Homeಮುಖಪುಟಪೆಗಾಸಸ್‌ ಹಗರಣ - ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

ಪೆಗಾಸಸ್‌ ಹಗರಣ – ಸುಪ್ರೀಂನಲ್ಲಿ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದ ಒಕ್ಕೂಟ ಸರ್ಕಾರ!

- Advertisement -
- Advertisement -

ಪೆಗಾಸಸ್ ಗೂಢಚಾರ ಹಗರಣದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರಿಂಕೊರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸೋಮವಾರ ಹೇಳಿದೆ. ಈ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಎಂದು ಸುಪ್ರೀಂಕೋರ್ಟ್‌ಗೆ ಒಕ್ಕೂಟ ಸರ್ಕಾರ ಹೇಳಿದ್ದು, ಅದಕ್ಕಾಗಿಯೇ ಡೊಮೇನ್ ತಜ್ಞರ ಸಮಿತಿಯನ್ನು ರಚಿಸುವುದಾಗಿ ಅದು ತಿಳಿಸಿದೆ.

ಸುಪ್ರೀಂಕೋರ್ಟ್‌ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು, ಜೊತೆಗೆ ಒಕ್ಕೂಟ ಸರ್ಕಾರ ಕೂಡಾ ಈ ಬಗ್ಗೆ ಎರಡು ಬಾರಿ ಸಮಯ ತೆಗೆದುಕೊಂಡಿತ್ತು. “ಡೊಮೇನ್ ತಜ್ಞರ ಸಮಿತಿಯ ವರದಿಯು ಸುಪ್ರೀಂಕೋರ್ಟ್‌ಗೆ ಲಭ್ಯವಾಗುತ್ತದೆ” ಎಂದು ಒಕ್ಕೂಟ ಸರ್ಕಾರವನ್ನು ಪ್ರತಿನಿಧಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಆದರೆ ಇದಕ್ಕೆ ಕೋಪಗೊಂಡ ಸುಪ್ರೀಂಕೋರ್ಟ್‌, ‘ರಾಷ್ಟ್ರೀಯ ಭದ್ರತೆ’ ಕುರಿತ ವಿಷಯನ್ನು ನಾವು ಅರ್ಥಮಾಡಿಕೊಂಡಿದ್ದು, ಆದರೆ ಸರ್ಕಾರದೊಂದಿಗೆ ವ್ಯಕ್ತಿಗಳ ಫೋನ್ ಹ್ಯಾಕಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಲು ಮಾತ್ರ ಕೇಳಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಪೆಗಾಸಸ್ ಬಗ್ಗೆ ಮಾಧ್ಯಮ ವರದಿ ನಿಜವಾಗಿದ್ದರೆ ‘ಹಗರಣ ನಿಜಕ್ಕೂ ಗಂಭೀರ’: ಸುಪ್ರೀಂಕೋರ್ಟ್‌

“ಕಳೆದ ಬಾರಿಯೂ ರಾಷ್ಟ್ರೀಯ ಭದ್ರತೆ ಕುರಿತು ಹೇಳಲಾಯಿತು… ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ವೈಯಕ್ತಿಕ ಫೋನ್‌ಗಳನ್ನು ಹ್ಯಾಕ್ ಮಾಡಲಾಗಿದೆಯೆ ಎಂದು ನಾವು ನಿಮ್ಮನ್ನು ಕೇಳಿದ್ದೇವೆ … ಹಾಗಾಗಿ ಅದು ಅಧಿಕೃತವಾಗಿದೆಯೇ ಎಂದು ನಿಮ್ಮ ಅಫಿಡವಿಟ್ ಸಲ್ಲಿಸಿ” ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ಕಳೆದ ತಿಂಗಳು ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ಒಕ್ಕೂಟ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಜೊತೆಗೆ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೆ ವಿಷಯವನ್ನು ಬಹಿರಂಗಪಡಿಸಬೇಕು ಎಂದು ಕೋರ್ಟ್‌ ಬಯಸುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿತು.

