Homeಮುಖಪುಟಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ...

ಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ ಮಾತುಗಳು

ಈಗಾಗಲೇ ರೈತರು ಗೆದ್ದಿದ್ದಾರೆ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆಗಾಗಿ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ವಾಪಸ್ಸಾದ ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರಿಗೆ ಇಂದು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.

ಆ ಸಂದರ್ಭದಲ್ಲಿ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜ್ ಮಾತನಾಡಿ “ರೈತ ಹೋರಾಟದಲ್ಲಿ ನಾವು ಕೇವಲ ಒಂದು ವಾರಗಳ ಕಾಲ ಮಾತ್ರ ಇದ್ದೆವು. ಅಂದರೆ ಆನೆಯ ದಂತದ ಒಂದು ಭಾಗವನ್ನು ಮಾತ್ರ ನಾವು ತಿಳಿಯಲು ಸಾಧ್ಯವಾಗಿದೆ. ಇತಿಹಾಸದಲ್ಲಿ ಸ್ವಾತಂತ್ರ್ಯ ಹೋರಾಟದ ನಂತರ ನಡೆಯುತ್ತಿರುವ ದಿಟ್ಟ ಹೋರಾಟ ಇದಾಗಿದೆ. ರೈತರು ಗೆಲ್ಲದೇ ಅಲ್ಲಿಂದ ಕದಲುವುದಿಲ್ಲ ಎಂದು ನಿರ್ಧರಿಸಿದ್ದಾರೆ” ಎಂದರು.

ಕೇಂದ್ರ ಸರ್ಕಾರ ಇಡೀ ದೇಶದ ಮೇಲೆ ಯುದ್ಧ ಸಾರಿದೆ. ದೆಹಲಿಯ ಗಡಿಗಳಲ್ಲಿ ಸೈನಿಕ ಪಡೆಗಳನ್ನು ನಿಯೋಜಿಸಿ ನಿಜಕ್ಕೂ ಯುದ್ಧಭೂಮಿ ರೀತಿ ಮಾರ್ಪಡಿಸಿದೆ. ಆದರೆ ರೈತರು ಮಾತ್ರ ಶಾಂತಿಯುತವಾಗಿ ತಮ್ಮ ವಿರೋಧ ದಾಖಲಿಸುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ರೈತ ಮಹಾಪಂಚಾಯತ್ ನಡೆಸಿ ಇಡೀ ದೇಶಕ್ಕೆ ಹೋರಾಟದ ಕಿಡಿ ಹಬ್ಬಿಸುತ್ತಿದೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗಬಹುದಾದ ಸಮಾನತೆಯ ಸಾಗರದ ಹೋರಾಟ ಇದಾಗಿದ್ದು, ನೀವು ತೀರ್ಥಯಾತ್ರೆ ರೀತಿ ದಯವಿಟ್ಟು ನೀವೆಲ್ಲರೂ ಒಮ್ಮೆ ಹೋಗಿ ದೆಹಲಿಯ ಗಡಿಗಳಿಗೆ ಭೇಟಿ ಕೊಡಿ ಎಂದು ಮನವಿ ಮಾಡಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸರೋವರ್ ಬೆಂಕಿಕೆರೆ ಮಾತನಾಡಿ “ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಆರ್ಥಿಕ ಕುಸಿತ, ನಿರುದ್ಯೋಗದಂತಹ ಕರಾಳ ಸ್ಥಿತಿಯಲ್ಲಿದ್ದ ಭಾರತಕ್ಕೆ ಈ ರೈತ ಹೋರಾಟ ಸ್ಪಷ್ಟ ದಿಕ್ಕು ತೋರಿದೆ. ಭಾರತ ಎಂದರೆ ಏನು ಎಂಬುದನ್ನು ಈ ರೈತ ಹೋರಾಟ ಕಲಿಸುತ್ತಿದೆ. ಜಾತಿಯಂತಹ ರೋಗಗ್ರಸ್ಥದಿಂದ ಭಾರತ ಇಂದು ದೆಹಲಿಯ ಗಡಿಗಳಲ್ಲಿ ಮೇಲ್ಜಾತಿ, ಕೆಳಜಾತಿಯೆಂಬ ಜಾತಿ ತಾರತಮ್ಯವಿಲ್ಲದೆ, ಧರ್ಮ ಬೇಧಭಾವವಿಲ್ಲದೆ ಎಲ್ಲರೂ ಒಟ್ಟಿಗೆ ಊಟ ಮಾಡುತ್ತಾ ಹೋರಾಡುತ್ತಿದ್ದಾರೆ” ಎಂದರು.

ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ದೆಹಲಿಯಲ್ಲಿ ನಡೆಯುತ್ತಿದೆ. ಇದು ರೈತರ ಹೋರಾಟವಾಗಿ ಮಾತ್ರ ಉಳಿದಿಲ್ಲ, ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬರ ಹೋರಾಟವಾಗಿ ಮಾರ್ಪಟ್ಟಿದೆ. ನಾವು ಅಲ್ಲಿ ಅತ್ಯದ್ಭುತವಾದ ಮಾನವ ಪ್ರೀತಿಯನ್ನು ಕಲಿತು ಬಂದಿದ್ದೇವೆ. ರೈತರು ವಿನಯ, ದೃಢನಿರ್ಧಾರ ಮತ್ತು ಗಟ್ಟಿತನದಿಂದ ಹೋರಾಡುತ್ತಿದ್ದಾರೆ. ಈ ಹೋರಾಟದಲ್ಲಿ ಈಗಾಗಲೇ ರೈತರು ಗೆದ್ದಿದ್ದಾರೆ. ಇದರಲ್ಲಿ ಅನುಮಾನವೇ ಇಲ್ಲ. ಸರ್ಕಾರ ತನ್ನ ಪ್ರತಿಷ್ಟೆಗೆ ಹೆದರಿ ಅದನ್ನು ಒಪ್ಪಿಕೊಳ್ಳುತ್ತಿಲ್ಲ ಅಷ್ಟೇ. ಆದರೆ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಒಪ್ಪಿಕೊಳ್ಳುವ ಸಮಯ ಬರಲಿದೆ ಎಂದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಮ್ಮ ದೇಶದ ಮುಂದಿನ ಪೀಳಿಗೆಗೋಸ್ಕರ, ಮುಂದಿನ ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಮನೆ ಮಠ ಬಿಟ್ಟು, ಒಂದೊಂದು ರೂಪಾಯಿ ಜೋಡಿಸಿಕೊಂಡು ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ದುಡಿಯುತ್ತಾ ಹೋರಾಡುತ್ತಿದ್ದಾರೆ. ಈ ಹೋರಾಟ ಪೂರ್ತಿ ಅವರದ್ದು. ಈ ಹೋರಾಟದಲ್ಲಿ ನಾವು ನಿಮಿತ್ತ ಮಾತ್ರ.. ಇದು ಇಡೀ ರೈತರ ಹೋರಾಟ. ಅದರಲ್ಲಿ ನಾವು ಅಳಿಲು ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ನಾವು ಧನ್ಯರಾಗಿದ್ದೇವೆ. ಅವರ ಹೋರಾಟ ದೊಡ್ಡ ಭರವಸೆ ಮತ್ತು ಹೊಸ ಉತ್ಸಾಹವನ್ನು ತುಂಬಿದೆ” ಎಂದರು.

ದೆಹಲಿಯ ಹೋರಾಟಗಾರರಿಂದ ನಾವು ಕಲಿತಿರುವುದೇನೆಂದರೆ ಅವರಷ್ಟೇ ಗಟ್ಟಿ ಹೋರಾಟವನ್ನು ದಕ್ಷಿಣ ಭಾರತದಲ್ಲಿಯೂ ಕಟ್ಟಬೇಕಿದೆ. ವಿಸ್ತಾರವಾದ ಹೋರಾಟವನ್ನು ನಾವು ಕಟ್ಟೇ ಕಟ್ಟುತ್ತೇವೆ ಎಂಬ ವಿಶ್ವಾಸ ಬಂದಿದೆ. ಸಂಪೂರ್ಣವಾಗಿ ತನುಮನಧನದಿಂದ ಈ ಆಂದೋಲನದಲ್ಲಿ ತೊಡಗಿಸಿಕೊಳ್ಳುತ್ತೇವೆ. ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ರೈತ ಪಂಚಾಯತ್ ನಡೆಯಲಿದ್ದು, 21 ಮತ್ತು 22 ರಂದು ಉತ್ತರ ಕರ್ನಾಟಕದಲ್ಲಿ ರೈತ ಹೋರಾಟ ನಡೆಯಲಿದೆ. ನೀವೆಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.

ಕೊಡಗಿನ ಯುವ ಹೋರಾಟಗಾರ ಗಿರೀಶ್ ಮಾತನಾಡಿ “ನಾವು ಟಿವಿ ಚಾನೆಲ್‌ಗಳಲ್ಲಿ ನೋಡಿದ ಹಾಗೆ ಅಲ್ಲಿನ ಪರಿಸ್ಥಿತಿ ಇಲ್ಲ. ಸರ್ಕಾರ ಅವರ ಮೇಲೆ ದೌರ್ಜನ್ಯವೆಸಗುತ್ತಿದೆ. ನೀರು, ವಿದ್ಯುತ್, ಇಂಟರ್ನೆಟ್‌ನಂತರ ಮೂಲಭೂತ ಸೌಲಭ್ಯಗಳನ್ನು ಕೊಡದೇ ಕಿರುಕುಳ ನೀಡುತ್ತಿದೆ. ಕೇವಲ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳಿಗೋಸ್ಕರ ರೈತರನ್ನು ಬಲಿಕೊಡಲಾಗುತ್ತದೆ ಎಂಬುದು ನನಗೆ ದೆಹಲಿಯಲ್ಲಿ ಗೊತ್ತಾಯಿತು.


ಇದನ್ನೂ ಓದಿ: ರೈತರನ್ನು ಸುತ್ತುವರಿಯಲು ನೋಡಿದರು, ಈಗ ರೈತರೇ ಸರ್ಕಾರವನ್ನು ಸುತ್ತುವರೆದಿದ್ದಾರೆ: ಡಾ. ಅಮಿತ್ ಬಾಧುರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...