Homeಕರ್ನಾಟಕಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ...

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ ಬಿಟ್ಟ ಸರ್ಕಾರದ ವಿರುದ್ದ ಎಸ್‌ಎಫ್‌ಐ ಆಕ್ರೋಶ

- Advertisement -
- Advertisement -

ರಾಜ್ಯದ ಪಠ್ಯ ಪುಸ್ತಕದಲ್ಲಿ ಸ್ವಾತಂತ್ಯ ಹೋರಾಟಗಾರ ಭಗತ್‌ ಸಿಂಗ್ ಪಾಠ ಸೇರಿ ಅನೇಕ ಪ್ರಗತಿಪರ ಚಿಂತನೆಯ ಪೂರಕ ಪಾಠಗಳನ್ನು ಕೈ ಬಿಟ್ಟು ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಹಾಗೂ ಶಿಕ್ಷಣದ ಕೇಸರೀಕರಣ ಖಂಡಿಸಿ ಎಸ್ಎಫ್ಐ ರಾಜ್ಯ ಸಮಿತಿ ಮಂಗಳವಾರ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಎದುರು ಪ್ರತಿಭಟನೆ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಆರ್. ವಿಶಾಲ್ ರವರ ಮೂಲಕ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣನ್, “ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪಾಠವನ್ನು 10ನೇ ತರಗತಿ ಪಠ್ಯದಿಂದ ಕೈ ಬಿಟ್ಟು, ಸ್ವಾತಂತ್ರ್ಯ ಚಳುವಳಿಯಿಂದ ದೂರವಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೆ.ಬಿ.ಹೆಡಗೇವಾರ್‌ ಅವರ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಬಿಜೆಪಿ ವಸಾಹತುಶಾಹಿ ಬ್ರಿಟಿಷರ ಜೊತೆಗೆ ರಾಜಿಯಾದ ಸಾವರ್ಕರ್ ಸಂತತಿ ಆದ್ದರಿಂದಲೇ ಅಪ್ಪಟ ದೇಶಪ್ರೇಮಿ ಭಾಗ ಸಿಂಗ್ ಪಠ್ಯವನ್ನು ತೆಗೆದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸ್ಎಫ್ಐ ರಾಜ್ಯಾಧ್ಯಕ್ಷರು ಅಮರೇಶ ಕಡಗದ ಮಾತನಾಡಿ, “2022-23ರ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಎಂಬ ಭಾಷಣವನ್ನು ಸೇರಿಸಲಾಗಿದೆ. ಈ ಪಠ್ಯದಲ್ಲಿ ಆರೆಸ್ಸೆಸ್‌‌ ಶಾಖೆಯ ಕಾರ್ಯವಿಧಾನ, ಭಗವಾಧ್ವಜ ಗೌರವಿಸಬೇಕು ಎಂದೆಲ್ಲಾ ಹೇಳಲಾಗಿದೆ. ಇದು ರಾಷ್ಟ್ರ ಧ್ವಜ ಮತ್ತು ಸಂವಿಧಾನಕ್ಕೆ ವಿರುದ್ದವಾದದ್ದು. ಇತ್ತಿಚೆಗೆ ಬಿಜೆಪಿ ಈಶ್ವರಪ್ಪ ಹೇಳಿದ ಮಾತಿನಂತೆ ಬಿಜೆಪಿ ಕೇಸರಿ ಧ್ವಜವೇ ದೇಶದ ಧ್ವಜ ಎಂದು ಬಿಂಬಿಸುವ ರೀತಿಯಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಕೆ. ವಾಸುದೇವರೆಡ್ಡಿ ಮಾತನಾಡಿ, “ನೂತನ ಶಿಕ್ಷಣ ನೀತಿಯ ಗುರಿಯೇ ಶಿಕ್ಷಣದ ಕೋಮುವಾದೀಕರಣ ಆಗಿರುವುದರಿಂದ ಎನ್ಇಪಿ ಜಾರಿ ಅಂದರೆ ರಾಜ್ಯದ ವಿದ್ಯಾರ್ಥಿಗಳು ಓದುವ ಪಠ್ಯಪುಸ್ತಕಗಳಲ್ಲಿ ಬಿಜೆಪಿ ಆರ್ಎಸ್ಎಸ್ ಕೋಮುವಾದಿ ವಿಚಾರಗಳನ್ನು ತುಂಬುವುದಾಗಿದೆ. ಇದರ ಭಾಗವಾಗಿ ಪಠ್ಯಪುಸ್ತಕದಲ್ಲಿ 5ನೇ ಪಾಠವಾಗಿ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’ ಪಾಠವನ್ನು ಸೇರಿಸಲಾಗಿದೆ. ಈ ಆದರ್ಶ ಪುರುಷ ಸಂಘಪರಿವಾರದವರಿಗೆ ಮಾತ್ರ. ದೇಶಕ್ಕೆ ಭಗತ್ ಸಿಂಗ್, ಮಹಾತ್ಮ ಗಾಂಧಿ,ಅಂಬೇಡ್ಕರ್ , ಬಸವಣ್ಣ ರಂತಹವರು ಆದರ್ಶ ಆಗಿದ್ದಾರೆ” ಎಂದು ಹೇಳಿದ್ದಾರೆ.

