Homeಮುಖಪುಟಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ. 

- Advertisement -
- Advertisement -

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಪ್ರಸ್ತಾಪಿತ ವಿದ್ಯುತ್ ತಿದ್ದುಪಡಿ ಕಾಯ್ದೆ ಜಾರಿಗೊಳಿಸಬಾರದು ಮತ್ತು ಕನಿಷ್ಟ ಬೆಂಬಲ ಬೆಲೆ ಖಾತ್ರಿಗಾಗಿ ಕಾಯ್ದೆ ತರಬೇಕೆಂದು (3+1+1) ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ, ಕೊರೆಯುವ ಚಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಭರ್ತಿ ಒಂದು ತಿಂಗಳು ತುಂಬಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮನಸ್ಸು ಮಾತ್ರ ಕರಗಿಲ್ಲ. ಬದಲಿಗೆ ಪದೇ ಪದೇ ರೈತರನ್ನು ಪ್ರತಿಪಕ್ಷಗಳು ಸುಳ್ಳು ಹೇಳಿ ದಿಕ್ಕುತಪ್ಪಿಸುತ್ತಿವೆ ಎನ್ನುತ್ತ ರೈತರು ಸ್ವಂತ ಆಲೋಚನೆಯಿಲ್ಲದವರು ಎಂಬಂತೆ ಚಿತ್ರಿಸುವ ಮೂಲಕ ಮೋದಿ ಅವಮಾನ ಎಸಗುತ್ತಲೇ ಇದ್ದಾರೆ.

ಇಂದು ಬೆಳಿಗ್ಗೆಯೇ ನೂರಾರು ಮಹಿಳೆಯರು ಮತ್ತು ಪುರುಷರು ಎಂದಿನಂತೆ ರೈತ ಆಂದೋಲನ ಆರಂಭಿಸಿದ್ದಾರೆ. ಟಿಕ್ರಿ ಗಡಿಯಲ್ಲಿ ಧರಣಿ ಕುಳಿತ ಮಹಿಳೆಯರು ‘We Are Not Mislead’ ಎಂಬ ಪ್ಲಕಾರ್ಡು ಹಿಡಿದಿದ್ದಾರೆ. ‘ನಾವು ದೆಹಲಿಗೆ ಬಂದು ಒಂದು ತಿಂಗಳಾಯಿತು. ಸರ್ಕಾರ ಈ ಕಾನೂನುಗಳನ್ನು ವಾಪಸ್ ಪಡೆಯಬೇಕು. ಇದು ಬೇಗ ಸಂಭವಿಸಿದ್ದಲ್ಲಿ ಆಗ ನಾವು ನಮ್ಮ ಊರುಗಳಿಗೆ ಹಿಂದಿರುಗಬಹುದು’ ಎನ್ನುವ ಈ ಮಹಿಳೆಯರ ಕೂಗು ಮೋದಿಯವರಿಗೆ ಕೇಳಿಸತ್ತದೆಯೇ? ಕೇಳಿದರೂ ಅವರು ಸ್ಪಂದಿಸುತ್ತಾರೆಯೇ?

ನಿನ್ನೆ ಆರು ರಾಜ್ಯಗಳ ರೈತರೊಂದಿಗೆ ಮಾತನಾಡಿದ್ದೇನೆ ಮತ್ತು ರೈತರಿಗಾಗಿ 18,000 ಕೋಟಿ ರೂಗಳ ಪ್ಯಾಕೇಜ್ ನೀಡಿದ್ದೇನೆ ಎಂದು ಮೋದಿ ಹೇಳಿಕೊಂಡಿದ್ದಾರೆ. ಆದರೆ ಅಲ್ಲಿಯೂ ಸಹ ಮೋದಿ ‘ರೈತರು ಸಂಕಷ್ಟದಲ್ಲಿದ್ದಾರೆ ಎಂದು ಪ್ರತಿಪಕ್ಷಗಳು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿವೆ. ದೇಶಾದ್ಯಂತ ರೈತರು ನಮ್ಮ ಕೃಷಿ ಕಾಯ್ದೆಗಳನ್ನು ಸ್ವಾಗತಿಸಿದ್ದಾರೆ. ಆದರ ಪ್ರತಿಪಕ್ಷಗಳು ಮಾತ್ರ ರೈತರ ಹೆಗಲಮೇಲೆ ಬಂದೂಕಿಟ್ಟು ಸರ್ಕಾರಕ್ಕೆ ಗುಂಡು ಹೊಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಎಪಿಎಂಸಿ ಮಂಡಿಗಳು ಮತ್ತು ಎಂಎಸ್‌ಪಿ ಉಳಿಯುತ್ತದೆ ಎಂದು ನಾನು ಭರವಸೆ ನೀಡುತ್ತೇನೆ. ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ವಿರೋಧಿಸುವವರ ಜೊತೆಯೂ ನಾನು ಮಾತನಾಡಲು ಸಿದ್ದನಿದ್ದೇನೆ. ಆದರೆ ರೈತರು ದಾರಿತಪ್ಪಬಾರದು ಎಂದು ಮೋದಿ ಘೋಷಿಸಿದ್ದಾರೆ. ಇದು ಹೋರಾಟನಿರತ ರೈತರಿಗೆ ಸಾಕಷ್ಟು ಸಿಟ್ಟು ತರಿಸಿದೆ. ಒಂದು ಕಡೆ ಮೋದಿಯವರು ಮಾತನಾಡುತ್ತೇನೆ ಎನ್ನುತ್ತಲೇ ಇನ್ನೊಂದು ಕಡೆ ಹೋರಾಟನಿರತ ರೈತರನ್ನು ಅವಮಾನಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ.

