Homeಕರ್ನಾಟಕಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ...

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ ಸರ್ಕಾರದ ವಿರುದ್ದ ಎಸ್‌ಎಫ್‌ಐ ಆಕ್ರೋಶ

- Advertisement -
- Advertisement -

ರಾಜ್ಯದ ಪಠ್ಯ ಪುಸ್ತಕದಲ್ಲಿ ಸ್ವಾತಂತ್ಯ ಹೋರಾಟಗಾರ ಭಗತ್‌ ಸಿಂಗ್ ಪಾಠ ಸೇರಿ ಅನೇಕ ಪ್ರಗತಿಪರ ಚಿಂತನೆಯ ಪೂರಕ ಪಾಠಗಳನ್ನು ಕೈ ಬಿಟ್ಟು ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಹಾಗೂ ಶಿಕ್ಷಣದ ಕೇಸರೀಕರಣ ಖಂಡಿಸಿ ಎಸ್ಎಫ್ಐ ರಾಜ್ಯ ಸಮಿತಿ ಮಂಗಳವಾರ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಎದುರು ಪ್ರತಿಭಟನೆ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್. ವಿಶಾಲ್ ರವರ ಮೂಲಕ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣನ್, “ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು, ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೇವಾರ್‌ ಅವರ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಬಿಜೆಪಿ ವಸಾಹತುಶಾಹಿ ಬ್ರಿಟಿಷರ ಜೊತೆಗೆ ರಾಜಿಯಾದ ಸಾವರ್ಕರ್ ಸಂತತಿ ಆದ್ದರಿಂದಲೇ ಅಪ್ಪಟ ದೇಶಪ್ರೇಮಿ ಭಾಗ ಸಿಂಗ್ ಪಠ್ಯವನ್ನು ತೆಗೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್ಎಫ್ಐ ರಾಜ್ಯಾಧ್ಯಕ್ಷರು ಅಮರೇಶ ಕಡಗದ ಮಾತನಾಡಿ, “2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಸೇರಿಸಲಾಗಿದೆ. ಈ ಪಠ್ಯದಲ್ಲಿ ಆರೆಸ್ಸೆಸ್‌‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತಿಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಕೆ. ವಾಸುದೇವರೆಡ್ಡಿ ಮಾತನಾಡಿ, “ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರ್ಎಸ್ಎಸ್ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ. ಇದರ ಭಾಗವಾಗಿ ಪಠ್ಯಪುಸ್ತಕದಲ್ಲಿ 5ನೇ ಪಾಠವಾಗಿ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಪಾಠವನ್ನು ಸೇರಿಸಲಾಗಿದೆ. ಈ ಆದರ್ಶ ಪುರುಷ ಸಂಘಪರಿವಾರದವರಿಗೆ ಮಾತ್ರ. ದೇಶಕ್ಕೆ ಭಗತ್ ಸಿಂಗ್, ಮಹಾತ್ಮ ಗಾಂಧಿ,ಅಂಬೇಡ್ಕರ್ , ಬಸವಣ್ಣ ರಂತಹವರು ಆದರ್ಶ ಆಗಿದ್ದಾರೆ” ಎಂದು ಹೇಳಿದ್ದಾರೆ.

ಹತ್ತನೇ ತರಗತಿಯ ಈ ವರ್ಷದ ಪರಿಷ್ಕೃತ ಪಠ್ಯದಲ್ಲಿ, ಪ್ರಗತಿಪರ ಸಾಹಿತಿಗಳಾದ ಪಿ. ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಜಿ. ರಾಮಕೃಷ್ಣ ಅವರ ‘ಭಗತ್ ಸಿಂಗ್’, ಸಾರಾ ಅಬೂಬಕ್ಕರ್ ಅವರ ‘ಯುದ್ಧ’, ಎ.ಎನ್. ಮೂರ್ತಿ ರಾವ್ ಅವರ ‘ವ್ಯಾಘ್ರ ಕಥೆ’ ಮತ್ತು ಶಿವಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ಯನ್ನುಪಾಠಗಳನ್ನು ಕೈಬಿಡಲಾಗಿದೆ. ಬದಲಿಗೆ ಬರಹಗಾರ ಶಿವಾನಂದ ಕಳವೆ ಅವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’, ಎಂ. ಗೋವಿಂದ ಪೈ ಅವರ ‘ನಾನು ಪ್ರಾಸ ಬಿಟ್ಟ ಕಥೆ’, ವೇದ ವಿದ್ವಾಂಸರಾದ ದಿವಂಗತ ಬನ್ನಂಜೆ ಗೋವಿಂದಾಚಾರ್ಯರ ‘ಶುಕನಾಶನ ಉಪದೇಶ’ ಮತ್ತು ಶತಾವಧಾನಿ ಆರ್. ಗಣೇಶ್ ಅವರ “ಶ್ರೇಷ್ಠ ಭಾರತೀಯ ಚಿಂತನೆಗಳು” ಸೇರಿಸಲಾಗಿದೆ ಸೇರಿಸಲಾಗಿದೆ.

