Homeಮುಖಪುಟಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ದೇಶದ ಜನತೆಗೆ ಈ ವಂಚನೆ ತಿಳಿಯಬಾರದೆಂದು ರಾಜ್ಯಸಭೆಯ ಟಿವಿಯನ್ನು ಸೆನ್ಸರ್ ಮಾಡಲಾಗಿದೆ. ದೇಶದ ಜನರಿಗೆ ಸುಳ್ಳು ಹೇಳಬೇಡಿ, ನಮ್ಮಲ್ಲಿ ಸಾಕ್ಷ್ಯವಿದೆ ಎಂದು ಟಿಎಂಸಿ ಸಂಸದ ಹೇಳಿದ್ದಾರೆ

- Advertisement -
- Advertisement -

ವಿರೋಧ ಪಕ್ಷಗಳ ಭಾರಿ ಪ್ರತಿಭಟನೆಯ ನಡುವೆ ಎರಡು ಕೃಷಿ ಸಂಬಂಧಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ವಿಪಕ್ಷಗಳು ಇದನ್ನು ’ಪ್ರಜಾಪಭುತ್ವದ ಕೊಲೆ’ ಎಂದು ಆರೋಪಿಸಿದ್ದು, ಮಸೂದೆಯ ಅಂಗೀಕಾರದಲ್ಲಿ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ ಮಸೂದೆ-2020 (ಪ್ರಚಾರ ಮತ್ತು ಸೌಲಭ್ಯ) ಮತ್ತು ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ-2020, ಅಂಗೀಕಾರ ದೊರೆತ ಎರಡು ಹೊಸ ಮಸೂದೆಗಳಾಗಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ ಖಂಡಿಸಿ ‘#KisanVirodhiNarendraModi’ ಟ್ರೆಂಡ್

ಇಂದು ಬೆಳಿಗ್ಗೆ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಸರಕಾರ, ಇದು ರೈತರ ಬದುಕಿನಲ್ಲಿ ಬದಲಾವಣೆ ತರಲಿದೆ ಎಂದು ಹೇಳಿತ್ತು. ಆದರೆ ವಿರೋಧ ಪಕ್ಷಗಳು ಈ ಮಸೂದೆಗೆ ಇನ್ನಷ್ಟು ಚರ್ಚೆಯ ಅಗತ್ಯ ಇದೆಯೆಂದು ಹೇಳಿ ಅವುಗಳನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕು ಎಂದು ಆಗ್ರಹಿಸಿದ್ದವು.

ವಿರೋಧಪಕ್ಷಗಳ ನಿರ್ಣಯ ತಿರಸ್ಕೃತವಾಗಿದ್ದು ಮಸೂದೆಗೆ ಧ್ವನಿಮತದಿಂದ ಅಂಗೀಕಾರ ಪಡೆಯಲು ಸರಕಾರ ನಿರ್ಧರಿಸಿದೆ ಎಂದು ರಾಜ್ಯಸಭೆಯ ಉಪಾಧ್ಯಕ್ಷರು ಘೋಷಿಸಿದಾಗ ಸದನದಲ್ಲಿ ಗದ್ದಲ ಎಬ್ಬಿಸಿದ ವಿರೋಧ ಪಕ್ಷಗಳು, ತಾವು ಸದನದಲ್ಲೇ ಉಪಸ್ಥಿತರಿದ್ದು ಭೌತಿಕ ಮತದಾನದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಬೇಕು ಎಂದು ಪಟ್ಟುಹಿಡಿದವು.

ಉಪಾಧ್ಯಕ್ಷರು ಇದನ್ನು ನಿರಾಕರಿಸಿದ್ದಕ್ಕೆ ಸಧನದ ಬಾವಿಗೆ ಬಂದ ತೃಣಮೂಲ ಪಕ್ಷದ ಸದಸ್ಯ ಡೆರೆಕ್ ಒಬ್ರೆಯನ್ ಸ್ಫೀಕರ್‌ ಟೇಬಲ್ ಮೇಲಿನ ನಿಯಮಾವಳಿ ಪುಸ್ತಕವನ್ನು ಹರಿದು ಹಾಕಿ, ಜೊತೆಗೆ ಮೈಕನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದರು.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಪ್ರತಿಪಕ್ಷಗಳ ಗದ್ದಲ, ಘೋಷಣೆ, ಪ್ರತಿಭಟನೆ ಹೆಚ್ಚಿದಾಗ ಸದನದ ಕಲಾಪವನ್ನು 10 ನಿಮಿಷದ ಮಟ್ಟಿಗೆ ಮುಂದೂಡಲಾಯಿತು.

