Homeಮುಖಪುಟಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ದೇಶದ ಜನತೆಗೆ ಈ ವಂಚನೆ ತಿಳಿಯಬಾರದೆಂದು ರಾಜ್ಯಸಭೆಯ ಟಿವಿಯನ್ನು ಸೆನ್ಸರ್ ಮಾಡಲಾಗಿದೆ. ದೇಶದ ಜನರಿಗೆ ಸುಳ್ಳು ಹೇಳಬೇಡಿ, ನಮ್ಮಲ್ಲಿ ಸಾಕ್ಷ್ಯವಿದೆ ಎಂದು ಟಿಎಂಸಿ ಸಂಸದ ಹೇಳಿದ್ದಾರೆ

- Advertisement -
- Advertisement -

ವಿರೋಧ ಪಕ್ಷಗಳ ಭಾರಿ ಪ್ರತಿಭಟನೆಯ ನಡುವೆ ಎರಡು ಕೃಷಿ ಸಂಬಂಧಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ವಿಪಕ್ಷಗಳು ಇದನ್ನು ’ಪ್ರಜಾಪಭುತ್ವದ ಕೊಲೆ’ ಎಂದು ಆರೋಪಿಸಿದ್ದು, ಮಸೂದೆಯ ಅಂಗೀಕಾರದಲ್ಲಿ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ-2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ-2020, ಅಂಗೀಕಾರ ದೊರೆತ ಎರಡು ಹೊಸ ಮಸೂದೆಗಳಾಗಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ ಖಂಡಿಸಿ ‘#KisanVirodhiNarendraModi’ ಟ್ರೆಂಡ್

ಇಂದು ಬೆಳಿಗ್ಗೆ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಸರಕಾರ, ಇದು ರೈತರ ಬದುಕಿನಲ್ಲಿ ಬದಲಾವಣೆ ತರಲಿದೆ ಎಂದು ಹೇಳಿತ್ತು. ಆದರೆ ವಿರೋಧ ಪಕ್ಷಗಳು ಈ ಮಸೂದೆಗೆ ಇನ್ನಷ್ಟು ಚರ್ಚೆಯ ಅಗತ್ಯ ಇದೆಯೆಂದು ಹೇಳಿ ಅವುಗಳನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದ್ದವು.

ವಿರೋಧಪಕ್ಷಗಳ ನಿರ್ಣಯ ತಿರಸ್ಕೃತವಾಗಿದ್ದು ಮಸೂದೆಗೆ ಧ್ವನಿಮತದಿಂದ ಅಂಗೀಕಾರ ಪಡೆಯಲು ಸರಕಾರ ನಿರ್ಧರಿಸಿದೆ ಎಂದು ರಾಜ್ಯಸಭೆಯ ಉಪಾಧ್ಯಕ್ಷರು ಘೋಷಿಸಿದಾಗ ಸದನದಲ್ಲಿ ಗದ್ದಲ ಎಬ್ಬಿಸಿದ ವಿರೋಧ ಪಕ್ಷಗಳು, ತಾವು ಸದನದಲ್ಲೇ ಉಪಸ್ಥಿತರಿದ್ದು ಭೌತಿಕ ಮತದಾನದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಬೇಕು ಎಂದು ಪಟ್ಟುಹಿಡಿದವು.

ಉಪಾಧ್ಯಕ್ಷರು ಇದನ್ನು ನಿರಾಕರಿಸಿದ್ದಕ್ಕೆ ಸಧನದ ಬಾವಿಗೆ ಬಂದ ತೃಣಮೂಲ ಪಕ್ಷದ ಸದಸ್ಯ ಡೆರೆಕ್ ಒಬ್ರೆಯನ್ ಸ್ಫೀಕರ್‌ ಟೇಬಲ್ ಮೇಲಿನ ನಿಯಮಾವಳಿ ಪುಸ್ತಕವನ್ನು ಹರಿದು ಹಾಕಿ, ಜೊತೆಗೆ ಮೈಕನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದರು.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಪ್ರತಿಪಕ್ಷಗಳ ಗದ್ದಲ, ಘೋಷಣೆ, ಪ್ರತಿಭಟನೆ ಹೆಚ್ಚಿದಾಗ ಸದನದ ಕಲಾಪವನ್ನು 10 ನಿಮಿಷದ ಮಟ್ಟಿಗೆ ಮುಂದೂಡಲಾಯಿತು.