“ಪಠ್ಯ ಪುಸ್ತಕ ಪುನಃ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದಂತೆ ಹೆಡ್ಗೆವಾರ್ ಅವರನ್ನು ಬರಹಗಾರರಾಗಿ ಆಯ್ಕೆ ಮಾಡಿದ್ದೇವೆ ಹೊರತು ಅವರ ಸಿದ್ಧಾಂತ ಅಥವಾ ಸಂಘಟನೆಯ ಆಧಾರದ ಮೇಲೆ ಅಲ್ಲ ಎಂದು ತಿಳಿಸಿದ್ದಾರೆ. ಇದು ಒಂದು ಕಪಟತನವಾಗಿದ್ದು, ಕೋಮುವಾದ ಹರಡಿಸುವ ಹೇಳಿಕೆ ಆಗಿದೆ. ಈ ಪಠ್ಯ ವಿಧ್ಯಾರ್ಥಿಗಳು ಓದಿದರೆ ನಾಡಿನ ಸೌಹಾರ್ದತೆ ನಾಶವಾಗಲಿದೆ. ಯಾವುದೇ ವ್ಯಕ್ತಿಯ ಬರಹ ಸೈದ್ದಾಂತಿಕ ನೆಲೆಯಲ್ಲಿಯೇ ಗುರುತಿಸಬೇಕೆ ವಿನಹಃ ಅವರ ಬರಹಗಾರ ಎಂಬ ಹಣೆ ಪಟ್ಟೆಯಲ್ಲಿ ಅಲ್ಲಾ ಎಂಬುದು ಸ್ಪಷ್ಟ” ಎಂದು ವಾಸುದೇವ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

“ಅಷ್ಟಕ್ಕೂ ಈ ಹೆಡ್ಗೆವಾರ್ ಯಾವ ಬರಹಗಾರ ಎಂಬ ಬಗ್ಗೆ ರೋಹಿತ ಚಕ್ರತಿರ್ಥ ಅವರೇ ಉತ್ತರಿಸಬೇಕು? ನಾಡಿನಲ್ಲಿ ಅನೇಕ ಬರಹಗಾರರ ಯೋಗ್ಯ ಪಠ್ಯಗಳಿದ್ದರು ಹೆಡಗೇವಾರ್ ಭಾಷಣ ಸೇರಿಸುವ ಅನಿವಾರ್ಯತೆ ಏನಿತ್ತು. ಯಾವ ಸಾಮಾಜಿಕ ನೆಲೆಯಲ್ಲಿ ಅವರು ಸಾಹಿತ್ಯ ಕೃಷಿ ಮಾಡಿದ್ದಾರೆ ಎಂದು ತಿಳಿಸಬೇಕು” ವಾಸುದೇವ ಅವರು ಎಂದು ಸವಾಲು ಹಾಕಿದ್ದಾರೆ.

“ಕನ್ನಡ ನಾಡಿನ ಹಲವು ಬರಹಗಾರರ ಪಠ್ಯ ಇರಬೇಕಿತ್ತು. ಬದಲಿಗೆ ಸಂಘಪರಿವಾರದ ಸಂಸ್ಥಾಪಕನನ್ನು ಪರಿಚಯಿಸಿ ಶಿಕ್ಷಣದ ಕೇಸರೀಕರಣ, ಕೋಮುವಾದೀಕರಣ ಮೂಲಕ ವಿಷ ಬೀಜ ಬಿತ್ತುವ ಕೆಲಸಕ್ಕೆ ರಾಜ್ಯ ಬಿಜೆಪಿ ಸರ್ಕಾರ ಕೈ ಹಾಕಿರುವುದಕ್ಕೆ ನಾಡಿನ ಪ್ರಜ್ಞಾವಂತ ಜನರ ವಿರೋಧವಿದೆ. ಈ ಕಪಟತೆ ಹೆಚ್ಚು ದಿನ ನಡೆಯುವುದಿಲ್ಲ. ಹೆಡ್ಗೆವಾರ್‌ ಸಂಘದ ಸಂಸ್ಥಾಪಕರಾಗಿ ರೋಹಿತ ಚಕ್ರತಿರ್ಥ ಅವರಿಗೆ ಆದರ್ಶ ಆಗಿರಬಹುದು ಆದರೆ ದೇಶದ ಜನತೆಗಲ್ಲಾ” ಎಂದು ಅವರು ಕಿಡಿ ಕಾರಿದ್ದಾರೆ.

ಹೆಡ್ಗೆವಾರ್ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣ ಸಂಘ ಪರಿವಾರಕ್ಕೆ ಆದರ್ಶ ಅನಿಸಬಹುದೇ ಹೊರತು, ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ರಾಜ್ಯ ಸಮಿತಿ ಹೇಳಿದ್ದು, “ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯತಾವತ್ತಾಗಿ ಜಾರಿ ಮಾಡಬೇಕು. ಜಾರಿ ಮಾಡದಿದ್ದರೆ ಎಸ್ ಎಫ್ ಐ ಸಾರ್ವಜನಿಕರು, ದೇಶಪ್ರೇಮಿಗಳು, ಶಿಕ್ಷಣ ಪ್ರೇಮಿಗಳ, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಪಾಲಕರನ್ನು ಒಳಗೊಂಡು ರಾಜ್ಯದಾದ್ಯಂತ ತೀವ್ರ ಹೋರಾಟಕ್ಕೆ ಮುಂದಾಗುತ್ತದೆ” ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಪ್ರತಿಭಟನೆಯಲ್ಲಿ ಎಸ್ಎಸ್ಐ ರಾಜ್ಯ ಉಪಾಧ್ಯಕ್ಷರು ದಿಲಿಪ್ ಶೆಟ್ಟಿ, ರಾಜ್ಯ ಪದಾಧಿಕಾರಿಗಳಾದ ಸೋಮಶೇಖರ್, ಶಿವಪ್ಪ, ದೊಡ್ಡ ಬಸವರಾಜ್, ಗಣೇಶ್, ಅಂಕಿತಾ, ರಾಥೋಡ್ , ಬಸವರಾಜ್ ಭೋವಿ, ಆನಂದ್, ರಾಜಶ್ವೇರಿ, ಅಭಿಷೇಕ್, ಮಹೇಶ್ ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...