Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...