Homeಮುಖಪುಟಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ...

ಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ ಮಾತುಗಳು

ಈಗಾಗಲೇ ರೈತರು ಗೆದ್ದಿದ್ದಾರೆ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆಗಾಗಿ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ವಾಪಸ್ಸಾದ ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರಿಗೆ ಇಂದು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಆ ಸಂದರ್ಭದಲ್ಲಿ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಮಾತನಾಡಿ “ರೈತ ಹೋರಾಟದಲ್ಲಿ ನಾವು ಕೇವಲ ಒಂದು ವಾರಗಳ ಕಾಲ ಮಾತ್ರ ಇದ್ದೆವು. ಅಂದರೆ ಆನೆಯ ದಂತದ ಒಂದು ಭಾಗವನ್ನು ಮಾತ್ರ ನಾವು ತಿಳಿಯಲು ಸಾಧ್ಯವಾಗಿದೆ. ಇತಿಹಾಸದಲ್ಲಿ ಸ್ವಾತಂತ್ರ್ಯ ಹೋರಾಟದ ನಂತರ ನಡೆಯುತ್ತಿರುವ ದಿಟ್ಟ ಹೋರಾಟ ಇದಾಗಿದೆ. ರೈತರು ಗೆಲ್ಲದೇ ಅಲ್ಲಿಂದ ಕದಲುವುದಿಲ್ಲ ಎಂದು ನಿರ್ಧರಿಸಿದ್ದಾರೆ” ಎಂದರು.

ಕೇಂದ್ರ ಸರ್ಕಾರ ಇಡೀ ದೇಶದ ಮೇಲೆ ಯುದ್ಧ ಸಾರಿದೆ. ದೆಹಲಿಯ ಗಡಿಗಳಲ್ಲಿ ಸೈನಿಕ ಪಡೆಗಳನ್ನು ನಿಯೋಜಿಸಿ ನಿಜಕ್ಕೂ ಯುದ್ಧಭೂಮಿ ರೀತಿ ಮಾರ್ಪಡಿಸಿದೆ. ಆದರೆ ರೈತರು ಮಾತ್ರ ಶಾಂತಿಯುತವಾಗಿ ತಮ್ಮ ವಿರೋಧ ದಾಖಲಿಸುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ರೈತ ಮಹಾಪಂಚಾಯತ್ ನಡೆಸಿ ಇಡೀ ದೇಶಕ್ಕೆ ಹೋರಾಟದ ಕಿಡಿ ಹಬ್ಬಿಸುತ್ತಿದೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಸಮಾನತೆಯ ಸಾಗರದ ಹೋರಾಟ ಇದಾಗಿದ್ದು, ನೀವು ತೀರ್ಥಯಾತ್ರೆ ರೀತಿ ದಯವಿಟ್ಟು ನೀವೆಲ್ಲರೂ ಒಮ್ಮೆ ಹೋಗಿ ದೆಹಲಿಯ ಗಡಿಗಳಿಗೆ ಭೇಟಿ ಕೊಡಿ ಎಂದು ಮನವಿ ಮಾಡಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸರೋವರ್ ಬೆಂಕಿಕೆರೆ ಮಾತನಾಡಿ “ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಆರ್ಥಿಕ ಕುಸಿತ, ನಿರುದ್ಯೋಗದಂತಹ ಕರಾಳ ಸ್ಥಿತಿಯಲ್ಲಿದ್ದ ಭಾರತಕ್ಕೆ ಈ ರೈತ ಹೋರಾಟ ಸ್ಪಷ್ಟ ದಿಕ್ಕು ತೋರಿದೆ. ಭಾರತ ಎಂದರೆ ಏನು ಎಂಬುದನ್ನು ಈ ರೈತ ಹೋರಾಟ ಕಲಿಸುತ್ತಿದೆ. ಜಾತಿಯಂತಹ ರೋಗಗ್ರಸ್ಥದಿಂದ ಭಾರತ ಇಂದು ದೆಹಲಿಯ ಗಡಿಗಳಲ್ಲಿ ಮೇಲ್ಜಾತಿ, ಕೆಳಜಾತಿಯೆಂಬ ಜಾತಿ ತಾರತಮ್ಯವಿಲ್ಲದೆ, ಧರ್ಮ ಬೇಧಭಾವವಿಲ್ಲದೆ ಎಲ್ಲರೂ ಒಟ್ಟಿಗೆ ಊಟ ಮಾಡುತ್ತಾ ಹೋರಾಡುತ್ತಿದ್ದಾರೆ” ಎಂದರು.

ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ದೆಹಲಿಯಲ್ಲಿ ನಡೆಯುತ್ತಿದೆ. ಇದು ರೈತರ ಹೋರಾಟವಾಗಿ ಮಾತ್ರ ಉಳಿದಿಲ್ಲ, ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬರ ಹೋರಾಟವಾಗಿ ಮಾರ್ಪಟ್ಟಿದೆ. ನಾವು ಅಲ್ಲಿ ಅತ್ಯದ್ಭುತವಾದ ಮಾನವ ಪ್ರೀತಿಯನ್ನು ಕಲಿತು ಬಂದಿದ್ದೇವೆ. ರೈತರು ವಿನಯ, ದೃಢನಿರ್ಧಾರ ಮತ್ತು ಗಟ್ಟಿತನದಿಂದ ಹೋರಾಡುತ್ತಿದ್ದಾರೆ. ಈ ಹೋರಾಟದಲ್ಲಿ ಈಗಾಗಲೇ ರೈತರು ಗೆದ್ದಿದ್ದಾರೆ. ಇದರಲ್ಲಿ ಅನುಮಾನವೇ ಇಲ್ಲ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ ಎಂದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಮ್ಮ ದೇಶದ ಮುಂದಿನ ಪೀಳಿಗೆಗೋಸ್ಕರ, ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಮನೆ ಮಠ ಬಿಟ್ಟು, ಒಂದೊಂದು ರೂಪಾಯಿ ಜೋಡಿಸಿಕೊಂಡು ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ದುಡಿಯುತ್ತಾ ಹೋರಾಡುತ್ತಿದ್ದಾರೆ. ಈ ಹೋರಾಟ ಪೂರ್ತಿ ಅವರದ್ದು. ಈ ಹೋರಾಟದಲ್ಲಿ ನಾವು ನಿಮಿತ್ತ ಮಾತ್ರ.. ಇದು ಇಡೀ ರೈತರ ಹೋರಾಟ. ಅದರಲ್ಲಿ ನಾವು ಅಳಿಲು ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ನಾವು ಧನ್ಯರಾಗಿದ್ದೇವೆ. ಅವರ ಹೋರಾಟ ದೊಡ್ಡ ಭರವಸೆ ಮತ್ತು ಹೊಸ ಉತ್ಸಾಹವನ್ನು ತುಂಬಿದೆ” ಎಂದರು.

ದೆಹಲಿಯ ಹೋರಾಟಗಾರರಿಂದ ನಾವು ಕಲಿತಿರುವುದೇನೆಂದರೆ ಅವರಷ್ಟೇ ಗಟ್ಟಿ ಹೋರಾಟವನ್ನು ದಕ್ಷಿಣ ಭಾರತದಲ್ಲಿಯೂ ಕಟ್ಟಬೇಕಿದೆ. ವಿಸ್ತಾರವಾದ ಹೋರಾಟವನ್ನು ನಾವು ಕಟ್ಟೇ ಕಟ್ಟುತ್ತೇವೆ ಎಂಬ ವಿಶ್ವಾಸ ಬಂದಿದೆ. ಸಂಪೂರ್ಣವಾಗಿ ತನುಮನಧನದಿಂದ ಈ ಆಂದೋಲನದಲ್ಲಿ ತೊಡಗಿಸಿಕೊಳ್ಳುತ್ತೇವೆ. ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಪಂಚಾಯತ್ ನಡೆಯಲಿದ್ದು, 21 ಮತ್ತು 22 ರಂದು ಉತ್ತರ ಕರ್ನಾಟಕದಲ್ಲಿ ರೈತ ಹೋರಾಟ ನಡೆಯಲಿದೆ. ನೀವೆಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.

ಕೊಡಗಿನ ಯುವ ಹೋರಾಟಗಾರ ಗಿರೀಶ್ ಮಾತನಾಡಿ “ನಾವು ಟಿವಿ ಚಾನೆಲ್‌ಗಳಲ್ಲಿ ನೋಡಿದ ಹಾಗೆ ಅಲ್ಲಿನ ಪರಿಸ್ಥಿತಿ ಇಲ್ಲ. ಸರ್ಕಾರ ಅವರ ಮೇಲೆ ದೌರ್ಜನ್ಯವೆಸಗುತ್ತಿದೆ. ನೀರು, ವಿದ್ಯುತ್, ಇಂಟರ್ನೆಟ್‌ನಂತರ ಮೂಲಭೂತ ಸೌಲಭ್ಯಗಳನ್ನು ಕೊಡದೇ ಕಿರುಕುಳ ನೀಡುತ್ತಿದೆ. ಕೇವಲ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳಿಗೋಸ್ಕರ ರೈತರನ್ನು ಬಲಿಕೊಡಲಾಗುತ್ತದೆ ಎಂಬುದು ನನಗೆ ದೆಹಲಿಯಲ್ಲಿ ಗೊತ್ತಾಯಿತು.


ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....