Homeಮುಖಪುಟಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ...

ಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ ಮಾತುಗಳು

ಈಗಾಗಲೇ ರೈತರು ಗೆದ್ದಿದ್ದಾರೆ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆಗಾಗಿ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ವಾಪಸ್ಸಾದ ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರಿಗೆ ಇಂದು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಆ ಸಂದರ್ಭದಲ್ಲಿ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಮಾತನಾಡಿ “ರೈತ ಹೋರಾಟದಲ್ಲಿ ನಾವು ಕೇವಲ ಒಂದು ವಾರಗಳ ಕಾಲ ಮಾತ್ರ ಇದ್ದೆವು. ಅಂದರೆ ಆನೆಯ ದಂತದ ಒಂದು ಭಾಗವನ್ನು ಮಾತ್ರ ನಾವು ತಿಳಿಯಲು ಸಾಧ್ಯವಾಗಿದೆ. ಇತಿಹಾಸದಲ್ಲಿ ಸ್ವಾತಂತ್ರ್ಯ ಹೋರಾಟದ ನಂತರ ನಡೆಯುತ್ತಿರುವ ದಿಟ್ಟ ಹೋರಾಟ ಇದಾಗಿದೆ. ರೈತರು ಗೆಲ್ಲದೇ ಅಲ್ಲಿಂದ ಕದಲುವುದಿಲ್ಲ ಎಂದು ನಿರ್ಧರಿಸಿದ್ದಾರೆ” ಎಂದರು.

ಕೇಂದ್ರ ಸರ್ಕಾರ ಇಡೀ ದೇಶದ ಮೇಲೆ ಯುದ್ಧ ಸಾರಿದೆ. ದೆಹಲಿಯ ಗಡಿಗಳಲ್ಲಿ ಸೈನಿಕ ಪಡೆಗಳನ್ನು ನಿಯೋಜಿಸಿ ನಿಜಕ್ಕೂ ಯುದ್ಧಭೂಮಿ ರೀತಿ ಮಾರ್ಪಡಿಸಿದೆ. ಆದರೆ ರೈತರು ಮಾತ್ರ ಶಾಂತಿಯುತವಾಗಿ ತಮ್ಮ ವಿರೋಧ ದಾಖಲಿಸುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ರೈತ ಮಹಾಪಂಚಾಯತ್ ನಡೆಸಿ ಇಡೀ ದೇಶಕ್ಕೆ ಹೋರಾಟದ ಕಿಡಿ ಹಬ್ಬಿಸುತ್ತಿದೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಸಮಾನತೆಯ ಸಾಗರದ ಹೋರಾಟ ಇದಾಗಿದ್ದು, ನೀವು ತೀರ್ಥಯಾತ್ರೆ ರೀತಿ ದಯವಿಟ್ಟು ನೀವೆಲ್ಲರೂ ಒಮ್ಮೆ ಹೋಗಿ ದೆಹಲಿಯ ಗಡಿಗಳಿಗೆ ಭೇಟಿ ಕೊಡಿ ಎಂದು ಮನವಿ ಮಾಡಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸರೋವರ್ ಬೆಂಕಿಕೆರೆ ಮಾತನಾಡಿ “ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಆರ್ಥಿಕ ಕುಸಿತ, ನಿರುದ್ಯೋಗದಂತಹ ಕರಾಳ ಸ್ಥಿತಿಯಲ್ಲಿದ್ದ ಭಾರತಕ್ಕೆ ಈ ರೈತ ಹೋರಾಟ ಸ್ಪಷ್ಟ ದಿಕ್ಕು ತೋರಿದೆ. ಭಾರತ ಎಂದರೆ ಏನು ಎಂಬುದನ್ನು ಈ ರೈತ ಹೋರಾಟ ಕಲಿಸುತ್ತಿದೆ. ಜಾತಿಯಂತಹ ರೋಗಗ್ರಸ್ಥದಿಂದ ಭಾರತ ಇಂದು ದೆಹಲಿಯ ಗಡಿಗಳಲ್ಲಿ ಮೇಲ್ಜಾತಿ, ಕೆಳಜಾತಿಯೆಂಬ ಜಾತಿ ತಾರತಮ್ಯವಿಲ್ಲದೆ, ಧರ್ಮ ಬೇಧಭಾವವಿಲ್ಲದೆ ಎಲ್ಲರೂ ಒಟ್ಟಿಗೆ ಊಟ ಮಾಡುತ್ತಾ ಹೋರಾಡುತ್ತಿದ್ದಾರೆ” ಎಂದರು.

ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ದೆಹಲಿಯಲ್ಲಿ ನಡೆಯುತ್ತಿದೆ. ಇದು ರೈತರ ಹೋರಾಟವಾಗಿ ಮಾತ್ರ ಉಳಿದಿಲ್ಲ, ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬರ ಹೋರಾಟವಾಗಿ ಮಾರ್ಪಟ್ಟಿದೆ. ನಾವು ಅಲ್ಲಿ ಅತ್ಯದ್ಭುತವಾದ ಮಾನವ ಪ್ರೀತಿಯನ್ನು ಕಲಿತು ಬಂದಿದ್ದೇವೆ. ರೈತರು ವಿನಯ, ದೃಢನಿರ್ಧಾರ ಮತ್ತು ಗಟ್ಟಿತನದಿಂದ ಹೋರಾಡುತ್ತಿದ್ದಾರೆ. ಈ ಹೋರಾಟದಲ್ಲಿ ಈಗಾಗಲೇ ರೈತರು ಗೆದ್ದಿದ್ದಾರೆ. ಇದರಲ್ಲಿ ಅನುಮಾನವೇ ಇಲ್ಲ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ ಎಂದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಮ್ಮ ದೇಶದ ಮುಂದಿನ ಪೀಳಿಗೆಗೋಸ್ಕರ, ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಮನೆ ಮಠ ಬಿಟ್ಟು, ಒಂದೊಂದು ರೂಪಾಯಿ ಜೋಡಿಸಿಕೊಂಡು ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ದುಡಿಯುತ್ತಾ ಹೋರಾಡುತ್ತಿದ್ದಾರೆ. ಈ ಹೋರಾಟ ಪೂರ್ತಿ ಅವರದ್ದು. ಈ ಹೋರಾಟದಲ್ಲಿ ನಾವು ನಿಮಿತ್ತ ಮಾತ್ರ.. ಇದು ಇಡೀ ರೈತರ ಹೋರಾಟ. ಅದರಲ್ಲಿ ನಾವು ಅಳಿಲು ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ನಾವು ಧನ್ಯರಾಗಿದ್ದೇವೆ. ಅವರ ಹೋರಾಟ ದೊಡ್ಡ ಭರವಸೆ ಮತ್ತು ಹೊಸ ಉತ್ಸಾಹವನ್ನು ತುಂಬಿದೆ” ಎಂದರು.

ದೆಹಲಿಯ ಹೋರಾಟಗಾರರಿಂದ ನಾವು ಕಲಿತಿರುವುದೇನೆಂದರೆ ಅವರಷ್ಟೇ ಗಟ್ಟಿ ಹೋರಾಟವನ್ನು ದಕ್ಷಿಣ ಭಾರತದಲ್ಲಿಯೂ ಕಟ್ಟಬೇಕಿದೆ. ವಿಸ್ತಾರವಾದ ಹೋರಾಟವನ್ನು ನಾವು ಕಟ್ಟೇ ಕಟ್ಟುತ್ತೇವೆ ಎಂಬ ವಿಶ್ವಾಸ ಬಂದಿದೆ. ಸಂಪೂರ್ಣವಾಗಿ ತನುಮನಧನದಿಂದ ಈ ಆಂದೋಲನದಲ್ಲಿ ತೊಡಗಿಸಿಕೊಳ್ಳುತ್ತೇವೆ. ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಪಂಚಾಯತ್ ನಡೆಯಲಿದ್ದು, 21 ಮತ್ತು 22 ರಂದು ಉತ್ತರ ಕರ್ನಾಟಕದಲ್ಲಿ ರೈತ ಹೋರಾಟ ನಡೆಯಲಿದೆ. ನೀವೆಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.

ಕೊಡಗಿನ ಯುವ ಹೋರಾಟಗಾರ ಗಿರೀಶ್ ಮಾತನಾಡಿ “ನಾವು ಟಿವಿ ಚಾನೆಲ್‌ಗಳಲ್ಲಿ ನೋಡಿದ ಹಾಗೆ ಅಲ್ಲಿನ ಪರಿಸ್ಥಿತಿ ಇಲ್ಲ. ಸರ್ಕಾರ ಅವರ ಮೇಲೆ ದೌರ್ಜನ್ಯವೆಸಗುತ್ತಿದೆ. ನೀರು, ವಿದ್ಯುತ್, ಇಂಟರ್ನೆಟ್‌ನಂತರ ಮೂಲಭೂತ ಸೌಲಭ್ಯಗಳನ್ನು ಕೊಡದೇ ಕಿರುಕುಳ ನೀಡುತ್ತಿದೆ. ಕೇವಲ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳಿಗೋಸ್ಕರ ರೈತರನ್ನು ಬಲಿಕೊಡಲಾಗುತ್ತದೆ ಎಂಬುದು ನನಗೆ ದೆಹಲಿಯಲ್ಲಿ ಗೊತ್ತಾಯಿತು.


ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...