Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...