Homeಮುಖಪುಟಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ...

ಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ ಮಾತುಗಳು

ಈಗಾಗಲೇ ರೈತರು ಗೆದ್ದಿದ್ದಾರೆ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆಗಾಗಿ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ವಾಪಸ್ಸಾದ ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರಿಗೆ ಇಂದು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಆ ಸಂದರ್ಭದಲ್ಲಿ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಮಾತನಾಡಿ “ರೈತ ಹೋರಾಟದಲ್ಲಿ ನಾವು ಕೇವಲ ಒಂದು ವಾರಗಳ ಕಾಲ ಮಾತ್ರ ಇದ್ದೆವು. ಅಂದರೆ ಆನೆಯ ದಂತದ ಒಂದು ಭಾಗವನ್ನು ಮಾತ್ರ ನಾವು ತಿಳಿಯಲು ಸಾಧ್ಯವಾಗಿದೆ. ಇತಿಹಾಸದಲ್ಲಿ ಸ್ವಾತಂತ್ರ್ಯ ಹೋರಾಟದ ನಂತರ ನಡೆಯುತ್ತಿರುವ ದಿಟ್ಟ ಹೋರಾಟ ಇದಾಗಿದೆ. ರೈತರು ಗೆಲ್ಲದೇ ಅಲ್ಲಿಂದ ಕದಲುವುದಿಲ್ಲ ಎಂದು ನಿರ್ಧರಿಸಿದ್ದಾರೆ” ಎಂದರು.

ಕೇಂದ್ರ ಸರ್ಕಾರ ಇಡೀ ದೇಶದ ಮೇಲೆ ಯುದ್ಧ ಸಾರಿದೆ. ದೆಹಲಿಯ ಗಡಿಗಳಲ್ಲಿ ಸೈನಿಕ ಪಡೆಗಳನ್ನು ನಿಯೋಜಿಸಿ ನಿಜಕ್ಕೂ ಯುದ್ಧಭೂಮಿ ರೀತಿ ಮಾರ್ಪಡಿಸಿದೆ. ಆದರೆ ರೈತರು ಮಾತ್ರ ಶಾಂತಿಯುತವಾಗಿ ತಮ್ಮ ವಿರೋಧ ದಾಖಲಿಸುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ರೈತ ಮಹಾಪಂಚಾಯತ್ ನಡೆಸಿ ಇಡೀ ದೇಶಕ್ಕೆ ಹೋರಾಟದ ಕಿಡಿ ಹಬ್ಬಿಸುತ್ತಿದೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಸಮಾನತೆಯ ಸಾಗರದ ಹೋರಾಟ ಇದಾಗಿದ್ದು, ನೀವು ತೀರ್ಥಯಾತ್ರೆ ರೀತಿ ದಯವಿಟ್ಟು ನೀವೆಲ್ಲರೂ ಒಮ್ಮೆ ಹೋಗಿ ದೆಹಲಿಯ ಗಡಿಗಳಿಗೆ ಭೇಟಿ ಕೊಡಿ ಎಂದು ಮನವಿ ಮಾಡಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸರೋವರ್ ಬೆಂಕಿಕೆರೆ ಮಾತನಾಡಿ “ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಆರ್ಥಿಕ ಕುಸಿತ, ನಿರುದ್ಯೋಗದಂತಹ ಕರಾಳ ಸ್ಥಿತಿಯಲ್ಲಿದ್ದ ಭಾರತಕ್ಕೆ ಈ ರೈತ ಹೋರಾಟ ಸ್ಪಷ್ಟ ದಿಕ್ಕು ತೋರಿದೆ. ಭಾರತ ಎಂದರೆ ಏನು ಎಂಬುದನ್ನು ಈ ರೈತ ಹೋರಾಟ ಕಲಿಸುತ್ತಿದೆ. ಜಾತಿಯಂತಹ ರೋಗಗ್ರಸ್ಥದಿಂದ ಭಾರತ ಇಂದು ದೆಹಲಿಯ ಗಡಿಗಳಲ್ಲಿ ಮೇಲ್ಜಾತಿ, ಕೆಳಜಾತಿಯೆಂಬ ಜಾತಿ ತಾರತಮ್ಯವಿಲ್ಲದೆ, ಧರ್ಮ ಬೇಧಭಾವವಿಲ್ಲದೆ ಎಲ್ಲರೂ ಒಟ್ಟಿಗೆ ಊಟ ಮಾಡುತ್ತಾ ಹೋರಾಡುತ್ತಿದ್ದಾರೆ” ಎಂದರು.

ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ದೆಹಲಿಯಲ್ಲಿ ನಡೆಯುತ್ತಿದೆ. ಇದು ರೈತರ ಹೋರಾಟವಾಗಿ ಮಾತ್ರ ಉಳಿದಿಲ್ಲ, ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬರ ಹೋರಾಟವಾಗಿ ಮಾರ್ಪಟ್ಟಿದೆ. ನಾವು ಅಲ್ಲಿ ಅತ್ಯದ್ಭುತವಾದ ಮಾನವ ಪ್ರೀತಿಯನ್ನು ಕಲಿತು ಬಂದಿದ್ದೇವೆ. ರೈತರು ವಿನಯ, ದೃಢನಿರ್ಧಾರ ಮತ್ತು ಗಟ್ಟಿತನದಿಂದ ಹೋರಾಡುತ್ತಿದ್ದಾರೆ. ಈ ಹೋರಾಟದಲ್ಲಿ ಈಗಾಗಲೇ ರೈತರು ಗೆದ್ದಿದ್ದಾರೆ. ಇದರಲ್ಲಿ ಅನುಮಾನವೇ ಇಲ್ಲ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ ಎಂದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಮ್ಮ ದೇಶದ ಮುಂದಿನ ಪೀಳಿಗೆಗೋಸ್ಕರ, ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಮನೆ ಮಠ ಬಿಟ್ಟು, ಒಂದೊಂದು ರೂಪಾಯಿ ಜೋಡಿಸಿಕೊಂಡು ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ದುಡಿಯುತ್ತಾ ಹೋರಾಡುತ್ತಿದ್ದಾರೆ. ಈ ಹೋರಾಟ ಪೂರ್ತಿ ಅವರದ್ದು. ಈ ಹೋರಾಟದಲ್ಲಿ ನಾವು ನಿಮಿತ್ತ ಮಾತ್ರ.. ಇದು ಇಡೀ ರೈತರ ಹೋರಾಟ. ಅದರಲ್ಲಿ ನಾವು ಅಳಿಲು ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ನಾವು ಧನ್ಯರಾಗಿದ್ದೇವೆ. ಅವರ ಹೋರಾಟ ದೊಡ್ಡ ಭರವಸೆ ಮತ್ತು ಹೊಸ ಉತ್ಸಾಹವನ್ನು ತುಂಬಿದೆ” ಎಂದರು.

ದೆಹಲಿಯ ಹೋರಾಟಗಾರರಿಂದ ನಾವು ಕಲಿತಿರುವುದೇನೆಂದರೆ ಅವರಷ್ಟೇ ಗಟ್ಟಿ ಹೋರಾಟವನ್ನು ದಕ್ಷಿಣ ಭಾರತದಲ್ಲಿಯೂ ಕಟ್ಟಬೇಕಿದೆ. ವಿಸ್ತಾರವಾದ ಹೋರಾಟವನ್ನು ನಾವು ಕಟ್ಟೇ ಕಟ್ಟುತ್ತೇವೆ ಎಂಬ ವಿಶ್ವಾಸ ಬಂದಿದೆ. ಸಂಪೂರ್ಣವಾಗಿ ತನುಮನಧನದಿಂದ ಈ ಆಂದೋಲನದಲ್ಲಿ ತೊಡಗಿಸಿಕೊಳ್ಳುತ್ತೇವೆ. ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಪಂಚಾಯತ್ ನಡೆಯಲಿದ್ದು, 21 ಮತ್ತು 22 ರಂದು ಉತ್ತರ ಕರ್ನಾಟಕದಲ್ಲಿ ರೈತ ಹೋರಾಟ ನಡೆಯಲಿದೆ. ನೀವೆಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.

ಕೊಡಗಿನ ಯುವ ಹೋರಾಟಗಾರ ಗಿರೀಶ್ ಮಾತನಾಡಿ “ನಾವು ಟಿವಿ ಚಾನೆಲ್‌ಗಳಲ್ಲಿ ನೋಡಿದ ಹಾಗೆ ಅಲ್ಲಿನ ಪರಿಸ್ಥಿತಿ ಇಲ್ಲ. ಸರ್ಕಾರ ಅವರ ಮೇಲೆ ದೌರ್ಜನ್ಯವೆಸಗುತ್ತಿದೆ. ನೀರು, ವಿದ್ಯುತ್, ಇಂಟರ್ನೆಟ್‌ನಂತರ ಮೂಲಭೂತ ಸೌಲಭ್ಯಗಳನ್ನು ಕೊಡದೇ ಕಿರುಕುಳ ನೀಡುತ್ತಿದೆ. ಕೇವಲ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳಿಗೋಸ್ಕರ ರೈತರನ್ನು ಬಲಿಕೊಡಲಾಗುತ್ತದೆ ಎಂಬುದು ನನಗೆ ದೆಹಲಿಯಲ್ಲಿ ಗೊತ್ತಾಯಿತು.


ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...