Homeಮುಖಪುಟಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

ಬಿಜೆಪಿ ಸರ್ಕಾರ ಪ್ರಾಯೋಜಿತ ದ್ವೇಷ ರಾಜಕಾರಣದ ಮಧ್ಯೆ ‘ಸೌಹಾರ್ದ ಯುಗಾದಿ’ ಆಚರಿಸಿದ ರಾಜ್ಯದ ಜನತೆ

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು, ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ನಾಡಿನಾದ್ಯಂತ ಕೋಮು ಸಾಮರಸ್ಯ ಹಾಳುಗೆಡವುತ್ತಿರುವ ಮಧ್ಯೆ, ‘ಸೌಹಾರ್ದ ಕರ್ನಾಟಕ’ ಹಾಗೂ ಇನ್ನಿತರ ಜನಪರ ಸಂಘಟನೆಗಳ ನೇತೃತ್ವದಲ್ಲಿ ಎಲ್ಲಾ ಸಮುದಾಯಗಳ ಜನರು ಒಟ್ಟು ಸೇರಿ ರಾಜ್ಯದಾದ್ಯಂತ ಉಗಾದಿ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಿದ್ದಾರೆ.

‘ಸೌಹಾರ್ದ ಕರ್ನಾಟಕ’ ಹಾಗೂ ಜನಪರ ಸಂಘಟನೆಗಳು ಮತ್ತು ಸಿಪಿಐಎಂ ‘ಸೌಹಾರ್ದ ಯುಗಾದಿ’ಯನ್ನು ರಾಜ್ಯದಾದ್ಯಂತ ಆಚರಿಸಲು ಕರೆ ನೀಡಿತ್ತು. ಈ ಕರೆಗೆ ರಾಜ್ಯವ್ಯಾಪಿ ಉತ್ತಮ ಸ್ಪಂದನೆ ದೊರೆತಿದ್ದು, ಎಲ್ಲಾ ಸಮುದಾಯದ ಜನರು ಒಟ್ಟು ಸೇರಿ ಉಗಾದಿ ಹಬ್ಬವನ್ನು ಆಚರಿಸಿ ಸೌಹಾರ್ದ ಮೆರೆದಿದ್ದಾರೆ. ರಾಜ್ಯದ ಕಲಬುರಗಿ, ಮಂಡ್ಯ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ಕೊಪ್ಪಳ, ಬೆಂಗಳೂರು, ಹಾಸನ, ಬೀದರ್‌, ವಿಜಯಪುರ, ಕೋಲಾರ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎಲ್ಲಾ ಸಮುದಾಯದ ಜನರು ಸೇರಿ ಬೇವು-ಬೆಲ್ಲ ಹಂಚಿ ತಿನ್ನುವ ಮೂಲಕ ಬಿಜೆಪಿಯ ದ್ವೇಷ ರಾಜಕೀಯಕ್ಕೆ ಸೆಡ್ಡುಹೊಡೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ‌ ಸಿಪಿಎಂ ಪಕ್ಷದ ವತಿಯಿಂದ ಮುಸಲ್ಮಾನರೊಂದಿಗೆ ಯುಗಾದಿ ಹಬ್ಬ ಆಚರಿಸಲಾಯಿದೆ.‌ ವಿವಿಧ ಸಮುದಾಯಗಳ, ಸಂಘಟನೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಎಂದು ಪಕ್ಷವು ಹೇಳಿದೆ.

ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ…!

“ತೀರಾ ಭಾವನಾತ್ಮಕವಾಗಿ ಕಾರ್ಯಕ್ರಮ ನಡೆಯಿತು. ಬೇವು ಬೆಲ್ಲವನ್ನು ಮುಸ್ಲಿಮರೊಂದಿಗೆ ಹಿಂದುಗಳು ಹಂಚಿಕೊಂಡರು. ಸರಕಾರವೇ ನಿಂತು ಮುಸಲ್ಮಾನರನ್ನು ಪ್ರತ್ಯೇಕಿಸುವ, ಬಹಿಷ್ಕಾರ ಹಾಕುವ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುವಾಗ ಇದೊಂದು ಪ್ರಾಯೋಗಿಕವಾದ ಮಾದರಿ ಉತ್ತರ. ದುಡಿದುಣ್ಣುವ ಜನರ ಮಧ್ಯೆ ಗೋಡೆ ಕಟ್ಟುವ ಪ್ರಯತ್ನ ನಡೆದಷ್ಟು ನಾವು ಬೆಸೆಯುವ ಕಾರ್ಯವನ್ನು ಮತ್ತಷ್ಟು ಹುರುಪಿ‌ನಿಂದ ನಡೆಸುವೆವು. ಇಂದು ಬಹಳಷ್ಟು ಕಡೆ ಸೌಹಾರ್ದ ಯುಗಾದಿ ಕಾರ್ಯಕ್ರಮ ನಡೆದಿದೆ. ಮುಸ್ಲಿಮರು ಏಕಾಂಗಿಗಳಲ್ಲ. ಅವರೊಂದಿಗೆ ಸೌಹಾರ್ದ ಪ್ರಿಯ ಹಿಂದುಗಳು ಸದಾ ಇರುತ್ತಾರೆ” ಎಂದು ಮಳವಳ್ಳಿ ಸಿಪಿಐಎಂ ಪಕ್ಷದ ಪದಾದಿಕಾರಿಗಳು ಹೇಳಿದ್ದಾರೆ.

