Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...