Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...