ಹತ್ತನೇ ತರಗತಿಯ ಈ ವರ್ಷದ ಪರಿಷ್ಕೃತ ಪಠ್ಯದಲ್ಲಿ, ಪ್ರಗತಿಪರ ಸಾಹಿತಿಗಳಾದ ಪಿ. ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಜಿ. ರಾಮಕೃಷ್ಣ ಅವರ ‘ಭಗತ್ ಸಿಂಗ್’, ಸಾರಾ ಅಬೂಬಕ್ಕರ್ ಅವರ ‘ಯುದ್ಧ’, ಎ.ಎನ್. ಮೂರ್ತಿ ರಾವ್ ಅವರ ‘ವ್ಯಾಘ್ರ ಕಥೆ’ ಮತ್ತು ಶಿವಕೋಟ್ಯಾಚಾರ್ಯರ ‘ಸುಕುಮಾರ ಸ್ವಾಮಿ ಕಥೆ’ಯನ್ನುಪಾಠಗಳನ್ನು ಕೈಬಿಡಲಾಗಿದೆ. ಬದಲಿಗೆ ಬರಹಗಾರ ಶಿವಾನಂದ ಕಳವೆ ಅವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’, ಎಂ. ಗೋವಿಂದ ಪೈ ಅವರ ‘ನಾನು ಪ್ರಾಸ ಬಿಟ್ಟ ಕಥೆ’, ವೇದ ವಿದ್ವಾಂಸರಾದ ದಿವಂಗತ ಬನ್ನಂಜೆ ಗೋವಿಂದಾಚಾರ್ಯರ ‘ಶುಕನಾಶನ ಉಪದೇಶ’ ಮತ್ತು ಶತಾವಧಾನಿ ಆರ್. ಗಣೇಶ್ ಅವರ “ಶ್ರೇಷ್ಠ ಭಾರತೀಯ ಚಿಂತನೆಗಳು” ಸೇರಿಸಲಾಗಿದೆ ಸೇರಿಸಲಾಗಿದೆ.

“ಪಠ್ಯ ಪುಸ್ತಕ ಪುನಃ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದಂತೆ ಹೆಡ್ಗೆವಾರ್ ಅವರನ್ನು ಬರಹಗಾರರಾಗಿ ಆಯ್ಕೆ ಮಾಡಿದ್ದೇವೆ ಹೊರತು ಅವರ ಸಿದ್ಧಾಂತ ಅಥವಾ ಸಂಘಟನೆಯ ಆಧಾರದ ಮೇಲೆ ಅಲ್ಲ ಎಂದು ತಿಳಿಸಿದ್ದಾರೆ. ಇದು ಒಂದು ಕಪಟತನವಾಗಿದ್ದು, ಕೋಮುವಾದ ಹರಡಿಸುವ ಹೇಳಿಕೆ ಆಗಿದೆ. ಈ ಪಠ್ಯ ವಿಧ್ಯಾರ್ಥಿಗಳು ಓದಿದರೆ ನಾಡಿನ ಸೌಹಾರ್ದತೆ ನಾಶವಾಗಲಿದೆ. ಯಾವುದೇ ವ್ಯಕ್ತಿಯ ಬರಹ ಸೈದ್ದಾಂತಿಕ ನೆಲೆಯಲ್ಲಿಯೇ ಗುರುತಿಸಬೇಕೆ ವಿನಹಃ ಅವರ ಬರಹಗಾರ ಎಂಬ ಹಣೆ ಪಟ್ಟೆಯಲ್ಲಿ ಅಲ್ಲಾ ಎಂಬುದು ಸ್ಪಷ್ಟ” ಎಂದು ವಾಸುದೇವ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