ಇದರ ನಂತರ ಸದನ ಮತ್ತೇ ಪ್ರಾರಂಭವಾದರೂ ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದ್ದವು, ಪ್ರತಿಭಟನೆಯ ಮಧ್ಯೆಯೇ, ಮಸೂದೆಗೆ ಧ್ವನಿಮತದ ಅಂಗೀಕಾರ ದೊರಕಿದೆ ಎಂದು ಉಪಾಧ್ಯಕ್ಷರು ಘೋಷಿಸಿದರು. ಅಲ್ಲದೆ ಉಪಾಧ್ಯಕ್ಷರ ಆಕ್ಷೇಪವನ್ನು ಮೀರಿ ರಾಜ್ಯ ಸಭೆಯ ಕಲಾಪದ ದೃಶ್ಯಗಳನ್ನು ಪ್ರತಿಪಕ್ಷದ ಸದಸ್ಯರು ಮೊಬೈಲಿನಲ್ಲಿ ದಾಖಲಿಸಿದರು.

“ಸರಕಾರ ಬಳಿ ಸೂಕ್ತ ಬಹುಮತವಿಲ್ಲ. ಇದು ಇಲ್ಲಿಗೇ ಮುಗಿಯದು. ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಸಂಸತ್ತಿನ ಎಲ್ಲಾ ನಿಯಮಗಳನ್ನೂ ಅವರು ಮುರಿಯುವ ಮೂಲಕ ವಂಚಿಸಿದ್ದಾರೆ. ದೇಶದ ಜನತೆಗೆ ಈ ವಂಚನೆ ತಿಳಿಯಬಾರದೆಂದು ರಾಜ್ಯಸಭೆಯ ಟಿವಿಯನ್ನು ಸೆನ್ಸರ್ ಮಾಡಲಾಗಿದೆ. ದೇಶದ ಜನರಿಗೆ ಸುಳ್ಳು ಹೇಳಬೇಡಿ, ನಮ್ಮಲ್ಲಿ ಸಾಕ್ಷ್ಯವಿದೆ” ಎಂದು ತೃಣಮೂಲ ಕಾಂಗ್ರೆಸ್‌ ಸಂಸದ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಯನ್ನು ವಿರೋಧಿಸಿ ರಾಜಿನಾಮೆ ನೀಡಿದ ಕೇಂದ್ರ ಸಚಿವೆ!

ಮೂರು ಹೊಸ ಮಸೂದೆಗಳ ಪೈಕಿ ಎರಡು ಮಸೂದೆಗೆ ಅಂಗೀಕಾರ ಸಿಕ್ಕಿದ್ದು, ಇನ್ನೊಂದು ಮಸೂದೆಯನ್ನು ಸದನ ನಾಳೆ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ.

ಪ್ರಧಾನಿ ನರೇಂದ್ರ ಮೋದಿ, “ಸಂಸತ್ತಿನಲ್ಲಿ ಕೃಷಿ ಮಸೂದೆಗೆ ಅಂಗೀಕಾರ ದೊರಕಿರುವುದು ಭಾರತೀಯ ಕೃಷಿ ಇತಿಹಾಸದಲ್ಲೇ ಒಂದು ಐತಿಹಾಸಿಕ ಕ್ಷಣವಾಗಿದೆ, ಕೋಟ್ಯಾಂತರ ರೈತರನ್ನು ಸಶಕ್ತಗೊಳಿಸುವ ಹಾಗೂ ಕೃಷಿ ಕ್ಷೇತ್ರದ ಸಂಪೂರ್ಣ ಪರಿವರ್ತನೆಗೆ ಕಾರಣವಾಗುವ ಪ್ರಮುಖ ಮಸೂದೆಗಳಿಗೆ ಸಂಸತ್ತಿನಲ್ಲಿ ಅಂಗೀಕಾರ ದೊರಕಿದ್ದಕ್ಕೆ ರೈತರನ್ನು ಅಭಿನಂದಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಕೃಷಿ ಮಸೂದೆ’ಗೆ ರೈತ ಬಲಿ: ಕಾಯ್ದೆಗಳ ಬಗ್ಗೆ ಹರ್ಸಿಮ್ರತ್ ಕೌರ್‌ ಯೂಟರ್ನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...