Homeಚಳವಳಿದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ.

- Advertisement -
- Advertisement -

ಜಗತ್ತಿನ ಇತಿಹಾಸದಲ್ಲೆ ಅತೀ ದೊಡ್ಡ ರೈತ ಹೋರಾಟ ದೆಹಲಿಯ ಗಡಿಗಳಲ್ಲಿ ನಡೆಯುತ್ತಿದೆ. ಎರಡನೆ ಬಾರಿ ಭಾರಿ ಬಹುಮತದಿಂದ ಅಧಿಕಾರ ಹಿಡಿದ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಸರ್ವಾಧಿಕಾರಿ ಧೋರಣೆ, ಅನ್ನದಾತರ ವಿಷಯದಲ್ಲಿ ಮುಗ್ಗರಿಸುವಂತೆ ಕಾಣುತ್ತಿದೆ. ಸಿಎಎ, ಎನ್‌ಆರ್‌ಸಿ ಕಾನೂನುಗಳನ್ನು ಪರಿಚಯಿಸುವವರೆಗೂ ಎಲ್ಲವನ್ನೂ ದಕ್ಕಿಸಿಕೊಂಡಿದ್ದ ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌‌ಸಿ ಕಾನೂನಿನ ವಿಷಯದಲ್ಲಿ ಅನಿರೀಕ್ಷಿತ ವಿರೋಧವನ್ನು ಎದುರಿಸಿತು. ಆದರೆ ಕೊರೊನಾ ಸಾಂಕ್ರಮಿಕದಿಂದಾಗಿ ಕೇಂದ್ರಕ್ಕೆ ಈ ಪ್ರತಿರೋಧದಿಂದ ತುಸು ಉಸಿರು ತೆಗೆದುಕೊಳ್ಳಲು ಸಾಧ್ಯವಾಯಿತು.

ಆದರೆ ದೇಶವಿಡಿ ಕೊರೊನಾ ಕಾಲದಲ್ಲಿ ಕಷ್ಟ ಪಡುತ್ತಿದ್ದರೆ ಆ ಕಷ್ಟಗಳಿಗೆ ಕಿವಿಗೊಡದೆ ತನ್ನ ಭಂಡತನವನ್ನು ಮುಂದುವರೆಸಿ ಕೃಷಿಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಕೇಂದ್ರ ಜಾರಿ ಮಾಡಿತು. ಈ ಹೊತ್ತಲ್ಲಿ ಹೊತ್ತಿಕೊಂಡ ಕಿಡಿ ಇದೀಗ ದೆಹಲಿಯ ಗದ್ದುಗೆಯನ್ನು ನಡುಗಿಸುತ್ತಿದೆ. ಆರಂಭದಲ್ಲಿ ಕೇಂದ್ರ ಸರ್ಕಾರ ವಾಡಿಕೆಯಂತೆ ತನ್ನ ವಿರೋಧಿಗಳನ್ನು ಮಣಿಸಲು ಬಳಸುವ ಎಲ್ಲವನ್ನೂ ಮಾಡಿತು. ದೆಹಲಿಗೆ ಹೊರಟು ನಿಂತ ರೈತರನ್ನು ತಡೆಯಲು ಬಲ ಪ್ರಯೋಗಿಸಿತು. ಹರಿಯಾಣದ ಹೆದ್ದಾರಿಗಳನ್ನೇ ಅಗೆದು ವಾಹನಗಳನ್ನು ಹೋಗದಂತೆ ತಡೆಯಿತು. ದೇಶದ ಗಡಿಗಳಲ್ಲಿ ಹಾಕುವ ಮುಳ್ಳು ತಂತಿಗಳನ್ನು ಹಾಕಿ, ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್, ಆಶ್ರುವಾಯು, ಕೊರೆಯುವ ಚಳಿಯಲ್ಲೂ ಜಲಪಿರಂಗಿ ಸಿಡಿಸಿತು. ಆದರೆ ಒಂದು ಉದಾತ್ತಾ ಧ್ಯೇಯವನ್ನಿಟ್ಟುಕೊಂಡು ಬಂದಿದ್ದ ರೈತರನ್ನು ಇದ್ಯಾವುದು ನಡುಗಿಸಲಿಲ್ಲ.

