Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...