ಕಲಬುರಗಿಯ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಯ ಆವರಣದಲ್ಲಿ ಹಿಂದೂ,ಮುಸ್ಲಿಂ, ಕ್ರಿಶ್ಚಿಯನ್ ಬೌದ್ಧ ಧರ್ಮಿಯರು ಸೇರಿದಂತೆ ಹಲವಾರು ಜನರು ಸೇರಿ ಯುಗಾದಿ ಹಬ್ಬವನ್ನು ಆಚರಿಸಿದ್ದಾರೆ.

ಮೈಸೂರಿನಲ್ಲಿ ‘ಸೌಹಾರ್ದ ಕರ್ನಾಟಕ’ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಸೌಹಾರ್ದ ಯುಗಾದಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿಂದೂ ಧರ್ಮಿಯರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮಿಯರೊಂದಿಗೆ ಹಬ್ಬ ಆಚರಿಸಿ ಬೇವು-ಬೆಲ್ಲ, ಹೋಳಿಗೆಯನ್ನು ಪರಸ್ಪರ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ಪಟ್ಟಣದಲ್ಲಿ, ಹಗರಿಬೊಮ್ಮನಹಳ್ಳಿಯಲ್ಲಿ, ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಕೋಲಾರ, ಶ್ರೀನಿವಾಸಪುರ, ಹಾಸನ, ಬೀದರ, ಬಳ್ಳಾರಿ, ವಿಜಯಪುರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಹಬ್ಬವನ್ನು ಎಲ್ಲಾ ಸಮುದಾಯಗಳ ಜನರೊಂದಿಗೆ ಸೇರಿ ಆಚರಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜ್ಯ ರೈತ ಪ್ರಾಂತ ಸಂಘದ ಕಾರ್ಯದರ್ಶಿ ಬಸವರಾಜ್ ಅವರು, “ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಹಿಂದೂ ಮುಸ್ಲಿಮರ ನಡುವೆ ತಾರತಮ್ಯ ಮಾಡುವುದು, ದ್ವೇಷ ಹರಡುವುದನ್ನು ಸರ್ಕಾರವೇ ಮಾಡುತ್ತಿವೆ. ಅದನ್ನು ಮೀರಿ ಈ ಸಂದರ್ಭದಲ್ಲಿ ಭಾವೈಕ್ಯತೆಯನ್ನು ಮರೆಯುವ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ನಾವು ತೀರ್ಮಾನ ಮಾಡಿ, ರಾಜ್ಯದಾದ್ಯಂತ ಸೌಹಾರ್ದ ಯುಗಾದಿ ಎಂದು ಆಚರಿಸಲು ಕರೆ ನೀಡಿದ್ದೆವು” ಎಂದು ಹೇಳಿದ್ದಾರೆ.

“ಕಾರ್ಯಕ್ರಮದಲ್ಲಿ, ಸೌಹಾರ್ದತೆಯ ಪರವಾಗಿ ಇರುವ ಎಲ್ಲಾ ಸಂಘಟನೆಗಳು ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದೆವು. ರಾಜ್ಯದಾದ್ಯಂತ ಈ ಕಾರ್ಯಕ್ರಮ ಯಶಸ್ವಿಯಾಗಿದ್ದು, ಎಲ್ಲಾ ಸಮುದಾಯದ ಜನರು ಕೈ ಕೈ ಹಿಡಿದು ನಾವೆಲ್ಲರೂ ಒಂದೇ ಎಂದು ಸಾರಿ ಸಾಮರಸ್ಯ, ಸೌಹಾರ್ದತೆ ಮತ್ತು ಸಂವಿಧಾನವನ್ನು ಉಳಿಸುವ ಪ್ರತಿಜ್ಞೆ ಮಾಡಿದ್ದಾರೆ” ಎಂದು ಬಸವರಾಜ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....