Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...