ಆರಂಭದಲ್ಲಿ ರೈತರು ದೆಹಲಿಗೆ ತೆರಳಿ ಅಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದರೂ, ಕೇಂದ್ರ ಸರ್ಕಾರ ಅವರನ್ನು ದೆಹಲಿ ಪ್ರವೇಶಿಸಲು ಅನುಮತಿ ನೀಡಲಿಲ್ಲ. ಈ ಕಾರಣದಿಂದಲೇ ದೆಹಲಿಯ ಪ್ರಮುಖದ ಗಡಿಗಳಲ್ಲಿ ಕಳೆದ 50 ದಿಗಳಿಂದಲೂ ರೈತರು ಆಂದೋಲನವನ್ನು ಚಾಲ್ತಿಯಲ್ಲಿಟ್ಟಿದ್ದಾರೆ. ಇಲ್ಲೂ ಕೇಂದ್ರ ಸರ್ಕಾರ ತನ್ನ ಕ್ರೂರ ಬುದ್ದಿಯನ್ನು ತೋರಿಸುತ್ತಲೆ ಬಂದಿದೆ. ರೈತರನ್ನು ತುಕ್ಡೆ ಗ್ಯಾಂಗ್ ಎನ್ನುವುದು, ಖಾಲಿಸ್ತಾನಿ ಉಗ್ರರು ಎನ್ನುವುದು, ತಮ್ಮ ಮಾಧ್ಯಮಗಳನ್ನು ಬಳಸಿ ಕೊಂಡು ಆಂದೋಲನದ ವಿಶ್ವಾಸಾರ್ಹತೆಯನ್ನು ಕುಗ್ಗಿಸಲು ನೋಡಿತು. ಆದರೆ ಪ್ರತಿಭಟನಾ ನಿರತ ರೈತರು ಇವೆಲ್ಲವನ್ನೂ ಗೆದ್ದರು.

ರೈತರ ಹೋರಾಟ ಎಷ್ಟು ಬಲಗೊಳ್ಳುತ್ತಾ ಬಂದಿದೆಯೆಂದರೆ ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳು ಒಂದೊಂದಾಗಿ ಅದರಿಂದ ಕಳಚಿಕೊಳ್ಳುತ್ತಲೆ ಇದೆ. ಕೊನೆಗೆ ಬಿಜೆಪಿ ನಾಯಕರು ರೈತರನ್ನು ಖಾಲಿಸ್ತಾನಿಗಳು ಎಂದು ಹೇಳಿರುವುದಕ್ಕೆ ಕೇಂದ್ರ ಸರ್ಕಾರ ಖೇದ ವ್ಯಕ್ತಪಡಿಸಿತು. ವಾರಕ್ಕೆ ಮೂರು ಬಾರಿ ಕೃಷಿ ಕಾನೂನಿನ ಪರ ಮಾತನಾಡುತ್ತಿದ್ದ ಪ್ರಧಾನಿ ಮೋದಿ ಮಾತು ನಿಲ್ಲಿಸಿದರು. ಯಾವುದೆ ಕಾರಣಕ್ಕೂ ಕಾನೂನನ್ನು ವಾಪಾಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರೈತರ ಜೊತೆ ಮಾತುಕತೆಯನ್ನು ವಿಫಲಗೊಳಿಸುತ್ತಲೆ ಬರುತ್ತಿದ್ದ ಕೇಂದ್ರ ಸರ್ಕಾರ ಆರನೇ ಮಾತುಕತೆಯಲ್ಲಿ ರೈತರ ಎರಡು ಬೇಡಿಕೆಯನ್ನು ಮನ್ನಿಸುವುದಾಗಿ ಹೇಳಿಕೊಂಡಿತು.

