Homeಕರ್ನಾಟಕಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ...

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ ಸರ್ಕಾರದ ವಿರುದ್ದ ಎಸ್‌ಎಫ್‌ಐ ಆಕ್ರೋಶ

- Advertisement -
- Advertisement -

ರಾಜ್ಯದ ಪಠ್ಯ ಪುಸ್ತಕದಲ್ಲಿ ಸ್ವಾತಂತ್ಯ ಹೋರಾಟಗಾರ ಭಗತ್‌ ಸಿಂಗ್ ಪಾಠ ಸೇರಿ ಅನೇಕ ಪ್ರಗತಿಪರ ಚಿಂತನೆಯ ಪೂರಕ ಪಾಠಗಳನ್ನು ಕೈ ಬಿಟ್ಟು ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಹಾಗೂ ಶಿಕ್ಷಣದ ಕೇಸರೀಕರಣ ಖಂಡಿಸಿ ಎಸ್ಎಫ್ಐ ರಾಜ್ಯ ಸಮಿತಿ ಮಂಗಳವಾರ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಎದುರು ಪ್ರತಿಭಟನೆ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್. ವಿಶಾಲ್ ರವರ ಮೂಲಕ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣನ್, “ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು, ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೇವಾರ್‌ ಅವರ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಬಿಜೆಪಿ ವಸಾಹತುಶಾಹಿ ಬ್ರಿಟಿಷರ ಜೊತೆಗೆ ರಾಜಿಯಾದ ಸಾವರ್ಕರ್ ಸಂತತಿ ಆದ್ದರಿಂದಲೇ ಅಪ್ಪಟ ದೇಶಪ್ರೇಮಿ ಭಾಗ ಸಿಂಗ್ ಪಠ್ಯವನ್ನು ತೆಗೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್ಎಫ್ಐ ರಾಜ್ಯಾಧ್ಯಕ್ಷರು ಅಮರೇಶ ಕಡಗದ ಮಾತನಾಡಿ, “2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಸೇರಿಸಲಾಗಿದೆ. ಈ ಪಠ್ಯದಲ್ಲಿ ಆರೆಸ್ಸೆಸ್‌‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತಿಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಕೆ. ವಾಸುದೇವರೆಡ್ಡಿ ಮಾತನಾಡಿ, “ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರ್ಎಸ್ಎಸ್ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ. ಇದರ ಭಾಗವಾಗಿ ಪಠ್ಯಪುಸ್ತಕದಲ್ಲಿ 5ನೇ ಪಾಠವಾಗಿ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಪಾಠವನ್ನು ಸೇರಿಸಲಾಗಿದೆ. ಈ ಆದರ್ಶ ಪುರುಷ ಸಂಘಪರಿವಾರದವರಿಗೆ ಮಾತ್ರ. ದೇಶಕ್ಕೆ ಭಗತ್ ಸಿಂಗ್, ಮಹಾತ್ಮ ಗಾಂಧಿ,ಅಂಬೇಡ್ಕರ್ , ಬಸವಣ್ಣ ರಂತಹವರು ಆದರ್ಶ ಆಗಿದ್ದಾರೆ” ಎಂದು ಹೇಳಿದ್ದಾರೆ.

ಹತ್ತನೇ ತರಗತಿಯ ಈ ವರ್ಷದ ಪರಿಷ್ಕೃತ ಪಠ್ಯದಲ್ಲಿ, ಪ್ರಗತಿಪರ ಸಾಹಿತಿಗಳಾದ ಪಿ. ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಜಿ. ರಾಮಕೃಷ್ಣ ಅವರ ‘ಭಗತ್ ಸಿಂಗ್’, ಸಾರಾ ಅಬೂಬಕ್ಕರ್ ಅವರ ‘ಯುದ್ಧ’, ಎ.ಎನ್. ಮೂರ್ತಿ ರಾವ್ ಅವರ ‘ವ್ಯಾಘ್ರ ಕಥೆ’ ಮತ್ತು ಶಿವಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ಯನ್ನುಪಾಠಗಳನ್ನು ಕೈಬಿಡಲಾಗಿದೆ. ಬದಲಿಗೆ ಬರಹಗಾರ ಶಿವಾನಂದ ಕಳವೆ ಅವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’, ಎಂ. ಗೋವಿಂದ ಪೈ ಅವರ ‘ನಾನು ಪ್ರಾಸ ಬಿಟ್ಟ ಕಥೆ’, ವೇದ ವಿದ್ವಾಂಸರಾದ ದಿವಂಗತ ಬನ್ನಂಜೆ ಗೋವಿಂದಾಚಾರ್ಯರ ‘ಶುಕನಾಶನ ಉಪದೇಶ’ ಮತ್ತು ಶತಾವಧಾನಿ ಆರ್. ಗಣೇಶ್ ಅವರ “ಶ್ರೇಷ್ಠ ಭಾರತೀಯ ಚಿಂತನೆಗಳು” ಸೇರಿಸಲಾಗಿದೆ ಸೇರಿಸಲಾಗಿದೆ.

