Homeಮುಖಪುಟರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.31ರಂದು ನಡೆಸಲು ಉದ್ದೇಶಿಸಿರುವ ರೈತರ ಮಹಾಪಂಚಾಯತ್‍ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡುತ್ತಿಲ್ಲ- ಚುಕ್ಕಿ ನಂಜುಂಡಸ್ವಾಮಿ

- Advertisement -
- Advertisement -

“ಈಗ ನಡೆಯುತ್ತಿರುವ ರೈತ ಹೋರಾಟ ಸರ್ಕಾರದ ವಿರುದ್ಧವೋ ಅಥವಾ ಕಾಂಗ್ರೆಸ್‌ನ ಪರವೋ ಅಲ್ಲ. ಇದು ರೈತ ಕುಲದ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶಕ್ಕಾಗಿ ನಡೆಯುತ್ತಿರುವ ಹೋರಾಟ” ಎಂದು ರಾಜ್ಯದ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಬೆಳಗಾವಿಯಲ್ಲಿ ಹೇಳಿದ್ದಾರೆ.

ಇಂದು (ಮಾ.13) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.31ರಂದು ನಡೆಸಲು ಉದ್ದೇಶಿಸಿರುವ ರೈತರ ಮಹಾಪಂಚಾಯತ್‍ಗೆ ಜಿಲ್ಲಾಡಳಿತ ಅನುಮತಿ ನೀಡುತ್ತಿಲ್ಲ. ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಯಾವುದೇ ಮೈದಾನವನ್ನೂ ನೀಡುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

“ಶಿವಮೊಗ್ಗದಲ್ಲಿ ಮಾ.20ರಂದು ಹಾಗೂ ಹಾವೇರಿಯಲ್ಲಿ ಮಾ.21ರಂದು ಮಹಾಪಂಚಾಯತ್ ಹಮ್ಮಿಕೊಂಡಿದ್ದು, ಅಲ್ಲಿ ಮೈದಾನಗಳು ದೊರೆತಿವೆ. ಆದರೆ, ಬೆಳಗಾವಿಯಲ್ಲಿ ಮುಂಬರುವ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರವು ಅಧಿಕಾರಿಗಳ ಮೇಲೆ ಒತ್ತಡ ತಂದು ಮೈದಾನ ಸಿಗದಂತೆ ಮಾಡಿದೆ” ಎಂದು ಆರೋಪಿಸಿದರು.

ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತದ ಅಸಹಕಾರದ ನಡುವೆಯೂ ನಾವು ಚಳವಳಿ ನಡೆಸಿಯೇ ತೀರುತ್ತೇವೆ ಎಂದು ಪುನರುಚ್ಚರಿಸಿದರು.

ಇದನ್ನೂ ಓದಿ: ನೀವು ಬದುಕುಳಿಯಲು ಹೆಣಗುತ್ತಿರುವಾಗ ಅದಾನಿ 12 ಲಕ್ಷ ಕೋಟಿ ಗಳಿಸಿದ್ದು ಹೇಗೆ? – ರಾಹುಲ್ ಗಾಂಧಿ ಪ್ರಶ್ನೆ

“ಕೇಂದ್ರದ ರೈತ ವಿರೋಧಿ ಧೋರಣೆಯನ್ನು ಜನರ ಮುಂದೆ ತೆರೆದಿಡಬೇಕಾಗಿದೆ. ಹೀಗಾಗಿ, ರಾಣಿ ಚನ್ನಮ್ಮ ವೃತ್ತದಲ್ಲೇ ವಿಭಾಗ ಮಟ್ಟದ ಮಹಾಪಂಚಾಯತ್ ನಡೆಸುವುದು ಅನಿವಾರ್ಯವಾಗಿದೆ. ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಮುಖ್ಯವಾಗಿ ಭಾರತೀಯ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್, ಡಾ.ದರ್ಶನ್ ಪಾಲ್ಗೊಳ್ಳಲಿದ್ದು, ರೈತ ಮುಖಂಡ ಯೋಗೇಂದ್ರ ಯಾದವ್‍ಗೆ ಆಹ್ವಾನ ನೀಡಿದ್ದೇವೆ” ಎಂದು ಮಾಹಿತಿ ನೀಡಿದರು.

ಇದು ಕೇವಲ ರೈತ ಸಂಘದ ಹೋರಾಟವಲ್ಲ. ಇಡೀ ಸಮಾಜದ ಚಳವಳಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಎಲ್ಲರಿಗೂ ತೊಂದರೆಯಾಗಿಲ್ಲವೇ ಎಂದು ಪ್ರಶ್ನಿಸಿ ಅವರು, ಉತ್ತರ ಭಾರತದಲ್ಲಿ ರೈತರು ನಡೆಸುತ್ತಿರುವ ಚಳವಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನರಿಗೆ ಗೊತ್ತಾಗಿದೆ. ಕೊರೆಯುವ ಚಳಿಯಲ್ಲೂ ದೆಹಲಿಯ ಗಡಿಗಳಲ್ಲಿ ಅವರು ಚಳವಳಿ ಮಾಡುತ್ತಿದ್ದಾರೆ. 230 ಮಂದಿ ಅಲ್ಲಿನ ವಾತಾವರಣ ತಾಳಲಾರದೆ ಪ್ರಾಣ ತ್ಯಾಗ ಮಾಡಿದ್ದಾರೆ. ಬೇರೆ ಬೇರೆ ಸ್ವರೂಪದಲ್ಲಿ ಹೋರಾಟ ಮುಂದುವರಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಉತ್ತರ ಕರ್ನಾಟಕದ ಗೌರವ ಅಧ್ಯಕ್ಷ ಶಶಿಕಾಂತ ಪಡಿಸಲಗಿ ಮಾತನಾಡಿ, “ಬೆಳಗಾವಿ ಜಿಲ್ಲಾಡಳಿತ ಯಾವುದೇ ಸ್ಥಳ ನೀಡುತ್ತಿಲ್ಲ. ಚನ್ನಮ್ಮ ವೃತ್ತದಲ್ಲೂ ಅವಕಾಶ ಕೊಡದಿದ್ದರೆ ಜೈಲ್ ಭರೋ ಚಳವಳಿ ಆಗಬಹುದು. ರೈತ ಸಂಘದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ” ಎಂದರು.

ಸಮನ್ವಯ ಸಮಿತಿ ಸದಸ್ಯ ಶಿವರಾಯಪ್ಪ ಜೋಗಿನ, ಮುಖಂಡರಾದ ಸಿದಗೌಡ ಮೋದಗಿ, ಮಂಜು ಕಿರಣ್, ಚೂನಪ್ಪ ಪೂಜಾರಿ, ಜಯಶ್ರೀ ಗುರನ್ನವರ, ಶಿವಪ್ಪ ಪಾಲ್ಗೊಂಡಿದ್ದರು.


ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...