Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...