Homeಮುಖಪುಟಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

ಪಶ್ಚಿಮ ಬಂಗಾಳದಲ್ಲಿ ಪಕ್ಷ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ

- Advertisement -
- Advertisement -

ರಾಜ್ಯದಲ್ಲಿ ಪಕ್ಷವು ಮತ್ತೆ ತನ್ನ ಹಿಂದಿನ ವೈಭವಕ್ಕೆ ಮರಳಲಿದೆ ಎಂದು ಪಶ್ಚಿಮ ಬಂಗಾಳದ ಸಿಪಿಐಎಂ ಕಾರ್ಯದರ್ಶಿ ಮೊಹಮ್ಮದ್‌ ಸಲೀಂ ಹೇಳಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಕಷ್ಟದ ಹಂತವನ್ನು ಎದುರಿಸುತ್ತಿದ್ದು, ಪಕ್ಷಕ್ಕೆ ಕಾಯಕಲ್ಪ ನೀಡುವುದು ಮತ್ತು ಅದನ್ನು ಮತ್ತೆ ಕ್ರಿಯಾಶೀಲಗೊಳಿಸುವುದು ಪಕ್ಷವು ಪ್ರಸ್ತುತ ಎದುರಿಸುತ್ತಿರುವ ತಕ್ಷಣದ ಸವಾಲುಗಳಾಗಿವೆ ಎಂದು ಅವರು ಹೇಳಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ನಡೆಯುತ್ತಿರುವ ಸಿಪಿಐಎಂನ 23 ನೇ ಮಹಾಅಧಿವೇಶನದಲ್ಲಿ ಮಾತನಾಡಿದ ಅವರು, “ಇತ್ತೀಚಿನ ವರ್ಷಗಳಿಗೆ ಹೋಲಿಸಿದರೆ, ಈಗ ಹೆಚ್ಚು ಯುವಕರು ನಮ್ಮೊಂದಿಗೆ ಹೊಂದಿಕೊಂಡಿದ್ದಾರೆ. ನಾವು ಅವರಿಗೆ ಆಳವಾದ ಪಕ್ಷದ ತರಗತಿಗಳನ್ನು ನೀಡಬೇಕು. ಕಮ್ಯುನಿಸ್ಟ್ ಚೌಕಟ್ಟು ಮತ್ತು ಸಿದ್ಧಾಂತದ ಪ್ರಕಾರ ಅವರನ್ನು ಸಿದ್ಧಪಡಿಸಬೇಕು. ಇಷ್ಟೆಲ್ಲಾ ಕಷ್ಟಗಳ ನಡುವೆಯೂ ಸಿಪಿಐಎಂ ಮತ್ತೊಮ್ಮೆ ರಾಜ್ಯದಲ್ಲಿ ತನ್ನ ಹಿಂದಿನ ವೈಭವ ಮತ್ತು ಶಕ್ತಿಗೆ ಮರಳಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಮತ್ತು 23ನೇ ಪಕ್ಷದ ಅಧಿವೇಶನದಲ್ಲಿ ಅಂಗೀಕರಿಸಬೇಕಾದ ನಿರ್ಣಯಗಳನ್ನು ಅನುಸರಿಸಿ ನಾವು ಪಕ್ಷವನ್ನು ಮರುಸಂಘಟಿಸಿ ಬಲಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024 ರ ಲೋಕಸಭೆ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದ ರಾಜಕೀಯ ರಂಗ ರಚನೆ: ಸಿಪಿಐಎಂ

ರಾಜ್ಯದಲ್ಲಿ 11 ವರ್ಷಗಳ ತೃಣಮೂಲ ಮತ್ತು ಒಕ್ಕೂಟ ಸರ್ಕಾರದಲ್ಲಿ ಎಂಟು ವರ್ಷಗಳ ಮೋದಿ ಆಡಳಿತದಿಂದ ಬೇಸತ್ತಿರುವ ಜನರು ಈಗ ಬದಲಾವಣೆ ಬಯಸುತ್ತಿದ್ದಾರೆ. ಎಡಪಕ್ಷಗಳ ಪ್ರಸ್ತುತತೆ ಮತ್ತು ಪ್ರಾಮುಖ್ಯತೆಯನ್ನು ನಾವು ಅವರಿಗೆ ನೆನಪಿಸಬೇಕು ಎಂದು ಸಲೀಂ ಹೇಳಿದ್ದಾರೆ.

“ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರ ಜಾರಿಗೊಳಿಸಿದ ವಿವಿಧ ಪ್ರಗತಿಪರ ಯೋಜನೆಗಳು ಮತ್ತು ಕಲ್ಯಾಣ ಯೋಜನೆಗಳು ಬಂಗಾಳದ ಜನರಿಗೆ ಮಾದರಿಯಾಗಬೇಕು. ಹಿಂದಿನ ವರ್ಷಗಳಲ್ಲಿ ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಎಡ ಸರ್ಕಾರಗಳ ಜನಕೇಂದ್ರಿತ ಆಡಳಿತವನ್ನು ನಾವು ಅವರಿಗೆ ನೆನಪಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ರಾಜ್ಯದಲ್ಲಿ ಸಿಪಿಐಎಂ ನೆಲೆಯನ್ನು ನಾಶಪಡಿಸಲು ತೃಣಮೂಲ ತೀವ್ರ ಪ್ರಯತ್ನ ನಡೆಸುತ್ತಿದೆ. ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳು ಅದಕ್ಕೆ ಸಾಕ್ಷಿ. ಪಕ್ಷದ ಕಾರ್ಯಕರ್ತರು ಪ್ರಬಲ ಪ್ರತಿರೋಧವನ್ನು ತೋರಿಸುತ್ತಾರೆ, ಆದರೆ ಅಸುರಕ್ಷಿತ ಸ್ಥಿತಿಯಲ್ಲಿದ್ದಾರೆ. ನಾವು ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಬೇಕು ಮತ್ತು ಇಂತಹ ಕ್ರಮಗಳ ವಿರುದ್ಧ ಅವರನ್ನು ಒಗ್ಗೂಡಿಸಬೇಕು” ಎಂದು ಸಲೀಂ ತಿಳಿಸಿದ್ದಾರೆ.

“ಬಲಪಂಥೀಯರು ರಾಷ್ಟ್ರೀಯ ಮಾಧ್ಯಮಗಳ ಬಲವಾದ ಬೆಂಬಲದೊಂದಿಗೆ ಕೇಂದ್ರದಲ್ಲಿ ಮೋದಿ ಮತ್ತು ಬಂಗಾಳದಲ್ಲಿ ದೀದಿ ಮಾತ್ರ ಇದ್ದಾರೆ, ದೇಶದಲ್ಲಿ ಬೇರೆ ಯಾರೂ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಎಡಪಂಥೀಯರ ಕೊಡುಗೆಗಳನ್ನು ಮತ್ತು ಅಸ್ತಿತ್ವವನ್ನೇ ದೂರವಿಡಲು ನಿರಂತರ ಪ್ರಯತ್ನಗಳನ್ನು ಮಾಡಲಾಗುತ್ತದೆ. ಆದರೆ ಅದು ಸುಲಭವಲ್ಲ, ಎಡಪಕ್ಷವು ಬಂಗಾಳದ ಸಾಮಾಜಿಕ ಮತ್ತು ಸಾಂಸ್ಕೃತಿಕ ರಚನೆಯಲ್ಲೆ ಇದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

“ಎಡಪಂಥೀಯರು ಅತ್ಯಂತ ಪ್ರಯಾಸಕರ ಸಮಯದಲ್ಲೂ ಆ ಸಂಪರ್ಕವನ್ನು ಅಖಂಡವಾಗಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಧರ್ಮ ಮತ್ತು ಜಾತಿಯ ಆಧಾರದಲ್ಲಿ ರಾಜ್ಯವನ್ನು ವಿಭಜಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಅಂತಹ ಎಲ್ಲಾ ಪ್ರಯತ್ನಗಳನ್ನು ನಾವು ವಿರೋಧಿಸಬೇಕು. ಎಡಪಂಥೀಯರ ಕೊಡುಗೆಯ ನೆನಪುಗಳನ್ನು ಜನರಲ್ಲಿ ಜೀವಂತವಾಗಿ ಕಾಪಾಡುವ ಜವಾಬ್ದಾರಿ ಬಂಗಾಳದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಕಾರ್ಮಿಕ ವರ್ಗದ ಮೇಲಿದೆ” ಎಂದು ಅವರು ಹೇಳಿದ್ದಾರೆ.

