Homeಮುಖಪುಟಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ದೇಶದ ಜನತೆಗೆ ಈ ವಂಚನೆ ತಿಳಿಯಬಾರದೆಂದು ರಾಜ್ಯಸಭೆಯ ಟಿವಿಯನ್ನು ಸೆನ್ಸರ್ ಮಾಡಲಾಗಿದೆ. ದೇಶದ ಜನರಿಗೆ ಸುಳ್ಳು ಹೇಳಬೇಡಿ, ನಮ್ಮಲ್ಲಿ ಸಾಕ್ಷ್ಯವಿದೆ ಎಂದು ಟಿಎಂಸಿ ಸಂಸದ ಹೇಳಿದ್ದಾರೆ

- Advertisement -
- Advertisement -

ವಿರೋಧ ಪಕ್ಷಗಳ ಭಾರಿ ಪ್ರತಿಭಟನೆಯ ನಡುವೆ ಎರಡು ಕೃಷಿ ಸಂಬಂಧಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ವಿಪಕ್ಷಗಳು ಇದನ್ನು ’ಪ್ರಜಾಪಭುತ್ವದ ಕೊಲೆ’ ಎಂದು ಆರೋಪಿಸಿದ್ದು, ಮಸೂದೆಯ ಅಂಗೀಕಾರದಲ್ಲಿ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ-2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ-2020, ಅಂಗೀಕಾರ ದೊರೆತ ಎರಡು ಹೊಸ ಮಸೂದೆಗಳಾಗಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ ಖಂಡಿಸಿ ‘#KisanVirodhiNarendraModi’ ಟ್ರೆಂಡ್

ಇಂದು ಬೆಳಿಗ್ಗೆ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಸರಕಾರ, ಇದು ರೈತರ ಬದುಕಿನಲ್ಲಿ ಬದಲಾವಣೆ ತರಲಿದೆ ಎಂದು ಹೇಳಿತ್ತು. ಆದರೆ ವಿರೋಧ ಪಕ್ಷಗಳು ಈ ಮಸೂದೆಗೆ ಇನ್ನಷ್ಟು ಚರ್ಚೆಯ ಅಗತ್ಯ ಇದೆಯೆಂದು ಹೇಳಿ ಅವುಗಳನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದ್ದವು.

ವಿರೋಧಪಕ್ಷಗಳ ನಿರ್ಣಯ ತಿರಸ್ಕೃತವಾಗಿದ್ದು ಮಸೂದೆಗೆ ಧ್ವನಿಮತದಿಂದ ಅಂಗೀಕಾರ ಪಡೆಯಲು ಸರಕಾರ ನಿರ್ಧರಿಸಿದೆ ಎಂದು ರಾಜ್ಯಸಭೆಯ ಉಪಾಧ್ಯಕ್ಷರು ಘೋಷಿಸಿದಾಗ ಸದನದಲ್ಲಿ ಗದ್ದಲ ಎಬ್ಬಿಸಿದ ವಿರೋಧ ಪಕ್ಷಗಳು, ತಾವು ಸದನದಲ್ಲೇ ಉಪಸ್ಥಿತರಿದ್ದು ಭೌತಿಕ ಮತದಾನದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಬೇಕು ಎಂದು ಪಟ್ಟುಹಿಡಿದವು.

ಉಪಾಧ್ಯಕ್ಷರು ಇದನ್ನು ನಿರಾಕರಿಸಿದ್ದಕ್ಕೆ ಸಧನದ ಬಾವಿಗೆ ಬಂದ ತೃಣಮೂಲ ಪಕ್ಷದ ಸದಸ್ಯ ಡೆರೆಕ್ ಒಬ್ರೆಯನ್ ಸ್ಫೀಕರ್‌ ಟೇಬಲ್ ಮೇಲಿನ ನಿಯಮಾವಳಿ ಪುಸ್ತಕವನ್ನು ಹರಿದು ಹಾಕಿ, ಜೊತೆಗೆ ಮೈಕನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದರು.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಪ್ರತಿಪಕ್ಷಗಳ ಗದ್ದಲ, ಘೋಷಣೆ, ಪ್ರತಿಭಟನೆ ಹೆಚ್ಚಿದಾಗ ಸದನದ ಕಲಾಪವನ್ನು 10 ನಿಮಿಷದ ಮಟ್ಟಿಗೆ ಮುಂದೂಡಲಾಯಿತು.

