೆ ನಡೆಯುತ್ತಿರುವ ಗಲಾಟೆಗಳು ಸಾಮಾನ್ಯವಾಗಿವೆ ಇನ್ನೂ ಸಹ ಜಾತಿ ಮನಸ್ಥಿತಿಯೆಂಬುದು ಬದಲಾಗದೇ ಉಳಿದುಬಿಟ್ಟಿರುವುದಕ್ಕೆ ಈ ಸಿನೆಮಾ ಸಾಕ್ಷಿಯನ್ನೊದಗಿಸಿದೆ.

ಪಲಾಸ ಗ್ರಾಮೀಣ ಭಾರತದ ದೈನಂದಿನ ವಾಸ್ತವಕ್ಕೆ ಸಾಕ್ಷಿಯಾಗಿ ನಿಂತಿದೆ. ಚಿಕ್ಕ ಯಜಮಾನನ ಪಾತ್ರ ಮಾಡಿರುವ ರಘುಕುಂಚೆ ಈ ಸಿನೆಮಾಕ್ಕೆ ವಿಶೇಷವಾದ ಸಂಗೀತವನ್ನು ನೀಡಿದ್ದಾರೆ. ಹಾಡು ಕುಣಿತವನ್ನು ರಕ್ತಗತವಾಗಿಸಿಕೊಂಡಿರುವ ಕೆಳಜಾತಿಯ ಜನಕ್ಕೆ ತಮ್ಮ ಕಲೆಯೂ ಸಹ ದೊಡ್ಡವರ ಕಣ್ಣುಕುಕ್ಕುವ ರೀತಿ ಮೋಹನ್ ರಾವ್‍ಗೆ ಬಾಲ್ಯದಲ್ಲಿಯೇ ಅನುಭವವಾಗುತ್ತದೆ. ಇದು ಕಲೆಯಲ್ಲಿನ ಜಾತಿ ರಾಜಕಾರಣವನ್ನು ಎತ್ತಿತೋರಿಸುತ್ತದೆ. ಪಲಾಸ ಸಿನೆಮಾ ಖಂಡಿತ ಟಾಲಿವುಡ್‍ನಲ್ಲಿ ದಲಿತರ ಸಮಸ್ಯೆಗಳನ್ನು ಪ್ರಶ್ನಿಸುವ ಮತ್ತು ಮತ್ತು ಜಾತಿ ನಿರ್ಮೂಲನೆಯ ಬಗ್ಗೆ ಚರ್ಚಿಸುವ ಸಿನೆಮಾಗಳಿಗೆ ಮೈಲಿಗಲ್ಲಾಗಲೆಂದು ಆಶಿಸೋಣ. ಇನ್ನು ನಿರ್ದೇಶಕ ಕರಣಕುಮಾರ ಮೊದಲ ಸಿನೆಮಾದಲ್ಲೇ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದ್ದಾರೆ.


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...