“ಬಂಗಾಳದಲ್ಲಿ ಇತ್ತೀಚೆಗೆ ನಡೆದ ಮುನ್ಸಿಪಲ್ ಚುನಾವಣೆಯನ್ನು ತೃಣಮೂಲ ಪಕ್ಷ ಹಾಳು ಮಾಡಿದೆ. ಎಡಪಕ್ಷಗಳ ಭದ್ರಕೋಟೆಯಾಗಿರುವ ಕ್ಷೇತ್ರಗಳಲ್ಲಿ ಅವರು ವಿಶೇಷವಾಗಿ ಹಿಂಸಾಚಾರ ನಡೆಸಿದ್ದಾರೆ. ನಮ್ಮ ಕೆಲವು ಅಭ್ಯರ್ಥಿಗಳಿಗೆ ಪ್ರಚಾರ ಕೂಡ ಸಾಧ್ಯವಾಗಿರಲಿಲ್ಲ. ಆದರೂ, ನಮ್ಮ ಮತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದೇವೆ. ಜನರು ಬದಲಾವಣೆ ಬಯಸುತ್ತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಅವರು ಹೇಲಿದ್ದಾರೆ.

“ಹೊಸದಾಗಿ ರಚನೆಯಾಗಿರುವ ರಾಜ್ಯ ಸಮಿತಿಯಲ್ಲಿ 30%ದಷ್ಟು ಯುವಕರು ಇದ್ದಾರೆ. ಹೆಚ್ಚಿನ ಯುವಕರು ಸಿಪಿಐ-ಎಂ ಸೇರಲು ಬರುತ್ತಿದ್ದಾರೆ. ರಾಜ್ಯದಲ್ಲಿ ಪಕ್ಷವು ಮತ್ತೊಮ್ಮೆ ಹುಟ್ಟಿಕೊಳ್ಳುವುದು ಖಂಡಿತ. ಈ ನಿಟ್ಟಿನಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸ ಈಗಾಗಲೇ ಆರಂಭವಾಗಿದೆ” ಎಂದು ಸಲೀಂ ಹೇಳಿದ್ದಾರೆ.

“ಬಂಗಾಳದಲ್ಲಿ ಸಿಪಿಐಎಂ ಬಿಜೆಪಿಯೊಂದಿಗೆ ಸೌಮ್ಯ ಧೋರಣೆ ಅನುಸರಿಸುತ್ತಿದೆ ಎಂಬ ಪ್ರಚಾರ ಸಂಪೂರ್ಣವಾಗಿ ಸರಿಯಲ್ಲ. ಇಂತಹ ಪ್ರಚಾರಗಳು ‘ನಾಗ್ಪುರದ ಮೆದುಳಿನಿಂದ ಹುಟ್ಟಿದ ಕೂಸು’. ಬಂಗಾಳದಲ್ಲಾಗಲಿ ಅಥವಾ ಬೇರೆಲ್ಲಿಯಾದರೂ, ಎಡಪಂಥೀಯರು ಬಲಪಂಥೀಯ ಶಕ್ತಿಗಳ ಕಡೆಗೆ ಸೌಮ್ಯವಾದ ವಿಧಾನವನ್ನು ಅಳವಡಿಸಿಕೊಳ್ಳುವುದಿಲ್ಲ. ಬಲಪಂಥೀಯರು ಮೊದಲಿಗೆ ಮತ್ತು ಪ್ರಮುಖವಾಗಿ ನಮ್ಮ ಮೇಲೆ ದಾಳಿ ಮಾಡುತ್ತಾರೆ. ಯಾಕೆಂದರೆ ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುವ ಏಕೈಕ ಶಕ್ತಿ ಎಡಪಂಥೀಯರು ಮಾತ್ರ. ಇದು ಬಂಗಾಳದಲ್ಲೂ ಭಿನ್ನವಾಗಿಲ್ಲ” ಎಂದು ಮೊಹಮ್ಮದ್‌ ಸಲೀಂ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಂದುತ್ವ ಮತ್ತು ಕಾರ್ಪೋರೇಟ್‌ ಮೈತ್ರಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಹಸಿವು, ಬಡತನ ಹೆಚ್ಚುತ್ತಿದೆ: ಸಿಪಿಐ(ಎಂ) ಪಾಲಿಟ್‌‌ಬ್ಯೂರೊ ಸದಸ್ಯ ಪ್ರಕಾಶ್‌ ಕಾರಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...