Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...