Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...