Homeಮುಖಪುಟಮುಂಬೈ ಕಾರ್ಪೋರೇಷನ್‌‌ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ: ಶಿವಸೇನೆ ನಾಯಕ ಅನಿಲ್ ದೇಸಾಯಿ

ಮುಂಬೈ ಕಾರ್ಪೋರೇಷನ್‌‌ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ: ಶಿವಸೇನೆ ನಾಯಕ ಅನಿಲ್ ದೇಸಾಯಿ

- Advertisement -
- Advertisement -

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಮತ್ತು ಸ್ವಂತವಾಗಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶಿವಸೇನೆ ಸಿದ್ಧವಾಗಿದೆ ಎಂದು ಪಕ್ಷದ ನಾಯಕ ಅನಿಲ್ ದೇಸಾಯಿ ಬುಧವಾರ ಹೇಳಿದ್ದಾರೆ.

ಪುಣೆ ಮುನ್ಸಿಪಲ್ ಚುನಾವಣೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಧ್ಯಮ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ದೇಸಾಯಿ, ಹಲವಾರು ಅವಧಿಗಳಿಂದ ಬಿಎಂಸಿಯಲ್ಲಿ ಅಧಿಕಾರದಲ್ಲಿರುವ ಶಿವಸೇನೆ ಈ ಬಾರಿ ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ದವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಬರಿ ಧ್ವಂಸ ಮಾಡಿದ ತಮ್ಮ ಕಾರ್ಯಕರ್ತರ ಬಗ್ಗೆ ಶಿವಸೇನೆ ಹೆಮ್ಮೆಪಟ್ಟಿದೆ: ಸಂಜಯ್ ರಾವತ್‌

“ಮಹಾರಾಷ್ಟ್ರದಲ್ಲಿ ನಾವು ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಆದರೆ ಇಂದು ಪುಣೆಯಲ್ಲಿ ಎನ್‌ಸಿಪಿ ನಾಯಕತ್ವವು ಏಕಾಂಗಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದೆ. ನಾವು ಯಾವಾಗಲೂ ಬಿಎಂಸಿಯಲ್ಲಿ 100 ಸ್ಥಾನಗಳನ್ನು ಪಡೆಯುತ್ತೇವೆ. ಹೀಗಾಗಿ ಈ ಬಾರಿ ಬಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಾವು ಸಿದ್ಧರಿದ್ದೇವೆ” ಎಂದು ದೇಸಾಯಿ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಈ ಬಾರಿ BMC ಯಲ್ಲಿ ಒಟ್ಟು ವಾರ್ಡ್‌‌ಗಳನ್ನು 227 ರಿಂದ 236 ಕ್ಕೆ ಹೆಚ್ಚಿಸಲಾಗಿದೆ. ಇಲ್ಲಿನ ಚುನಾವಣೆಗಳು ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ಆರಂಭದಲ್ಲಿ ನಡೆಯಲಿವೆ.

ಪ್ರಸ್ತುತ 227 ಸ್ಥಾನಗಳಲ್ಲಿ, ಶಿವಸೇನೆ 97 ಸ್ಥಾನಗಳನ್ನು ಹೊಂದಿದ್ದರೆ, ಬಿಜೆಪಿ 83, ಕಾಂಗ್ರೆಸ್ 29, ಎನ್‌ಸಿಪಿ 8, ಸಮಾಜವಾದಿ ಪಕ್ಷ 6, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್ ಎರಡು ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಒಂದು ಸ್ಥಾನವನ್ನು ಹೊಂದಿದೆ.

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಈ ಹಿಂದೆ ಘೋಷಿಸಿದಂತೆ ಶಿವಸೇನೆಯು ಎನ್‌ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...