“ಅಷ್ಟಕ್ಕೂ ಈ ಹೆಡ್ಗೆವಾರ್ ಯಾವ ಬರಹಗಾರ ಎಂಬ ಬಗ್ಗೆ ರೋಹಿತ ಚಕ್ರತಿರ್ಥ ಅವರೇ ಉತ್ತರಿಸಬೇಕು? ನಾಡಿನಲ್ಲಿ ಅನೇಕ ಬರಹಗಾರರ ಯೋಗ್ಯ ಪಠ್ಯಗಳಿದ್ದರು ಹೆಡಗೇವಾರ್ ಭಾಷಣ ಸೇರಿಸುವ ಅನಿವಾರ್ಯತೆ ಏನಿತ್ತು. ಯಾವ ಸಾಮಾಜಿಕ ನೆಲೆಯಲ್ಲಿ ಅವರು ಸಾಹಿತ್ಯ ಕೃಷಿ ಮಾಡಿದ್ದಾರೆ ಎಂದು ತಿಳಿಸಬೇಕು” ವಾಸುದೇವ ಅವರು ಎಂದು ಸವಾಲು ಹಾಕಿದ್ದಾರೆ.

“ಕನ್ನಡ ನಾಡಿನ ಹಲವು ಬರಹಗಾರರ ಪಠ್ಯ ಇರಬೇಕಿತ್ತು. ಬದಲಿಗೆ ಸಂಘಪರಿವಾರದ ಸಂಸ್ಥಾಪಕನನ್ನು ಪರಿಚಯಿಸಿ ಶಿಕ್ಷಣದ ಕೇಸರೀಕರಣ, ಕೋಮುವಾದೀಕರಣ ಮೂಲಕ ವಿಷ ಬೀಜ ಬಿತ್ತುವ ಕೆಲಸಕ್ಕೆ ರಾಜ್ಯ ಬಿಜೆಪಿ ಸರ್ಕಾರ ಕೈ ಹಾಕಿರುವುದಕ್ಕೆ ನಾಡಿನ ಪ್ರಜ್ಞಾವಂತ ಜನರ ವಿರೋಧವಿದೆ. ಈ ಕಪಟತೆ ಹೆಚ್ಚು ದಿನ ನಡೆಯುವುದಿಲ್ಲ. ಹೆಡ್ಗೆವಾರ್‌ ಸಂಘದ ಸಂಸ್ಥಾಪಕರಾಗಿ ರೋಹಿತ ಚಕ್ರತಿರ್ಥ ಅವರಿಗೆ ಆದರ್ಶ ಆಗಿರಬಹುದು ಆದರೆ ದೇಶದ ಜನತೆಗಲ್ಲಾ” ಎಂದು ಅವರು ಕಿಡಿ ಕಾರಿದ್ದಾರೆ.

ಹೆಡ್ಗೆವಾರ್ ಅವರ ‘ಯಾರಾಗಬೇಕು ಆದರ್ಶ ಪುರುಷ’ ಭಾಷಣ ಸಂಘ ಪರಿವಾರಕ್ಕೆ ಆದರ್ಶ ಅನಿಸಬಹುದೇ ಹೊರತು, ಈ ನಾಡಿನ ವಿದ್ಯಾರ್ಥಿಗಳಿಗಲ್ಲಾ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ) ರಾಜ್ಯ ಸಮಿತಿ ಹೇಳಿದ್ದು, “ತಕ್ಷಣವೇ ಪಠ್ಯವನ್ನು ಮೊದಲಿನಂತೆ ಯತಾವತ್ತಾಗಿ ಜಾರಿ ಮಾಡಬೇಕು. ಜಾರಿ ಮಾಡದಿದ್ದರೆ ಎಸ್ ಎಫ್ ಐ ಸಾರ್ವಜನಿಕರು, ದೇಶಪ್ರೇಮಿಗಳು, ಶಿಕ್ಷಣ ಪ್ರೇಮಿಗಳ, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು, ಪಾಲಕರನ್ನು ಒಳಗೊಂಡು ರಾಜ್ಯದಾದ್ಯಂತ ತೀವ್ರ ಹೋರಾಟಕ್ಕೆ ಮುಂದಾಗುತ್ತದೆ” ಎಂದು ಎಚ್ಚರಿಸಿದೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಪ್ರತಿಭಟನೆಯಲ್ಲಿ ಎಸ್ಎಸ್ಐ ರಾಜ್ಯ ಉಪಾಧ್ಯಕ್ಷರು ದಿಲಿಪ್ ಶೆಟ್ಟಿ, ರಾಜ್ಯ ಪದಾಧಿಕಾರಿಗಳಾದ ಸೋಮಶೇಖರ್, ಶಿವಪ್ಪ, ದೊಡ್ಡ ಬಸವರಾಜ್, ಗಣೇಶ್, ಅಂಕಿತಾ, ರಾಥೋಡ್ , ಬಸವರಾಜ್ ಭೋವಿ, ಆನಂದ್, ರಾಜಶ್ವೇರಿ, ಅಭಿಷೇಕ್, ಮಹೇಶ್ ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...