“ಪಠ್ಯ ಪುಸ್ತಕ ಪುನಃ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದಂತೆ ಹೆಡ್ಗೆವಾರ್ ಅವರನ್ನು ಬರಹಗಾರರಾಗಿ ಆಯ್ಕೆ ಮಾಡಿದ್ದೇವೆ ಹೊರತು ಅವರ ಸಿದ್ಧಾಂತ ಅಥವಾ ಸಂಘಟನೆಯ ಆಧಾರದ ಮೇಲೆ ಅಲ್ಲ ಎಂದು ತಿಳಿಸಿದ್ದಾರೆ. ಇದು ಒಂದು ಕಪಟತನವಾಗಿದ್ದು, ಕೋಮುವಾದ ಹರಡಿಸುವ ಹೇಳಿಕೆ ಆಗಿದೆ. ಈ ಪಠ್ಯ ವಿಧ್ಯಾರ್ಥಿಗಳು ಓದಿದರೆ ನಾಡಿನ ಸೌಹಾರ್ದತೆ ನಾಶವಾಗಲಿದೆ. ಯಾವುದೇ ವ್ಯಕ್ತಿಯ ಬರಹ ಸೈದ್ದಾಂತಿಕ ನೆಲೆಯಲ್ಲಿಯೇ ಗುರುತಿಸಬೇಕೆ ವಿನಹಃ ಅವರ ಬರಹಗಾರ ಎಂಬ ಹಣೆ ಪಟ್ಟೆಯಲ್ಲಿ ಅಲ್ಲಾ ಎಂಬುದು ಸ್ಪಷ್ಟ” ಎಂದು ವಾಸುದೇವ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

“ಅಷ್ಟಕ್ಕೂ ಈ ಹೆಡ್ಗೆವಾರ್ ಯಾವ ಬರಹಗಾರ ಎಂಬ ಬಗ್ಗೆ ರೋಹಿತ ಚಕ್ರತಿರ್ಥ ಅವರೇ ಉತ್ತರಿಸಬೇಕು? ನಾಡಿನಲ್ಲಿ ಅನೇಕ ಬರಹಗಾರರ ಯೋಗ್ಯ ಪಠ್ಯಗಳಿದ್ದರು ಹೆಡಗೇವಾರ್ ಭಾಷಣ ಸೇರಿಸುವ ಅನಿವಾರ್ಯತೆ ಏನಿತ್ತು. ಯಾವ ಸಾಮಾಜಿಕ ನೆಲೆಯಲ್ಲಿ ಅವರು ಸಾಹಿತ್ಯ ಕೃಷಿ ಮಾಡಿದ್ದಾರೆ ಎಂದು ತಿಳಿಸಬೇಕು” ವಾಸುದೇವ ಅವರು ಎಂದು ಸವಾಲು ಹಾಕಿದ್ದಾರೆ.

“ಕನ್ನಡ ನಾಡಿನ ಹಲವು ಬರಹಗಾರರ ಪಠ್ಯ ಇರಬೇಕಿತ್ತು. ಬದಲಿಗೆ ಸಂಘಪರಿವಾರದ ಸಂಸ್ಥಾಪಕನನ್ನು ಪರಿಚಯಿಸಿ ಶಿಕ್ಷಣದ ಕೇಸರೀಕರಣ, ಕೋಮುವಾದೀಕರಣ ಮೂಲಕ ವಿಷ ಬೀಜ ಬಿತ್ತುವ ಕೆಲಸಕ್ಕೆ ರಾಜ್ಯ ಬಿಜೆಪಿ ಸರ್ಕಾರ ಕೈ ಹಾಕಿರುವುದಕ್ಕೆ ನಾಡಿನ ಪ್ರಜ್ಞಾವಂತ ಜನರ ವಿರೋಧವಿದೆ. ಈ ಕಪಟತೆ ಹೆಚ್ಚು ದಿನ ನಡೆಯುವುದಿಲ್ಲ. ಹೆಡ್ಗೆವಾರ್‌ ಸಂಘದ ಸಂಸ್ಥಾಪಕರಾಗಿ ರೋಹಿತ ಚಕ್ರತಿರ್ಥ ಅವರಿಗೆ ಆದರ್ಶ ಆಗಿರಬಹುದು ಆದರೆ ದೇಶದ ಜನತೆಗಲ್ಲಾ” ಎಂದು ಅವರು ಕಿಡಿ ಕಾರಿದ್ದಾರೆ.

ಹೆಡ್ಗೆವಾರ್ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣ ಸಂಘ ಪರಿವಾರಕ್ಕೆ ಆದರ್ಶ ಅನಿಸಬಹುದೇ ಹೊರತು, ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ರಾಜ್ಯ ಸಮಿತಿ ಹೇಳಿದ್ದು, “ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯತಾವತ್ತಾಗಿ ಜಾರಿ ಮಾಡಬೇಕು. ಜಾರಿ ಮಾಡದಿದ್ದರೆ ಎಸ್ ಎಫ್ ಐ ಸಾರ್ವಜನಿಕರು, ದೇಶಪ್ರೇಮಿಗಳು, ಶಿಕ್ಷಣ ಪ್ರೇಮಿಗಳ, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಪಾಲಕರನ್ನು ಒಳಗೊಂಡು ರಾಜ್ಯದಾದ್ಯಂತ ತೀವ್ರ ಹೋರಾಟಕ್ಕೆ ಮುಂದಾಗುತ್ತದೆ” ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಪ್ರತಿಭಟನೆಯಲ್ಲಿ ಎಸ್ಎಸ್ಐ ರಾಜ್ಯ ಉಪಾಧ್ಯಕ್ಷರು ದಿಲಿಪ್ ಶೆಟ್ಟಿ, ರಾಜ್ಯ ಪದಾಧಿಕಾರಿಗಳಾದ ಸೋಮಶೇಖರ್, ಶಿವಪ್ಪ, ದೊಡ್ಡ ಬಸವರಾಜ್, ಗಣೇಶ್, ಅಂಕಿತಾ, ರಾಥೋಡ್ , ಬಸವರಾಜ್ ಭೋವಿ, ಆನಂದ್, ರಾಜಶ್ವೇರಿ, ಅಭಿಷೇಕ್, ಮಹೇಶ್ ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...