Homeಕರ್ನಾಟಕಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ...

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ ಸರ್ಕಾರದ ವಿರುದ್ದ ಎಸ್‌ಎಫ್‌ಐ ಆಕ್ರೋಶ

- Advertisement -
- Advertisement -

ರಾಜ್ಯದ ಪಠ್ಯ ಪುಸ್ತಕದಲ್ಲಿ ಸ್ವಾತಂತ್ಯ ಹೋರಾಟಗಾರ ಭಗತ್‌ ಸಿಂಗ್ ಪಾಠ ಸೇರಿ ಅನೇಕ ಪ್ರಗತಿಪರ ಚಿಂತನೆಯ ಪೂರಕ ಪಾಠಗಳನ್ನು ಕೈ ಬಿಟ್ಟು ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಹಾಗೂ ಶಿಕ್ಷಣದ ಕೇಸರೀಕರಣ ಖಂಡಿಸಿ ಎಸ್ಎಫ್ಐ ರಾಜ್ಯ ಸಮಿತಿ ಮಂಗಳವಾರ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಎದುರು ಪ್ರತಿಭಟನೆ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್. ವಿಶಾಲ್ ರವರ ಮೂಲಕ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣನ್, “ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು, ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೇವಾರ್‌ ಅವರ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಬಿಜೆಪಿ ವಸಾಹತುಶಾಹಿ ಬ್ರಿಟಿಷರ ಜೊತೆಗೆ ರಾಜಿಯಾದ ಸಾವರ್ಕರ್ ಸಂತತಿ ಆದ್ದರಿಂದಲೇ ಅಪ್ಪಟ ದೇಶಪ್ರೇಮಿ ಭಾಗ ಸಿಂಗ್ ಪಠ್ಯವನ್ನು ತೆಗೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್ಎಫ್ಐ ರಾಜ್ಯಾಧ್ಯಕ್ಷರು ಅಮರೇಶ ಕಡಗದ ಮಾತನಾಡಿ, “2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಸೇರಿಸಲಾಗಿದೆ. ಈ ಪಠ್ಯದಲ್ಲಿ ಆರೆಸ್ಸೆಸ್‌‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತಿಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಕೆ. ವಾಸುದೇವರೆಡ್ಡಿ ಮಾತನಾಡಿ, “ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರ್ಎಸ್ಎಸ್ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ. ಇದರ ಭಾಗವಾಗಿ ಪಠ್ಯಪುಸ್ತಕದಲ್ಲಿ 5ನೇ ಪಾಠವಾಗಿ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಪಾಠವನ್ನು ಸೇರಿಸಲಾಗಿದೆ. ಈ ಆದರ್ಶ ಪುರುಷ ಸಂಘಪರಿವಾರದವರಿಗೆ ಮಾತ್ರ. ದೇಶಕ್ಕೆ ಭಗತ್ ಸಿಂಗ್, ಮಹಾತ್ಮ ಗಾಂಧಿ,ಅಂಬೇಡ್ಕರ್ , ಬಸವಣ್ಣ ರಂತಹವರು ಆದರ್ಶ ಆಗಿದ್ದಾರೆ” ಎಂದು ಹೇಳಿದ್ದಾರೆ.

ಹತ್ತನೇ ತರಗತಿಯ ಈ ವರ್ಷದ ಪರಿಷ್ಕೃತ ಪಠ್ಯದಲ್ಲಿ, ಪ್ರಗತಿಪರ ಸಾಹಿತಿಗಳಾದ ಪಿ. ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಜಿ. ರಾಮಕೃಷ್ಣ ಅವರ ‘ಭಗತ್ ಸಿಂಗ್’, ಸಾರಾ ಅಬೂಬಕ್ಕರ್ ಅವರ ‘ಯುದ್ಧ’, ಎ.ಎನ್. ಮೂರ್ತಿ ರಾವ್ ಅವರ ‘ವ್ಯಾಘ್ರ ಕಥೆ’ ಮತ್ತು ಶಿವಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ಯನ್ನುಪಾಠಗಳನ್ನು ಕೈಬಿಡಲಾಗಿದೆ. ಬದಲಿಗೆ ಬರಹಗಾರ ಶಿವಾನಂದ ಕಳವೆ ಅವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’, ಎಂ. ಗೋವಿಂದ ಪೈ ಅವರ ‘ನಾನು ಪ್ರಾಸ ಬಿಟ್ಟ ಕಥೆ’, ವೇದ ವಿದ್ವಾಂಸರಾದ ದಿವಂಗತ ಬನ್ನಂಜೆ ಗೋವಿಂದಾಚಾರ್ಯರ ‘ಶುಕನಾಶನ ಉಪದೇಶ’ ಮತ್ತು ಶತಾವಧಾನಿ ಆರ್. ಗಣೇಶ್ ಅವರ “ಶ್ರೇಷ್ಠ ಭಾರತೀಯ ಚಿಂತನೆಗಳು” ಸೇರಿಸಲಾಗಿದೆ ಸೇರಿಸಲಾಗಿದೆ.