ಇದರ ನಂತರ ಸದನ ಮತ್ತೇ ಪ್ರಾರಂಭವಾದರೂ ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದ್ದವು, ಪ್ರತಿಭಟನೆಯ ಮಧ್ಯೆಯೇ, ಮಸೂದೆಗೆ ಧ್ವನಿಮತದ ಅಂಗೀಕಾರ ದೊರಕಿದೆ ಎಂದು ಉಪಾಧ್ಯಕ್ಷರು ಘೋಷಿಸಿದರು. ಅಲ್ಲದೆ ಉಪಾಧ್ಯಕ್ಷರ ಆಕ್ಷೇಪವನ್ನು ಮೀರಿ ರಾಜ್ಯ ಸಭೆಯ ಕಲಾಪದ ದೃಶ್ಯಗಳನ್ನು ಪ್ರತಿಪಕ್ಷದ ಸದಸ್ಯರು ಮೊಬೈಲಿನಲ್ಲಿ ದಾಖಲಿಸಿದರು.

“ಸರಕಾರ ಬಳಿ ಸೂಕ್ತ ಬಹುಮತವಿಲ್ಲ. ಇದು ಇಲ್ಲಿಗೇ ಮುಗಿಯದು. ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಸಂಸತ್ತಿನ ಎಲ್ಲಾ ನಿಯಮಗಳನ್ನೂ ಅವರು ಮುರಿಯುವ ಮೂಲಕ ವಂಚಿಸಿದ್ದಾರೆ. ದೇಶದ ಜನತೆಗೆ ಈ ವಂಚನೆ ತಿಳಿಯಬಾರದೆಂದು ರಾಜ್ಯಸಭೆಯ ಟಿವಿಯನ್ನು ಸೆನ್ಸರ್ ಮಾಡಲಾಗಿದೆ. ದೇಶದ ಜನರಿಗೆ ಸುಳ್ಳು ಹೇಳಬೇಡಿ, ನಮ್ಮಲ್ಲಿ ಸಾಕ್ಷ್ಯವಿದೆ” ಎಂದು ತೃಣಮೂಲ ಕಾಂಗ್ರೆಸ್‌ ಸಂಸದ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಮೂರು ಹೊಸ ಮಸೂದೆಗಳ ಪೈಕಿ ಎರಡು ಮಸೂದೆಗೆ ಅಂಗೀಕಾರ ಸಿಕ್ಕಿದ್ದು, ಇನ್ನೊಂದು ಮಸೂದೆಯನ್ನು ಸದನ ನಾಳೆ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ.

ಪ್ರಧಾನಿ ನರೇಂದ್ರ ಮೋದಿ, “ಸಂಸತ್ತಿನಲ್ಲಿ ಕೃಷಿ ಮಸೂದೆಗೆ ಅಂಗೀಕಾರ ದೊರಕಿರುವುದು ಭಾರತೀಯ ಕೃಷಿ ಇತಿಹಾಸದಲ್ಲೇ ಒಂದು ಐತಿಹಾಸಿಕ ಕ್ಷಣವಾಗಿದೆ, ಕೋಟ್ಯಾಂತರ ರೈತರನ್ನು ಸಶಕ್ತಗೊಳಿಸುವ ಹಾಗೂ ಕೃಷಿ ಕ್ಷೇತ್ರದ ಸಂಪೂರ್ಣ ಪರಿವರ್ತನೆಗೆ ಕಾರಣವಾಗುವ ಪ್ರಮುಖ ಮಸೂದೆಗಳಿಗೆ ಸಂಸತ್ತಿನಲ್ಲಿ ಅಂಗೀಕಾರ ದೊರಕಿದ್ದಕ್ಕೆ ರೈತರನ್ನು ಅಭಿನಂದಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...