Homeಮುಖಪುಟರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.31ರಂದು ನಡೆಸಲು ಉದ್ದೇಶಿಸಿರುವ ರೈತರ ಮಹಾಪಂಚಾಯತ್‍ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡುತ್ತಿಲ್ಲ- ಚುಕ್ಕಿ ನಂಜುಂಡಸ್ವಾಮಿ

- Advertisement -
- Advertisement -

“ಈಗ ನಡೆಯುತ್ತಿರುವ ರೈತ ಹೋರಾಟ ಸರ್ಕಾರದ ವಿರುದ್ಧವೋ ಅಥವಾ ಕಾಂಗ್ರೆಸ್‌ನ ಪರವೋ ಅಲ್ಲ. ಇದು ರೈತ ಕುಲದ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶಕ್ಕಾಗಿ ನಡೆಯುತ್ತಿರುವ ಹೋರಾಟ” ಎಂದು ರಾಜ್ಯದ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಬೆಳಗಾವಿಯಲ್ಲಿ ಹೇಳಿದ್ದಾರೆ.

ಇಂದು (ಮಾ.13) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.31ರಂದು ನಡೆಸಲು ಉದ್ದೇಶಿಸಿರುವ ರೈತರ ಮಹಾಪಂಚಾಯತ್‍ಗೆ ಜಿಲ್ಲಾಡಳಿತ ಅನುಮತಿ ನೀಡುತ್ತಿಲ್ಲ. ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಯಾವುದೇ ಮೈದಾನವನ್ನೂ ನೀಡುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

“ಶಿವಮೊಗ್ಗದಲ್ಲಿ ಮಾ.20ರಂದು ಹಾಗೂ ಹಾವೇರಿಯಲ್ಲಿ ಮಾ.21ರಂದು ಮಹಾಪಂಚಾಯತ್ ಹಮ್ಮಿಕೊಂಡಿದ್ದು, ಅಲ್ಲಿ ಮೈದಾನಗಳು ದೊರೆತಿವೆ. ಆದರೆ, ಬೆಳಗಾವಿಯಲ್ಲಿ ಮುಂಬರುವ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರವು ಅಧಿಕಾರಿಗಳ ಮೇಲೆ ಒತ್ತಡ ತಂದು ಮೈದಾನ ಸಿಗದಂತೆ ಮಾಡಿದೆ” ಎಂದು ಆರೋಪಿಸಿದರು.

ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತದ ಅಸಹಕಾರದ ನಡುವೆಯೂ ನಾವು ಚಳವಳಿ ನಡೆಸಿಯೇ ತೀರುತ್ತೇವೆ ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ: ನೀವು ಬದುಕುಳಿಯಲು ಹೆಣಗುತ್ತಿರುವಾಗ ಅದಾನಿ 12 ಲಕ್ಷ ಕೋಟಿ ಗಳಿಸಿದ್ದು ಹೇಗೆ? – ರಾಹುಲ್ ಗಾಂಧಿ ಪ್ರಶ್ನೆ

“ಕೇಂದ್ರದ ರೈತ ವಿರೋಧಿ ಧೋರಣೆಯನ್ನು ಜನರ ಮುಂದೆ ತೆರೆದಿಡಬೇಕಾಗಿದೆ. ಹೀಗಾಗಿ, ರಾಣಿ ಚನ್ನಮ್ಮ ವೃತ್ತದಲ್ಲೇ ವಿಭಾಗ ಮಟ್ಟದ ಮಹಾಪಂಚಾಯತ್ ನಡೆಸುವುದು ಅನಿವಾರ್ಯವಾಗಿದೆ. ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಮುಖ್ಯವಾಗಿ ಭಾರತೀಯ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್, ಡಾ.ದರ್ಶನ್ ಪಾಲ್ಗೊಳ್ಳಲಿದ್ದು, ರೈತ ಮುಖಂಡ ಯೋಗೇಂದ್ರ ಯಾದವ್‍ಗೆ ಆಹ್ವಾನ ನೀಡಿದ್ದೇವೆ” ಎಂದು ಮಾಹಿತಿ ನೀಡಿದರು.

ಇದು ಕೇವಲ ರೈತ ಸಂಘದ ಹೋರಾಟವಲ್ಲ. ಇಡೀ ಸಮಾಜದ ಚಳವಳಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಎಲ್ಲರಿಗೂ ತೊಂದರೆಯಾಗಿಲ್ಲವೇ ಎಂದು ಪ್ರಶ್ನಿಸಿ ಅವರು, ಉತ್ತರ ಭಾರತದಲ್ಲಿ ರೈತರು ನಡೆಸುತ್ತಿರುವ ಚಳವಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನರಿಗೆ ಗೊತ್ತಾಗಿದೆ. ಕೊರೆಯುವ ಚಳಿಯಲ್ಲೂ ದೆಹಲಿಯ ಗಡಿಗಳಲ್ಲಿ ಅವರು ಚಳವಳಿ ಮಾಡುತ್ತಿದ್ದಾರೆ. 230 ಮಂದಿ ಅಲ್ಲಿನ ವಾತಾವರಣ ತಾಳಲಾರದೆ ಪ್ರಾಣ ತ್ಯಾಗ ಮಾಡಿದ್ದಾರೆ. ಬೇರೆ ಬೇರೆ ಸ್ವರೂಪದಲ್ಲಿ ಹೋರಾಟ ಮುಂದುವರಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಉತ್ತರ ಕರ್ನಾಟಕದ ಗೌರವ ಅಧ್ಯಕ್ಷ ಶಶಿಕಾಂತ ಪಡಿಸಲಗಿ ಮಾತನಾಡಿ, “ಬೆಳಗಾವಿ ಜಿಲ್ಲಾಡಳಿತ ಯಾವುದೇ ಸ್ಥಳ ನೀಡುತ್ತಿಲ್ಲ. ಚನ್ನಮ್ಮ ವೃತ್ತದಲ್ಲೂ ಅವಕಾಶ ಕೊಡದಿದ್ದರೆ ಜೈಲ್ ಭರೋ ಚಳವಳಿ ಆಗಬಹುದು. ರೈತ ಸಂಘದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ” ಎಂದರು.

ಸಮನ್ವಯ ಸಮಿತಿ ಸದಸ್ಯ ಶಿವರಾಯಪ್ಪ ಜೋಗಿನ, ಮುಖಂಡರಾದ ಸಿದಗೌಡ ಮೋದಗಿ, ಮಂಜು ಕಿರಣ್, ಚೂನಪ್ಪ ಪೂಜಾರಿ, ಜಯಶ್ರೀ ಗುರನ್ನವರ, ಶಿವಪ್ಪ ಪಾಲ್ಗೊಂಡಿದ್ದರು.


ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...