“ಪಠ್ಯ ಪುಸ್ತಕ ಪುನಃ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದಂತೆ ಹೆಡ್ಗೆವಾರ್ ಅವರನ್ನು ಬರಹಗಾರರಾಗಿ ಆಯ್ಕೆ ಮಾಡಿದ್ದೇವೆ ಹೊರತು ಅವರ ಸಿದ್ಧಾಂತ ಅಥವಾ ಸಂಘಟನೆಯ ಆಧಾರದ ಮೇಲೆ ಅಲ್ಲ ಎಂದು ತಿಳಿಸಿದ್ದಾರೆ. ಇದು ಒಂದು ಕಪಟತನವಾಗಿದ್ದು, ಕೋಮುವಾದ ಹರಡಿಸುವ ಹೇಳಿಕೆ ಆಗಿದೆ. ಈ ಪಠ್ಯ ವಿಧ್ಯಾರ್ಥಿಗಳು ಓದಿದರೆ ನಾಡಿನ ಸೌಹಾರ್ದತೆ ನಾಶವಾಗಲಿದೆ. ಯಾವುದೇ ವ್ಯಕ್ತಿಯ ಬರಹ ಸೈದ್ದಾಂತಿಕ ನೆಲೆಯಲ್ಲಿಯೇ ಗುರುತಿಸಬೇಕೆ ವಿನಹಃ ಅವರ ಬರಹಗಾರ ಎಂಬ ಹಣೆ ಪಟ್ಟೆಯಲ್ಲಿ ಅಲ್ಲಾ ಎಂಬುದು ಸ್ಪಷ್ಟ” ಎಂದು ವಾಸುದೇವ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

“ಅಷ್ಟಕ್ಕೂ ಈ ಹೆಡ್ಗೆವಾರ್ ಯಾವ ಬರಹಗಾರ ಎಂಬ ಬಗ್ಗೆ ರೋಹಿತ ಚಕ್ರತಿರ್ಥ ಅವರೇ ಉತ್ತರಿಸಬೇಕು? ನಾಡಿನಲ್ಲಿ ಅನೇಕ ಬರಹಗಾರರ ಯೋಗ್ಯ ಪಠ್ಯಗಳಿದ್ದರು ಹೆಡಗೇವಾರ್ ಭಾಷಣ ಸೇರಿಸುವ ಅನಿವಾರ್ಯತೆ ಏನಿತ್ತು. ಯಾವ ಸಾಮಾಜಿಕ ನೆಲೆಯಲ್ಲಿ ಅವರು ಸಾಹಿತ್ಯ ಕೃಷಿ ಮಾಡಿದ್ದಾರೆ ಎಂದು ತಿಳಿಸಬೇಕು” ವಾಸುದೇವ ಅವರು ಎಂದು ಸವಾಲು ಹಾಕಿದ್ದಾರೆ.

“ಕನ್ನಡ ನಾಡಿನ ಹಲವು ಬರಹಗಾರರ ಪಠ್ಯ ಇರಬೇಕಿತ್ತು. ಬದಲಿಗೆ ಸಂಘಪರಿವಾರದ ಸಂಸ್ಥಾಪಕನನ್ನು ಪರಿಚಯಿಸಿ ಶಿಕ್ಷಣದ ಕೇಸರೀಕರಣ, ಕೋಮುವಾದೀಕರಣ ಮೂಲಕ ವಿಷ ಬೀಜ ಬಿತ್ತುವ ಕೆಲಸಕ್ಕೆ ರಾಜ್ಯ ಬಿಜೆಪಿ ಸರ್ಕಾರ ಕೈ ಹಾಕಿರುವುದಕ್ಕೆ ನಾಡಿನ ಪ್ರಜ್ಞಾವಂತ ಜನರ ವಿರೋಧವಿದೆ. ಈ ಕಪಟತೆ ಹೆಚ್ಚು ದಿನ ನಡೆಯುವುದಿಲ್ಲ. ಹೆಡ್ಗೆವಾರ್‌ ಸಂಘದ ಸಂಸ್ಥಾಪಕರಾಗಿ ರೋಹಿತ ಚಕ್ರತಿರ್ಥ ಅವರಿಗೆ ಆದರ್ಶ ಆಗಿರಬಹುದು ಆದರೆ ದೇಶದ ಜನತೆಗಲ್ಲಾ” ಎಂದು ಅವರು ಕಿಡಿ ಕಾರಿದ್ದಾರೆ.

ಹೆಡ್ಗೆವಾರ್ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣ ಸಂಘ ಪರಿವಾರಕ್ಕೆ ಆದರ್ಶ ಅನಿಸಬಹುದೇ ಹೊರತು, ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ರಾಜ್ಯ ಸಮಿತಿ ಹೇಳಿದ್ದು, “ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯತಾವತ್ತಾಗಿ ಜಾರಿ ಮಾಡಬೇಕು. ಜಾರಿ ಮಾಡದಿದ್ದರೆ ಎಸ್ ಎಫ್ ಐ ಸಾರ್ವಜನಿಕರು, ದೇಶಪ್ರೇಮಿಗಳು, ಶಿಕ್ಷಣ ಪ್ರೇಮಿಗಳ, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಪಾಲಕರನ್ನು ಒಳಗೊಂಡು ರಾಜ್ಯದಾದ್ಯಂತ ತೀವ್ರ ಹೋರಾಟಕ್ಕೆ ಮುಂದಾಗುತ್ತದೆ” ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಪ್ರತಿಭಟನೆಯಲ್ಲಿ ಎಸ್ಎಸ್ಐ ರಾಜ್ಯ ಉಪಾಧ್ಯಕ್ಷರು ದಿಲಿಪ್ ಶೆಟ್ಟಿ, ರಾಜ್ಯ ಪದಾಧಿಕಾರಿಗಳಾದ ಸೋಮಶೇಖರ್, ಶಿವಪ್ಪ, ದೊಡ್ಡ ಬಸವರಾಜ್, ಗಣೇಶ್, ಅಂಕಿತಾ, ರಾಥೋಡ್ , ಬಸವರಾಜ್ ಭೋವಿ, ಆನಂದ್, ರಾಜಶ್ವೇರಿ, ಅಭಿಷೇಕ್, ಮಹೇಶ್ ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...