ಇದರ ನಂತರ ಸದನ ಮತ್ತೇ ಪ್ರಾರಂಭವಾದರೂ ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದ್ದವು, ಪ್ರತಿಭಟನೆಯ ಮಧ್ಯೆಯೇ, ಮಸೂದೆಗೆ ಧ್ವನಿಮತದ ಅಂಗೀಕಾರ ದೊರಕಿದೆ ಎಂದು ಉಪಾಧ್ಯಕ್ಷರು ಘೋಷಿಸಿದರು. ಅಲ್ಲದೆ ಉಪಾಧ್ಯಕ್ಷರ ಆಕ್ಷೇಪವನ್ನು ಮೀರಿ ರಾಜ್ಯ ಸಭೆಯ ಕಲಾಪದ ದೃಶ್ಯಗಳನ್ನು ಪ್ರತಿಪಕ್ಷದ ಸದಸ್ಯರು ಮೊಬೈಲಿನಲ್ಲಿ ದಾಖಲಿಸಿದರು.

“ಸರಕಾರ ಬಳಿ ಸೂಕ್ತ ಬಹುಮತವಿಲ್ಲ. ಇದು ಇಲ್ಲಿಗೇ ಮುಗಿಯದು. ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಸಂಸತ್ತಿನ ಎಲ್ಲಾ ನಿಯಮಗಳನ್ನೂ ಅವರು ಮುರಿಯುವ ಮೂಲಕ ವಂಚಿಸಿದ್ದಾರೆ. ದೇಶದ ಜನತೆಗೆ ಈ ವಂಚನೆ ತಿಳಿಯಬಾರದೆಂದು ರಾಜ್ಯಸಭೆಯ ಟಿವಿಯನ್ನು ಸೆನ್ಸರ್ ಮಾಡಲಾಗಿದೆ. ದೇಶದ ಜನರಿಗೆ ಸುಳ್ಳು ಹೇಳಬೇಡಿ, ನಮ್ಮಲ್ಲಿ ಸಾಕ್ಷ್ಯವಿದೆ” ಎಂದು ತೃಣಮೂಲ ಕಾಂಗ್ರೆಸ್‌ ಸಂಸದ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಮೂರು ಹೊಸ ಮಸೂದೆಗಳ ಪೈಕಿ ಎರಡು ಮಸೂದೆಗೆ ಅಂಗೀಕಾರ ಸಿಕ್ಕಿದ್ದು, ಇನ್ನೊಂದು ಮಸೂದೆಯನ್ನು ಸದನ ನಾಳೆ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ.

ಪ್ರಧಾನಿ ನರೇಂದ್ರ ಮೋದಿ, “ಸಂಸತ್ತಿನಲ್ಲಿ ಕೃಷಿ ಮಸೂದೆಗೆ ಅಂಗೀಕಾರ ದೊರಕಿರುವುದು ಭಾರತೀಯ ಕೃಷಿ ಇತಿಹಾಸದಲ್ಲೇ ಒಂದು ಐತಿಹಾಸಿಕ ಕ್ಷಣವಾಗಿದೆ, ಕೋಟ್ಯಾಂತರ ರೈತರನ್ನು ಸಶಕ್ತಗೊಳಿಸುವ ಹಾಗೂ ಕೃಷಿ ಕ್ಷೇತ್ರದ ಸಂಪೂರ್ಣ ಪರಿವರ್ತನೆಗೆ ಕಾರಣವಾಗುವ ಪ್ರಮುಖ ಮಸೂದೆಗಳಿಗೆ ಸಂಸತ್ತಿನಲ್ಲಿ ಅಂಗೀಕಾರ ದೊರಕಿದ್ದಕ್ಕೆ ರೈತರನ್ನು ಅಭಿನಂದಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...