ಅಲ್ಲದೇ ಬಿಜೆಪಿಯು ಹಲವು ರಾಜ್ಯಗಳಿಂದ ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ದೆಹಲಿಗೆ ರ್ಯಾಲಿ ಬರುವಂತೆ ಕರೆ ನೀಡಿದೆ. ಉತ್ತರ ಪ್ರದೇಶ ಮತ್ತು ಗುಜರಾತ್‌ನಿಂದ ಹಲವು ರೈತ ಸಂಘಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮೆರವಣಿಗೆ ಹೊರಟಿವೆ. ನಿನ್ನೆ ಮೋದಿಯವರು 9 ಕೋಟಿ ರೈತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವುದರಿಂದ ದೆಹಲಿಯ ಹೋರಾಟನಿರತ ರೈತರು ರೊಚ್ಚಿಗೆದ್ದಿದ್ದಾರೆ. ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಸಭೆ ಸೇರಲಿರುವ ರೈತ ಮುಖಂಡರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಬಾರದೆಂದು ತೀರ್ಮಾನಿಸಲಿವೆ ಎನ್ನಲಾಗಿದೆ. ಇದುವರೆಗೂ ರೈತ ಹೋರಾಟ ಆರಂಭವಾದಾಗಿನಿಂದ 5 ಬಾರಿ ಮಾತುಕತೆ ನಡೆದಿದ್ದು ಅವೆಲ್ಲವೂ ವಿಫಲವಾಗಿವೆ.

ದೆಹಲಿಯ ರೈತರು ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಈಗಾಗಲೇ ಪಂಜಾಬ್‌ನಲ್ಲಿ ಜಿಯೋ ಟವರ್‌ಗಳಿಗೆ ವಿದ್ಯುತ್ ಸರಬರಾಜು ತಡೆಹಿಡಿಯುವಲ್ಲಿ ರೈತರು ಸಫಲರಾಗಿದ್ದಾರೆ. ಹರಿಯಾಣದಲ್ಲಿ ಹೋಟೆಲ್‌ನಲ್ಲಿ ಬಿಜೆಪಿ ಮುಖಂಡನ ಮೇಲೆ ಮುತ್ತಿಗೆ ಹಾಕಿದ್ದರಿಂದ ಆತ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಇನ್ನು ಮುಖ್ಯ ರಸ್ತೆಯ ಟೋಲ್‌ಗೇಟ್‌ಗಳನ್ನು ವಶಕ್ಕೆ ಪಡೆದು ಟೋಲ್ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗೆ ಹಂತ ಹಂತವನ್ನು ಹೋರಾಟವನ್ನು ಜಾರಿಯಲ್ಲಿಡಲು ರೈತರು ಬಯಸಿದ್ದಾರೆ. ನಾಳೆ ಮೋದಿಯವರು ಮನ್‌ ಕಿ ಬಾತ್ ಮುಗಿಯುವವರೆಗೂ ತಟ್ಟೆ ಬಾರಿಸಲು ರೈತರು ಕರೆ ನೀಡಿದ್ದಾರೆ.

ಇದೊಂದು ಐತಿಹಾಸಿಕ ರೈತ ಹೋರಾಟವಾಗಿದೆ. 2020ರ ಆರಂಭದಲ್ಲಿಯೂ ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟಗಳು ಮುಗಿಲು ಮುಟ್ಟಿದ್ದವು. ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುವ ಜೊತೆಗೆ ದೆಹಲಿಯ ಶಾಹೀನ್‌ಬಾಗ್‌ನಲ್ಲಿ 100ಕ್ಕೂ ಹೆಚ್ಚು ದಿನ ಪ್ರತಿಭಟನೆ ದಾಖಲಾಗಿ ವಿಶ್ವದ ಗಮನ ಸೆಳೆದಿತ್ತು. ಆದರೆ ಆ ನಂತರ ಆವರಿಸಿದ ಕೊರೊನಾ ಸಾಂಕ್ರಾಮಿಕವು ಹೋರಾಟಗಳಿಗೆ ಬ್ರೇಕ್ ಹಾಕಿತ್ತು. ಆದರೆ ಮೋದಿ ಸರ್ಕಾರ ಈ ದುರಂತ ಸಂದರ್ಭದಲ್ಲಿಯೇ ಈ ರೀತಿಯ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಈಗ ವರ್ಷದ ಕೊನೆಯಲ್ಲಿಯೂ ಸಹ ಮತ್ತೆ ರೈತರು ಬೀದಿಗೆ ಬಂದು ದೊಡ್ಡ ಮಟ್ಟದಲ್ಲಿ ಹೋರಾಡುತ್ತಿದ್ದಾರೆ. ಸುಪ್ರೀಂ ಮೂಲಕ ಅದನ್ನು ದಮನ ಮಾಡಲು ಮೋದಿ ಸರ್ಕಾರ ಮುಂದಾದರೂ ಅದು ಸಾಧ್ಯವಾಗಿಲ್ಲ. ಈಗ ರೂಪಾಂತರ ಕೊರೊನಾ ವೈರಸ್ ನೆಪ ಹೇಳಿ ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾಗುತ್ತಿದೆ. ಆದರೆ ದಿಟ್ಟ ರೈತರು ಅದಕ್ಕೆ ಅವಕಾಶ ಕೊಡದೇ ಶಾಂತಿಯುತ ಹೋರಾಟ ಮುಂದುವರೆಸಿದ್ದಾರೆ.


ಇದನ್ನೂ ಓದಿ; ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...