Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...