“ನಾವು ಹ್ಯಾಕ್ ಆಗಿರುವ ವ್ಯಕ್ತಿಗಳ ಫೋನ್‌ಗಳ ಸಮಸ್ಯೆಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೇವೆ. ಖಾಸಗಿತನದ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಹೇಳುವ ವ್ಯಕ್ತಿಗಳೂ ಇದ್ದಾರೆ. ಈ ಬಗ್ಗೆ ಯಾವ ಏಜೆನ್ಸಿಗೆ ಅಧಿಕಾರವಿದೆ ಮತ್ತು ಅದಕ್ಕೆ ಅನುಮತಿ ಇದೆಯೋ ಇಲ್ಲವೋ … ಎಂದು ನಮಗೆ ತಿಳಿಯಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಅರ್ಜಿದಾರರಾಗಿರುವ ಪತ್ರಕರ್ತ ಎನ್ ರಾಮ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್‌, “ನಾವು ಪೆಗಾಸಸ್‌ ಅನ್ನು ಬಳಸಿದ್ದಾರೆಯೆ ಎಂದು ತಿಳಿಯಲು ಬಯಸುತ್ತೇವೆ… ರಾಷ್ಟ್ರೀಯ ಭದ್ರತೆಗೆ ಅಡ್ಡಿಪಡಿಸಲು ನಾವು ಬಯಸುವುದಿಲ್ಲ. ಇದು ವ್ಯಕ್ತಿಗಳ ಗೌಪ್ಯತೆಯ ಬಗ್ಗೆಗಿನ ವಿಷಯವಾಗಿದೆ. ಒಂದು ವೇಳೆ ಸಾಮಾನ್ಯ ನಾಗರೀಕರನ್ನು ಗುರಿಯಾಗಿಸಿ ಪೆಗಾಸಸ್‌ ಅನ್ನು ಬಳಸಿದರೆ ಅದು ತುಂಬಾ ಗಂಭೀರ ವಿಚಾರವಾಗಿದೆ” ಎಂದು ಹೇಳಿದ್ದಾರೆ.

ನ್ಯಾಯಾಲಯವು ಈ ವಿಷಯದ ಮೇಲೆ ಆದೇಶಗಳನ್ನು ಕಾಯ್ದಿರಿಸಿದ್ದು, ಎರಡು ಮೂರು ದಿನಗಳಲ್ಲಿ ಅವುಗಳನ್ನು ಘೋಷಿಸುವುದಾಗಿ ಹೇಳಿತು. ಸರ್ಕಾರವು ತನ್ನ ಮನಸ್ಸನ್ನು ಬದಲಾಯಿಸಿದರೆ ಅದಕ್ಕಿಂತ ಮೊದಲು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂಕೋರ್ಟ್‌ ಹೇಳಿದ್ದಾರೆ.

ಇಸ್ರೇಲಿ ಮೂಲದ ಪೆಗಾಸಸ್‌ ತಂ‌ತ್ರಾಂಶವನ್ನು ಬಳಸಿಕೊಂಡು, ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಸೇರಿದಂತೆ ಸುಮಾರು 300 ಭಾರತೀಯ ಮೇಲೆ ಗೂಢಚಾರ ಮಾಡಲಾಗಿದೆ ಎಂದು, ಸುದ್ದಿ ಸಂಸ್ಥೆ ದಿ ವೈರ್‌ ತನಿಖಾ ವರದಿ ಪ್ರಕಟ ಮಾಡಿತ್ತು. ದಿ ವೈರ್ ಇತರ ಅಂತಾರಾಷ್ಟ್ರೀಯ ಮಾಧ್ಯಮಗಳ ಜೊತೆ ಸೇರಿ ಈ ತನಿಖಾ ವರದಿಯನ್ನು ಮಾಡಿತ್ತು. ಈ ವರದಿ ಪ್ರಕಟವಾಗುತ್ತಿದ್ದಂತೆ ದೇಶದಾದ್ಯಂತ ಬಿಜೆಪಿ ಸರ್ಕಾರದ ವಿರುದ್ದ ಭಾರಿ ಆಕ್ರೋಶ, ಪ್ರತಿಭಟನೆಗಳು ದಾಖಲಾಗಿದ್ದವು.

ಇದನ್ನೂ ಓದಿ: ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

Karnataka Legislative Assembly | ಕರ್ನಾಟಕ ವಿಧಾನಸಭಾ ಅಧಿವೇಶನ | 10th Session | 13-09-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...