ರೈತರ ಹೋರಾಟ ಯಾವ ಮಟ್ಟಿಗೆ ಸಫಲತೆಯನ್ನು ಕಂಡಿದೆ ಎಂದರೆ, ಕೃಷಿ ಕಾನೂನಿನ ವಿರುದ್ಧ ತಾವು ಅರ್ಜಿಯನ್ನು ಹಾಕದಿದ್ದರೂ ಅವುಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅದನ್ನು ಚರ್ಚೆ ಮಾಡಲು ಸಮಿತಿಯನ್ನು ರಚಿಸಿದೆ. ಆದರೆ ನ್ಯಾಯಾಲಯದ ಈ ಸಮಿತಿಯಲ್ಲಿ ಕಾನೂನಿನ ಪರವಿರುವವರು ಇದ್ದಾರೆಂದು ಸಮಿತಿಯನ್ನು ರೈತರ ಬಹಿಷ್ಕರಿಸಿದ್ದಾರೆ. ಸಮಿತಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಹಿಂದೆ ಕಾನೂನಿನ ಪರವಿದ್ದ ಭೂಪಿಂದರ್‌ ಸಿಂಗ್ ಮನ್ ತಾನು ಯಾವತ್ತೂ ಪಂಜಾಬ್ ಮತ್ತು ರೈತರ ಪರ ಎಂದು ಹೇಳಿ ಸಮಿತಿಯಿಂದ ಸ್ವಯಂ ಹೊರ ನಡೆದಿದ್ದಾರೆ. ಆದರೆ ರೈತರು ತಮಗೆ ತಡೆ ಹಿಡಿಯುವಿಕೆ ಬೇಕಿಲ್ಲ, ಕಾನೂನನ್ನು ರದ್ದು ಮಾಡುವವರೆಗೂ ತಮ್ಮ ಹೋರಾಟ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಎಂಟನೆ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸುವುದಾಗಿ ಹೇಳಿದ್ದಾರೆ. ಇದನ್ನು ತಡೆ ಹಿಡಿಯಬೇಕೆಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಹೋಯಿತು. ಜೊತೆಗೆ ತಾನೆ ಸ್ವತಃ ಈ ರ್‍ಯಾಲಿಯನ್ನು ತಡೆಹಿಡಿಯಬೇಕೆಂದು ನ್ಯಾಯಾಲಯವನ್ನು ಸಂಪರ್ಕಿಸಿದೆ. ಆದರೆ ರೈತರು ತಮ್ಮ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಎಲ್ಲಿಯವರೆಗೆ ಇಕ್ಕಟ್ಟಿಗೆ ಸಿಲುಕಿದೆ ಎಂದರೆ, ಕೃಷಿ ಕಾನೂನಿನ ಪರ ಬಿಜೆಪಿ ಆಯೋಜಿಸಿದ್ದ 700 ಕ್ಕು ಹೆಚ್ಚು ಸಭೆಗಳನ್ನು ತಡೆ ಹಿಡಿಯಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ಗೃಹ ಮಂತ್ರಿ ಅಮಿತ್ ಶಾ ಆದೇಶಿಸಿದ್ದಾರೆ. ಶುಕ್ರವಾರ(ನಾಳೆ) ರೈತರೊಡನೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ. ಆದರೆ ಈ ಮಾತುಕತೆಯಿಂದ ಏನೂ ಫಲವಿಲ್ಲ ಎಂದೇ ಇಲ್ಲಿವರೆಗಿನ ಮಾಹಿತಿ. ಈ ಮಾತುಕತೆಯ ಹೊರತಾಗಿಯೂ ರೈತರು ಗಣರಾಜ್ಯೋತ್ಸವದಂದು ನಡೆಯಲಿರುವ ಟ್ರಾಕ್ಟರ್‌ ರ್‍ಯಾಲಿಗೆ ಭರದಿಂದ ಸಿದ್ದತೆ ನಡೆಸುತ್ತಿದ್ದಾರೆ. ರೈತರ ಹೋರಾಟವು ಪ್ರಜಾಪ್ರಭುತ್ವ ಮಾದರಿಯ ಹೋರಾಟಗಳಲ್ಲಿ ಮತ್ತೇ ನಂಬಿಕೆಯನ್ನು ಚಿಗುರುವಂತೆ ಮಾಡುತ್ತಿದೆ. ಈ ಹೋರಾಟವು ಕೇಂದ್ರ ಸರ್ಕಾರದ ಎಲ್ಲಾ ಎಣಿಕೆಗಳನ್ನು ತಲೆಕೆಳಗಾಗಿಸಿದೆ. ಸರ್ಕಾರ ರೈತರ ಮಾತನ್ನು ಕೇಳುತ್ತದೆ, ಕೇಳಲೆ ಬೇಕಾಗಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...